ಕನ್ನಡದ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಈಗಲೂ ತುಂಬ ಎರ್ಜಿಟಿಕ್. ವಯಸ್ಸು ೪೫ ಆದರೂ, ಇಂದಿಗೂ ಚರ್ಮಿಂಗ್ ಮತ್ತು ಸದಾ ಆ್ಯಕ್ಟೀವ್. ಅದಕ್ಕೆ ಕಾರಣ ಅವರ ನಿತ್ಯದ ಜೀವನ ಶೈಲಿ. ಪುನೀತ್ ಅತ್ಯುತ್ತಮ ಡಾನ್ಸರ್ ಎಂಬುದು ಈಗಾಗಲೇ ಎಲ್ಲರಿಗೂ ಗೊತ್ತು. ಆ ಡಾನ್ಸ್ನಿಂದಲೇ ಪುನೀತ್ ಈಗಲೂ ಯಂಗ್ ಆಗಿದ್ದಾರೆ. ಈ ಹಿಂದೆ ಸಂರ್ಶನವೊಂದರಲ್ಲಿ ಅವರೇ ಈ ಸತ್ಯವನ್ನು ಬಾಯ್ಬಿಟ್ಟಿದ್ದರು. ನನ್ನ ಫಿಟ್ನೆಸ್ಗೆ ಡಾನ್ಸ್ ಬಹುಮುಖ್ಯ ಪಾತ್ರ ವಹಿಸುತ್ತದೆ. ಇದೀಗ ಡಾನ್ಸ್ ಬದಲು […]
ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದ ಮದ್ಯ ಖರೀದಿಯ ಕಾಸ್ಟ್ಲೀ ಬಿಲ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಿನ್ನೆ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿತ್ತು. ಅಲ್ಲದೇ ಒಬ್ಬ ವ್ಯಕ್ತಿಗೆ ಇಂತಿಷ್ಟು ಮದ್ಯ ಮಾರಾಟ ಮಾಡಬೇಖು ಎಂದು ನಿಗದಿ ಮಾಡಲಾಗಿತ್ತು. ಇದೇ ವೇಳೆ ಬೆಂಗಳೂರು ನಗರದೆಲ್ಲೆಡೆ ಮದ್ಯ ಖರೀದಿಗೆ ಪಾನ ಪ್ರಿಯರು ಮುಗಿ ಬಿದ್ದಿದ್ದರು. ಈ ಎಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ 52,800 ರೂ.ಗಳ ಮದ್ಯದ ಖರೀದಿ ಬಿಲ್ ಪೋಟೋ […]
ಕೊರೊನಾ ವೈರಸ್ ಅಬ್ಬರ ಹೆಚ್ಚಾಗಿರುವುದರಿಂದ ಎಲ್ಲ ಉದ್ಯಮಗಳು ಲಾಕ್ಡೌನ್ ಆಗಿವೆ. ಇದರ ಪ್ರಭಾವ ಚಿತ್ರರಂಗದ ಮೇಲೆ ಹೆಚ್ಚಿನ ಹೊಡೆತ ಬಿದ್ದಿದೆ. ರಿಲೀಸ್ಗೆ ರೆಡಿ ಇರುವ ಬಿಗ್ ಬಜೆಟ್ ಸಿನಿಮಾಗಳಿಗೆ ತೊಂದರೆ ಆಗಿದೆ. ದಳಪತಿ ವಿಜಯ್ ಮತ್ತು ವಿಜಯ್ ಸೇತುಪತಿ ಕಾಂಬಿನೇಷನ್ನಲ್ಲಿ ಸಿದ್ಧವಾಗಿದ್ದ ಮಾಸ್ಟರ್ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದು, ಮೊದಲ ಬಾರಿಗೆ ವಿಜಯ್ ಎದುರು ವಿಜಯ್ ಸೇತುಪತಿ ವಿಲನ್ ಆಗಿ ನಟಿಸಲಿದ್ದಾರೆ ಎಂದಾಗಲೇ ದೊಡ್ಡಮಟ್ಟದ ಹೈಪ್ ಸೃಷ್ಟಿಯಾಗಿತ್ತು. ಎಲ್ಲ ಅಂದುಕೊAಡAತೆ […]
