ಲಾಕ್ನೌಡ್ನಿಂದ ರಾಜ್ಯದಲ್ಲಿ ಉಂಟಾಗಿರುವ ಜನತೆಯ ಸಂಕಷ್ಟಗಳನ್ನು ನಿವಾರಿಸಲು ಕನಿಷ್ಠ ೫೦ಸಾವಿರ ಕೋಟಿ ರೂಪಾಯಿ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ. ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ರೈತರು ಬೆಳೆದ ಪದಾರ್ಥಗಳನ್ನು ಸರ್ಕಾರವೆ ಖರೀದಿಸಿ ರೈತರಿಗೆ ಸಹಾಯ ಮಾಡಬೇಕು ಎಂದು ವಿರೋಧ ಪಕ್ಷಗಳ ಮುಖಂಡರ ಸಭೆಯಲ್ಲಿ ಸಿದ್ದರಾಮಯ್ಯ, ಸಿಎಂ. ಬಿಎಸ್ವೈಗೆ ಮನವಿ ಮಾಡಿದ್ದಾರೆ.
ಬೆಂಗಳೂರು: ಹೊಂಗಸಂದ್ರಕ್ಕೆ ಬಿಹಾರಿಗಳು ಕಂಟಕವಾದAತೆ ಶಿವಾಜಿನಗರಕ್ಕೆ ಮಣಿಪುರ ಮತ್ತು ಅಸ್ಸೋಂ ಮೂಲದ ನಾಲ್ವರಿಂದ ಹಲವಾರು ಮಂದಿಗೆ ಕೊರೊನಾ ಸೋಂಕು ಹರಡಿರುವ ಸಾಧ್ಯತೆಗಳಿವೆ. ಖಾಸಗಿ ಹೋಟೆಲ್ನ ಹೌಸ್ಕೀಪರ್ನಿಂದ ಈ ನಾಲ್ಕು ಮಂದಿಗೆ ಸೋಂಕು ಹರಡಿದೆ. ಜ್ಯುವೆಲರಿ ಶಾಪ್, ಫರ್ನೀಚರ್ ಶಾಪ್, ಚಿಕನ್ ಸೆಂಟರ್ ಹಾಗೂ ಖಾಸಗಿ ಹೊಟೇಲ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ನಾಲ್ವರು ಶಿವಾಜಿನಗರದಾದ್ಯಂತ ಓಡಾಡಿರುವುದರಿಂದ ಇವರ ಜೊತೆ ಪ್ರಾಥಮಿಕ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿದವರನ್ನು […]
ಇಂದು ಕನ್ನಡ ಚಲನಚಿತ್ರದ ದಿವಂಗತ ಹಿರಿಯ ನಟ, ನಿರ್ಮಾಪಕ ಕಾಶೀನಾಥ್ ಅವರ 69ನೇ ಜನ್ಮದಿನ. ಈ ಹಿನ್ನೆಲೆ ಅವರ ಶಿಷ್ಯಂದಿರಾದ ನಟ ಉಪೇಂದ್ರ ಮತ್ತು ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಚಿತ್ರರಂಗದ ಗಣ್ಯರು ಕಾಶಿನಾಥರನ್ನ ಸ್ಮರಿಸಿದ್ದಾರೆ. ಕನ್ನಡದಲ್ಲಿ ಮೇರು ನಟನಾಗಿ, ನಿರ್ದೇಶಕನಾಗಿ ಚಿತ್ರರಂಗದಲ್ಲಿ ಹಲವಾರು ಸಾಧನೆಗಳನ್ನು ಮಾಡಿದ ಅದ್ಭುತ ಪ್ರತಿಭೆ ನಮ್ಮ ಜೊತೆಗಿರದಿದ್ದರೂ ಅವರ ನೆನಪುಗಳು ಅಜರಾಮರ. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆಯನ್ನೆಬ್ಬಿಸಿದ್ದ ಕಾಶಿನಾಥ್ ಅವರು ನಟನೆ, ನಿರ್ದೇಶನ, […]
ಮಹಾರಾಷ್ಟçದ ಔರಾಂಗಾಬಾದ್ನಲ್ಲಿ ನಡೆದ ರೈಲು ಅಪಘಾತದಲ್ಲಿ ವಲಸೆ ಕಾರ್ಮಿಕರ ಪ್ರಾಣಹಾನಿಯಾಗಿದ್ದು, ತೀವ್ರ ಬೇಸರ ಉಂಟುಮಾಡಿದೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ, ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರೊಂದಿಗೆ ಚರ್ಚಿಸಿ ಕಾರ್ಮಿಕರ ಕುಟುಂಬಕ್ಕೆ ಸಹಾಯ ಒದಗಿಸುವಂತೆ ಟ್ವೀಟ್ ಮೂಲಕ ಸಂತಾಪ ಸೂಚಿಸಿ, ಈ ಕೊರೊನಾ ಸಮಸ್ಯೆಯೊಂದಿಗೆ ಈ ಕಹಿ ಘಟನೆ ನಡೆದಿರುವುದು ಮನಸ್ಸಿಗೆ ತುಂಬಾ ಬೇಸರ ಉಂಟು ಮಾಡಿದೆ. ಜೊತೆಗೆ ಈ ಘಟನೆಯ ಸಂಪೂರ್ಣ ವರದಿಯನ್ನು ವಿಚಾರ ಮಾಡಲು ಸಂಬAಧಪಟ್ಟ […]
