ಥಾಯ್ಲೆಂಡ್ : ಥಾಯ್ಲೆಂಡ್ ನ 24 ವರ್ಷದ ತ್ರೀರಾಪತ್ ಕ್ಲಾಯ್ ಎಂಬಾತನನ್ನು ಪೊಲೀಸರು ಚಪ್ಪಲಿ ಕಳ್ಳತನದ ಕಾರಣಕ್ಕೆ ಬಂಧಿಸಿದ್ದಾರೆ. ಆತ ಯಾವ ಕಾರಣಕ್ಕೆ ಚಪ್ಪಲಿ ಕದಿಯುತ್ತಾನೆಂದು ಕಾರಣ ಕೇಳಿ ಪೊಲೀಸರು ದಂಗಾಗಿದ್ದಾರೆ. ಆತನ ಮನೆಯನ್ನು ನೋಡಿದ ಪೊಲೀಸರಿಗೆ ಆಶ್ಚರ್ಯ ಒಂದು ಕಾದಿತ್ತು. ಆತ ಕಳೆದ ಎರಡು ವರ್ಷಗಳಿಂದ ನೆರೆಹೊರೆಯವರ ಮನೆಗಳಿಂದ ಕದ್ದಿದ್ದ ಚಪ್ಪಲಿಗಳನ್ನು ಕೂಡಿಟ್ಟಿದ್ದ. ಅಲ್ಲಿ ವಿಭಿನ್ನ ಬಣ್ಣದ, ವಿಭಿನ್ನ ಬ್ರಾಂಡ್ ಗಳ ಪಾದರಕ್ಷೆ ಇದ್ದವು. ಆಘಾತಕಾರಿ ಎಂದರೆ ಲೈಂಗಿಕ […]
ಹೈದರಾಬಾದ್ : ವಲಸೆ ಕಾರ್ಮಿಕರು ಈಗಾಗಲೇ ಹಣವಿಲ್ಲದೆ 2 ತಿಂಗಳು ಕಳೆದಿದ್ದಾರೆ. ಪ್ರಸ್ತುತ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ತುರ್ತಾಗಿ ಪ್ರತಿ ವಲಸೆ ಕಾರ್ಮಿಕ ಕುಟುಂಬಕ್ಕೆ 10 ಸಾವಿರ ರೂಪಾಯಿ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.ಈ ಬಗ್ಗೆ ಟ್ವಿಟರ್ನಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಅವರು, ದೇಶದಲ್ಲಿ ಲಾಕ್ಡೌನಿಂದಾಗಿ ವಲಸೆ ಕಾರ್ಮಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಾವು ಕೆಲಸ ಮಾಡುವ ಸ್ಥಳದಿಂದ ತಮ್ಮ ಊರಿಗೆ ಹೋಗಲು ಉಚಿತ ಸಾರಿಗೆ […]
ಆಮೆಯ ಬಗ್ಗೆ ಸಾಮಾನ್ಯವಾಗಿ ಒಂದು ಕಲ್ಪನೆ ಇದೆ, ಸಾವಧಾನವಾಗಿ ಚಲಿಸುವ ಪ್ರಾಣಿ ಎಂಬುದು ಜನಜನಿತ. ಆದರೆ ಇತ್ತೀಚೆಗೆ ವೈರಲ್ ಆದ ಸುದ್ದಿ ಅಚ್ಚರಿ ಹುಟ್ಟಿಸುವಂತಿದೆ. ಲ್ಯಾಟೊನ್ಯಾ ಎಂಬಾಕೆ ತನ್ನ ಸಹೋದರ ಕೆವಿನ್ ನೊಂದಿಗೆ ಕಾರಿನಲ್ಲಿ ಚಲಿಸುತ್ತಿದ್ದಾಗ ಏಕಾಏಕಿ ಮುಂಭಾಗದ ಗ್ಲಾಸ್ ಗೆ ವಸ್ತುವೊಂದು ಬಡಿದಿದೆ. ಬಡಿದ ರಭಸಕ್ಕೆ ಗ್ಲಾಸ್ ಒಡೆದಿದೆ. ಆದರೆ ಅಲ್ಲೊಂದು ಅಚ್ಚರಿ ಕಾದಿತ್ತು. ಅದು ಕಲ್ಲು ಅಥವ ಯಾವುದೇ ಗಟ್ಟಿ ಪದಾರ್ಥವಾಗಿರಲಿಲ್ಲ. ಬದಲಿಗೆ ಆಮೆ ಅಲ್ಲಿ ಕಂಡಿತ್ತು. […]