ದುಬೈ, ಮಸ್ಕತ್ ನಿಂದ ನಿರಂತರ ಬೆದರಿಕೆ ಕರೆಬರುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, “ಕೇರಳದ ಹಿಂದೂ ಕಾರ್ಯಕರ್ತನಿಗೆ ಮಸ್ಕತ್ ನಲ್ಲಿ ಹಲ್ಲೆ ಮಾಡಿದ್ದರು. ಆ ಘಟನೆಯ ವಿರುದ್ಧ ನಾನು ಸಿಡಿದೆದ್ದಿದ್ದೆ. ಹೀಗಾಗಿ ಈ ಬೆದರಿಕೆ ಕರೆ ಬರುತ್ತಿದೆ”. ಗೃಹ ಸಚಿವ ಅಮಿತ್ ಶಾ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದೆ. ನನಗೆ ದಿನನಿತ್ಯ ನೂರಾರು ಬೆದರಿಕೆ, ಅಶ್ಲೀಲ ಕರೆಗಳು ಬರುತ್ತಿವೆ. ದುರುದ್ದೇಶದಿಂದ ಫೋನಿನ ಮೇಲೆ […]
ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ತೆರಳೋದಕ್ಕೆ, ಹೊರ ಜಿಲ್ಲೆಗಳಲ್ಲಿ ಸಿಲುಕಿರುವಂತವರನ್ನು ಕರೆದುಕೊಂಡು ಬರೋದಕ್ಕೆ ಒನಾ ವೈ ಪಾಸ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಒನಾ ವೈ ಪಾಸ್ ವಿತರಣೆ ಮಾಡಲಾಗುತ್ತದೆ . ಆದ್ರೇ ಚಂಕಿಗ್ ಕಣ್ ತಪ್ಪಿಸಿ, ಪಾಸ್ ಇಲ್ಲದೇ ಜಿಲ್ಲೆ ಪ್ರವೇಶಿಸಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ತೆರಳಲು ಒನ್ ವೇ ಪಾಸ್ ವಿತರಿಸಲಾಗುತ್ತದೆ. […]
ರಾಜ್ಯದಲ್ಲಿ ಶೀಘ್ರದಲ್ಲೇ ಮುಜರಾಯಿ ಇಲಾಖೆ ಎಲ್ಲ ದೇವಾಲಯಗಳನ್ನು ತೆರೆಯಲಾಗುವುದು ಎಂದು ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಾದ್ಯಂತ ಮೂರನೇ ಹಂತದ ಲಾಕ್ಡೌನ್ ವಿಸ್ತರಣೆಯಾಗಿದ್ದರೂ ರಾಜ್ಯದಲ್ಲಿ ಕೆಲವು ವಲಯಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಹಸಿರು ವಲಯದಲ್ಲಿರುವ ಜಿಲ್ಲೆಗಳಲ್ಲಿ ಮುಕ್ತ ಓಡಾಟ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅನುವು ಮಾಡಿಕೊಡಲಾಗಿದೆ. ಅಲ್ಲದೆ, ಮದ್ಯ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿ ಮುಜರಾಯಿ ಇಲಾಖೆ ದೇವಸ್ಥಾನಗಳನ್ನು ಸದ್ಯದಲ್ಲೇ ತೆರೆಯಲಾಗುವುದು. ಆದರೆ, […]
ಅಹಮದಾಬಾದ್: ಏಡ್ಸ್ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಪವಾಡ ರೀತಿಯಲ್ಲಿ ಕೊರೊನಾ ಸೋಂಕಿನಿಂದ ಪಾರಾಗಿದ್ದಾನೆ. ಅಹಮದಾಬಾದ್ನ ಗ್ರಾಮದ ೨೭ ವರ್ಷದ ವ್ಯಕ್ತಿ ಕಳೆದ ಕೆಲ ವರ್ಷಗಳಿಂದ ಹೆಚ್ಐವಿ ಸೋಂಕಿನಿಂದ ಬಳಲುತ್ತಿದ್ದರು. ಇವರಿಗೆ ಮಹಾಮಾರಿ ಕೊರೊನಾ ವೈರಸ್ ಕೂಡ ತಗುಲಿದ್ದು, ಸಾವನ್ನಪ್ಪುವುದು ಖಚಿತ ಎಂದು ಹೇಳಲಾಗ್ತಿತ್ತು. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ದಾಖಲಾಗಿ ಅವರು ಡೆಡ್ಲಿ ವೈರಸ್ನಿಂದ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ಬಂದಿದ್ದಾರೆ. ಈ ವೇಳೆ, ಸ್ಥಳೀಯ ಜನರು ಅವರ ಮೇಲೆ ಹೂಮಳೆ […]