ಚಂಡೀಘಡ: ಭಾರತೀಯ ವಾಯುಸೇನೆಗೆ ಸೇರಿದೆ ಮಿಗ್-೨೯ ಯುದ್ಧ ವಿಮಾನ ಇಂದು ಬೆಳಗ್ಗೆ ಪಂಜಾಬ್ ನಲ್ಲಿ ಪತನವಾಗಿದೆ ಎಂದು ತಿಳಿದುಬಂದಿದೆ. ಪಂಜಾಬ್ನ ನವಾನ್ ಶಹರ್ ನಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಯುದ್ಧ ವಿಮಾನ ಪತನಕ್ಕೂ ಮುನ್ನ ಪೈಲಟ್ ಪ್ಯಾರಾಚೂಟ್ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಿಮಾನಪತನವಾಗಿದ್ದರಿಂದ ಹೆಚ್ಚಿನ ಸಾವು-ನೋವು ಸಂಭವಿಸಿಲ್ಲ. ಪ್ರಸ್ತುತ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ದೌಡಾಯಿಸಿದ್ದು, ಪೈಲಟ್ ರನ್ನು ರಕ್ಷಿಸಿದ್ದಾರೆ. ಅಂತೆಯೇ ವಾಯುಸೇನೆಯ ಉನ್ನತಾಧಿಕಾರಿಗಳು […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಹೊರರಾಜ್ಯದ ಕಾರ್ಮಿಕರಿಗೆ ಅವರ ಊರಿಗೆ ತೆರಳಲು ಅನುಕೂಲವಾಗುವಂತೆ ಮಂಗಳೂರು ರೈಲು ನಿಲ್ದಾಣದಿಂದ ರೈಲಿನ ವ್ಯವಸ್ಥೆ ಮಾಡಬೇಕೆಂದು ದಕ್ಷಿಣ ಕನ್ನಡ ಸಂಸದರೂ, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವರಾದ ಸನ್ಮಾನ್ಯ ಪಿಯೂಶ್ ಗೋಯಲ್ ಹಾಗೂ ಕೇಂದ್ರ ರೈಲ್ವೆ ಸಹಾಯಕ ಸಚಿವರಾದ ಸನ್ಮಾನ್ಯ ಸುರೇಶ್ ಅಂಗಡಿಯವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.ಸುಮಾರು 3500 ಹೊರರಾಜ್ಯದ ಕಾರ್ಮಿಕರು […]
ಬೆಂಗಳೂರು : ಪಾದರಾಯನಪುರದಲ್ಲಿ ಮಾರಕ ಕೊರೊನಾ ಸೋಂಕು ಮತ್ತಷ್ಟು ಆತಂಕ ತಂದೊಡ್ಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾದಿಂದ ಮತ್ತೇ ೩ ಕೇಸ್ಗಳು ಪತ್ತೆಯಾಗಿವೆ. ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರದೇಶದಲ್ಲಿ ಮತ್ತಷ್ಟು ಭೀತಿ ಎದುರಾಗಿದೆ. ಪಾದರಾಯನಪುರದಲ್ಲಿ ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲು ತೆರಳಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಇಲ್ಲಿನ ಸ್ಥಳೀಯರು ಹಲ್ಲೆಗೆ ಮುಂದಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೧೨೦ಕ್ಕೂ ಹೆಚ್ಚು ಜನರನ್ನು ಬಂಧಿಸಿ […]