ಮಧ್ಯಪ್ರದೇಶ: ಮಧ್ಯಪ್ರದೇಶದ ಜಬುವಾ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಕಳ್ಳತನವಾಗುವ ಸಾಧ್ಯತೆ ಇದೆ ಎಂದು ನೀರು ಸಂಗ್ರಹಿಸಿರುವ ಡ್ರಮ್ಗೆ ಗ್ರಾಮಸ್ಥರು ಬೀಗ ಹಾಕುತ್ತಿದ್ದಾರೆ. ಪ್ರತೀ ವರ್ಷ ಬೇಸಿಗೆ ಆರಂಭವಾಗುತ್ತಿದ್ದಂತೆ ಈ ಭಾಗದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗುತ್ತದೆ. ಈ ವರ್ಷ ಕೂಡ ನೀರಿನ ಸಮಸ್ಯೆ ಎಂದುರಾಗಿದೆ. ಈ ಬಗ್ಗೆ ಮಾತನಾಡಿರುವ ಸ್ಥಳೀಯ ನಿವಾಸಿ, ಪಂಚಾಯಿತಿ ತೀವ್ರ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಆದ್ದರಿಂದ ಕೆಲವೊಮ್ಮೆ ನೀರನ್ನು ಕದಿಯಲಾಗುತ್ತದೆ. ಹೀಗಾಗಿ ನಾವು […]
ತನ್ನ ಅತಿಯಾದ ಉದ್ದದ ಮೂತಿಯಿಂದಾಗಿ ನಾಯಿಯೊಂದು ಅಂತರ್ಜಾಲದಲ್ಲಿ ಫೇಮಸ್ ಆಗಿದೆ. ವರ್ಜಿನಿಯಾದ ಬೋರ್ಜಾಯ್ ತಳಿಯ ನಾಯಿಯೊಂದು 12 ಇಂಚು ಅಳತೆಯ ಮೂತಿ ಹೊಂದಿದೆ. ಅದರ ಮಾಲೀಕರಾದ ಲೀಲಿ ಕಾಂಬೌರಿನಾ ತಾವು ಮರಿಯನ್ನು ತಂದಾಗ ಮೇಡಂ ಎರಿಸ್ ಓವರ್ ಬೈಟ್, ಸ್ನೂಟ್ ರಾಣಿ ಎಂದು ಹೆಸರಿಟ್ಟಿದ್ದರಂತೆ. ಇನ್ಸ್ಟಾಗ್ರಾಮ್ ನಲ್ಲಿ 1.7 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿರುವ ಎರಿಸ್ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಜನಪ್ರಿಯ ನಾಯಿಗಳಲ್ಲಿ ಒಂದಾಗಿದೆ. ಇದರ ಫೋಟೋ […]
ಕರೊನಾ ಮಹಾಮಾರಿಯನ್ನು ದೇಶದಿಂದ ತೊಲಗಿಸುವ ನಿಟ್ಟಿನಲ್ಲಿ ಆರೋಗ್ಯ ಸಿಬ್ಬಂದಿಗೆ ರಕ್ಷಣಾ ಕವಚ ನೀಡುವ ಹೊಸ ಸಾಹಸಕ್ಕೆ ಕೈಹಾಕಿದ್ದ ಭಾರತ ಅಲ್ಪ ಅವಧಿಯಲ್ಲಿಯೇ ಯಶಸ್ಸನ್ನೂ ಸಾಧಿಸಿಬಿಟ್ಟಿದೆ. ಭಾರತ ಈಗ ಅತ್ಯುತ್ತಮ ಗುಣಮಟ್ಟದ ಒಂದು ಕೋಟಿಯನ್ನು ಮೀರುವಷ್ಟು ಪಿಪಿಇ ಕಿಟ್ ಗಳನ್ನು ತಯಾರಿಸಿದೆ. ಕೊರೊನಾ ವೈರಸ್ಗೆ ಸಂಬಂಧಪಟ್ಟ ವೈದ್ಯಕೀಯ ಉಪಕರಣಗಳಿಗೆ ಭಾರತ ಸೇರಿದಂತೆ ಹಲವು ದೇಶಗಳು ಕರೊನಾ ತವರು ಚೀನಾದ ಮೇಲೆಯೇ ಅವಲಂಬನೆ ಮಾಡಬೇಕಾದ ಅನಿವಾರ್ಯತೆ ಇತ್ತು. ಅದರಲ್ಲಿಯೂ ವೈದ್ಯರಿಗೆ ಅತ್ಯಂತ ಅವಶ್ಯಕವಾಗಿ […]
ನವದೆಹಲಿ: ವಿಯೆಟ್ನಾಂನಲ್ಲಿ 9ನೇ ಶತಮಾನದ ಶಿವಲಿಂಗ ಪತ್ತೆಯಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ವಿಯೆಟ್ನಾಂನ ಮೈಸನ್ ಪ್ರದೇಶದಲ್ಲಿ ಉತ್ಖನನ ನಡೆಸುವಾಗ ಈ ವಿಶಿಷ್ಟ ಶಿವಲಿಗವನ್ನು ಭಾರತದ ಪುರಾತತ್ವ ಇಲಾಖೆ(ASI) ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಮೈಸನ್ ಪ್ರದೇಶದ ಚಾಮ್ ದೇಗುಲಗಳ ಸಮೂಹದಲ್ಲಿ ಉತ್ಖನನ ಕಾರ್ಯ ನಡೆಸಲಾಗುತ್ತಿದೆ. ಇಲ್ಲಿ ಅನೇಕ ಶಿಥಿಲವಾಸ್ಥೆ, ಪೂರ್ಣ ಹಾಳಾದ ದೇಗುಲಗಳ ಅವಶೇಷಗಳಿವೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿರುವ ಈ ತಾಣವನ್ನು ಕ್ರಿ.ಶ 4ನೇ ಶತಮಾನದಿಂದ […]