ನವೆದಹಲಿ : ಲಾಕ್ ಡೌನ್ ಸಡಿಲಿಕೆಯ ನಡುವೆ, ಜೆಇಇ ಮತ್ತು ನೀಟ್ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದೆ. ಜುಲೈ ೧೮ರಿಂದ ಜೆಇಇ ಪರೀಕ್ಷೆ ಆರಂಭವಾಗಲಿದ್ದು, ಜುಲೈ ೨೩ರವರೆಗೆ ನಡೆಯಲಿದೆ. ಜುಲೈ ೨೬ರಂದು ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಹೆಚ್ ಆರ್ ಡಿ ಸಚಿವ ರಮೇಶ್ ಪೊಕ್ರಿಯಾಳ್, ಜಾಯಿಂಟ್ ಎಟೆರೆನ್ ಎಕ್ಸಾಂ(ಜೆಇಇ)ಯ ಮುಖ್ಯ ಪರೀಕ್ಷೆಯನ್ನು ಜುಲೈ ೧೮ರಿಂದ ೨೩ರ ವರೆಗೆ ನಡೆಸಲಾಗುತ್ತದೆ. ನ್ಯಾಷನಲ್ […]
ನವದೆಹಲಿ: ತಜ್ಞರ ಪ್ರಕಾರ, ತಂಬಾಕು ಸೇವನೆಯಿಂದಾಗಿ ಭಾರತದಲ್ಲಿ ಪ್ರತಿವರ್ಷ ಸುಮಾರು ೧೨ ಲಕ್ಷ ಸಾವುಗಳು ಸಂಭವಿಸುತ್ತವೆ. ಅಲ್ಲದೆ, ೫೦ ಪ್ರತಿಶತ ಕ್ಯಾನ್ಸರ್ಗೆ ಹಾಗೂ ೯೦ ಪ್ರತಿಶತದಷ್ಟು ಬಾಯಿ ಕ್ಯಾನ್ಸರ್ಗೆ ಈ ತಂಬಾಕು ಕಾರಣವಾಗಿದೆ. ಆದ ಕಾರಣ ಎಲ್ಲಾ ತಂಬಾಕು ಉತ್ಪನ್ನಗಳ ಪ್ಯಾಕೆಟ್ಗಳ ಮೇಲೆ ಆರೋಗ್ಯ ಸಂಬಂಧ ಎಚ್ಚರಿಕೆಯ ಹೊಸ ಚಿತ್ರವನ್ನು ಮುದ್ರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಈ ವರ್ಷ ಸೆಪ್ಟೆಂಬರ್ ೧ ರ ನಂತರ ಮೊದಲು ಸೂಚಿಸಿದ […]
ಲಾಕ್ ಡೌನ್ ಹಿನ್ನೆಲೆ ಸ್ಥಗಿತವಾಗಿರುವ ಸಿರೀಯಲ್ ಶೂಟಿಂಗ್ ಮತ್ತೆ ಆರಂಭಿಸುವುದಕ್ಕೆ ಅನುಮತಿ ಸಿಕ್ಕಿದೆ.ಇಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಸೀರಿಯಲ್ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ಸುಮಾರು 45 ದಿನಗಳಿಂದ ಯಾವುದೇ ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್ ಆರಂಭವಾಗಿರಲಿಲ್ಲ. ಕೊರೊನಾ ಭೀತಿಯಿಂದ ಮಾರ್ಚ್ 19ರಿಂದ ಕಿರುತೆರೆ, ಬೆಳ್ಳಿತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಹೀಗಾಗಿ ಮತ್ತೆ ಶೂಟಿಂಗ್ ಫ್ರಾರಂಬಿಸಲು ಅನುಮತಿ ನೀಡಬೇಕು ಎಂದು ಟಿ.ವಿ.ಅಸೋಶಿಯೇಷನ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಕುರಿತು ಇಂದು […]