ಲಾಕ್ಡೌನ್ನಿಂದ ರಿಲೀಫ್ ಆಗಿ ಎಲ್ಲ ಉದ್ಯಮಗಳು ಪ್ರಾರಂಭವಾಗುತ್ತಿವೆ. ಚಿತ್ರೋದ್ಯಮವು ಕೂಡ ತನ್ನ ಕೆಲಸಗಳನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಕೆಜಿಎಫ್ ಚಾಪ್ಟರ್-೧ ಚಿತ್ರ ರಾಷ್ಟಿçÃಯ, ಅಂತಾರಾಷ್ಟಿçÃಯ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಅದೇ ಸಾಲಿನಲ್ಲಿ ಕೆಜಿಎಫ್-೨ ಕೂಡಾ ನಿಂತಿದೆ. ಅಮೆಜಾನ್ ಪ್ರೆöÊಮ್ ಕೆಜಿಎಫ್ ಚಾಪ್ಟರ್-೨ ರೈಟ್ಸ್ ಪಡೆಯಲು ಚಿತ್ರತಂಡದೊAದಿಗೆ ಚರ್ಚೆ ನಡೆಸಿ, ದೊಡ್ಡ ಮೊತ್ತಕ್ಕೆ ಕೆಜಿಎಫ್-೨ ಚಿತ್ರದ ಡಿಜಿಟಲ್ ರೈಟ್ಸ್ನ್ನು ಪಡೆದಿದೆ. ದಾಖಲೆ ಮೊತ್ತಕ್ಕೆ ಮಾರಾಟವಾಗಿರುವ ಚಿತ್ರದ ರೈಟ್ಸ್ ಹೊಸ ಹಿಸ್ಟಿç […]
ಮದ್ಯಪ್ರಿಯರಿಗೆ ಮತ್ತೊಂದು ಸಿಹಿಸುದ್ದಿ ರಾಜಧಾನಿಯಲ್ಲಿ ನಾಳೆಯಿಂದಲೆ ಕ್ಲಬ್, ಪಬ್, ಬಾರ್ ಓಪನ್ ಮಾಡಲು ಅನುಮತಿ ನೀಡಲಾಗಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ತಿಳಿಸಿದ್ದಾರೆ. ಲಾಕ್ಡೌನ್ನಿಂದ ಇಷ್ಟು ದಿನ ಕ್ಲೋಸ್ ಆಗಿದ್ದ ಬಾರ್ ರೆಸ್ಟೊರೆಂಟ್ಗಳನ್ನು ಓಪನ್ ಮಾಡಲು ಸರ್ಕಾರ ಅವಕಾಶ ಕೊಟ್ಟಿದೆ. ಬರೀ ಮದ್ಯದ ಅಂಗಡಿಗಳಿಗೆ ಓಪನ್ ಮಾಡಲು ಅನುಮತಿ ನೀಡಲಾಗಿತ್ತು. ಆದರೆ ನಾಳೆಯಿಂದ ಎಲ್ಲ ರೆಸ್ಟೋರೆಂಟ್ಗಳಿಗೂ ಅನುಮತಿ ನೀಡಿದೆ.
ದುಡಿಯುವ ವರ್ಗಕ್ಕೆ ಪ್ಯಾಕೇಜ್ ಘೋಷಣೆಗೆ ಕಾಂಗ್ರೆಸ್ ಈ ಹಿಂದೆಯೇ ಸರ್ಕಾರಕ್ಕೆ ಆಗ್ರಹಿಸಿತ್ತು ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಶ್ರಮಿಕವರ್ಗಕ್ಕೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ವಿಚಾರ ಹಿನ್ನೆಲೆಯಾಗಿ ಮಂಗಳೂರಿನಲ್ಲಿ ಮಾತನಾಡಿದ ಅವರು, ಬೀಡಿ ಕಾರ್ಮಿಕರು,ಟೈಲರ್, ಹೊಟೇಲ್ ಕಾರ್ಮಿಕರು, ಬಸ್ ಚಾಲಕ ನಿರ್ವಾಹಕರನ್ನು ಈ ಪ್ಯಾಕೇಜ್ ನಿಂದ ಕೈ ಬಿಟ್ಟಿದ್ದಾರೆ. ಫೋಟೋಗ್ರಾಫರ್ ಗಳನ್ನೂ ಸರ್ಕಾರ ಗಣನೆಗೆ ತೆಗೆದುಕೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿ ಗೆ ಮನವಿ ಸಲ್ಲಿಸುತ್ತೇವೆ ಎಂದರು. ಇನ್ನೂ […]