ಬೆಂಗಳೂರು: ಕಾರಾಗೃಹಕ್ಕೆ ಬರುವ ಹೊಸ ಕೈದಿಗಳಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ಎಂದು ರಾಜ್ಯ ಕಾರಾಗೃಹ ಇಲಾಖೆ ತಿಳಿಸಿದೆ. ಜೈಲಿಗೆ ಬರುತ್ತಿದ್ದಂತೆಯೇ ಕೈದಿಯನ್ನು 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿರಿಸಲಾಗುತ್ತಿದೆ. ಪರೀಕ್ಷೆಯಲ್ಲಿ ಸೋಂಕು ಇಲ್ಲ ಎಂದು ದೃಢಪಟ್ಟ ಬಳಿಕವಷ್ಟೇ ಜೈಲಿನೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುತ್ತದೆ ಎಂದು ತಿಳಿಸಿದೆ.
ಕೊಟ್ಟೂರು ತಾಲ್ಲೂಕಿನಲ್ಲಿ ಜನರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಮರಳು ನಿಕ್ಷೇಪವನ್ನು ಗುರುತಿಸುವ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ತಹಶೀಲ್ದಾರ್ ಅನಿಲ್ ಕುಮಾರ್ ಹೇಳಿದ್ದಾರೆ. ಮರಳು ಮಾಫಿಯಾ ಮತ್ತು ಕೃತಕ ಮರಳು ಅಭಾವ ತಪ್ಪಿಸುವ ಉದ್ದೇಶದಿಂದ ಹೊಸ ಮರಳು ನೀತಿ ಜಾರಿಗೆ ತರಲಾಗಿದೆ ಎಂದು ಮಾಹಿತಿ ನೀಡಿದ್ದು, ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ವಿವಿಧ ಇಲಾಖೆ ಅಧಿಕಾರಿಗಳು ಸಮಿತಿಯಲ್ಲಿರುತ್ತಾರೆ. […]
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸದಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಅರ್ಜಿ ಇತ್ಯರ್ಥ ಮಾಡಿದೆ. ಸರ್ಕಾರದಿಂದ ಪರೀಕ್ಷೆ ನಡೆಸಲು ಮಾಡಿಕೊಂಡಿರುವ ವ್ಯವಸ್ಥೆ ಬಗ್ಗೆ ಹೈಕೋರ್ಟ್ ಮಾಹಿತಿ ಕೇಳಿತ್ತು. ಅದರಂತೆ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯ ಮಾರ್ಗಸೂಚಿಗಳನ್ನು ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿದ ಹೈಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸಬೇಕು. ಯಾವುದೇ ವಿದ್ಯಾರ್ಥಿಗೆ ಇದರಿಂದ […]