ಗದಗ: ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದ ಭದ್ರತೆ ಬಗ್ಗೆ ಕಾಳಜಿ ವಹಿಸಿದ್ದು ತಪ್ಪಲ್ಲ. ಎಂದು ಶಾಸಕ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಗದಗನಲ್ಲಿ ಪಾದರಾಯನಪುರ ಆರೋಪಿಗಳ ಸ್ಥಳಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದ ಭದ್ರತೆ ಬಗ್ಗೆ ಕಾಳಜಿ ವಹಿಸಿದ್ದು ತಪ್ಪಲ್ಲ. ಗ್ರೀನ್ ಝೋನ್ ಜಿಲ್ಲೆಗೆ ಆರೋಪಿಗಳನ್ನು ಸ್ಥಳಾಂತರಿಸಿದ್ದು ತಪ್ಪು. ಹಾಗಾಗಿ ರಾಮನಗರ ಜನರ ಹಿತದೃಷ್ಟಿಯಿಂದ ಕುಮಾರಸ್ವಾಮಿ ಹೇಳಿಕೆ ಸರಿಯಿದೆ. ಇದು ರಾಜಕೀಯ […]

ಬೆಂಗಳೂರು:  ಇಡೀ ಬೆಂಗಳೂರನ್ನೇ ಬಿಹಾರಿ ಪ್ರಕರಣ ಬೆಚ್ಚಿ ಬೀಳಿಸುತ್ತಿದೆ. ಈ ನಡುವೆ ಬಿಹಾರಿ ಕಾರ್ಮಿಕರು ಗಾಯಿತ್ರಿನಗರ ಜನರ ನೆಮ್ಮದಿ ಕೆಡಿಸಿದ್ದಾರೆ. ಗಾಯಿತ್ರಿನಗರದಲ್ಲಿ 7 ಜನ ಬಿಹಾರಿ ಕೂಲಿ ಕಾರ್ಮಿಕರು ಕಾಣಿಸಿಕೊಂಡಿದ್ದಾರೆ. ಬೆಳ್ಳಂಬೆಳಗ್ಗೆಯೇ ಗಾಯಿತ್ರಿನಗರದ ರಸ್ತೆಗಳಲ್ಲಿ ಬಿಹಾರಿ ಮೂಲದ ಕಾರ್ಮಿಕರು ಓಡಾಟ ಮಾಡಿದ್ದಾರೆ. ಅದರಲ್ಲೂ ಗ್ರೀನ್ ಜೋನ್‍ನಲ್ಲಿ ಕಾಣಿಸಿಕೊಂಡ ಕೂಲಿ ಕಾರ್ಮಿಕರಿಂದ ಆತಂಕ ಹೆಚ್ಚಾಗಿದೆ. ಈ ಮೂಲಕ ಹೊಂಗಸಂದ್ರ ಮಾತ್ರವಲ್ಲದೆ ಬೆಂಗಳೂರಿನ ಗ್ರೀನ್‍ಜೋನ್ ಆಗಿದ್ದ ಜಾಗಕ್ಕೂ ಕೂಲಿ ಕಾರ್ಮಿಕರು ಬಂದಿದ್ದಾರೆ. ಬಿಹಾರಿ […]

ನವದೆಹಲಿ: ಡೆಡ್ಲಿ ಕೊರೊನಾ ವೈದ್ಯರನ್ನು ಸಹ ಬಿಟ್ಟಿಲ್ಲ. ಬಾಬುಜಗಜೀವನರಾಮ್ ಆಸ್ಪತ್ರೆಯ ೧೧ ವೈದ್ಯರು ಸೇರಿ ೩೧ ಸಿಬ್ಬಂದಿಗೆ ಕೋವಿಡ್-೧೯ ಟೆಸ್ಟ್ನಲ್ಲಿ ಪಾಸಿಟಿವ್ ಬಂದಿದೆ. ಎಲ್‌ಎನ್‌ಜೆಪಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಇವರನ್ನು ದಾಖಲಿಸಲಾಗಿದೆ. ಇನ್ನೂ ಕೆಲವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ. ಕಳೆದ ಕೆಲವು ದಿನಗಳ ಅವಧಿಯಲ್ಲಿ ಒಟ್ಟು ೩೫೦ ಸಿಬ್ಬಂದಿಯನ್ನು ಈ ಟೆಸ್ಟ್ಗೆ ಒಳಪಡಿಸಲಾಗಿದೆ. ಈ ಪೈಕಿ ೩೧ ಜನರ ವರದಿ […]

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದೆ . ರಾಜ್ಯದಲ್ಲಿ ಇಂದು ಮತ್ತೆ 15 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯದ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ, ಇಂದು ಮತ್ತೆ 15 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಹೊಸದಾಗಿ ಸೋಂಕು ಪೀಡಿತರ ಪೈಕಿ ಬೆಂಗಳೂರಿನವರು 6 ಮಂದಿ, ಬೆಳಗಾವಿಯಲ್ಲಿ 6 ಮಂದಿ. […]

ನವದೆಹಲಿ : ದೇಶಾದ್ಯಂತ ಮಾರಕ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗಿದೆ.  ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದರೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ  24,506ಕ್ಕೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 1429 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ.  ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ […]

ಮೃತ ಶರೀರರದ ಜೊತೆ ಕಠೋರವಾಗಿ ವರ್ತಿಸಿ ಎಂದು ಯಾವ ಧರ್ಮವೂ ಹೇಳಿಲ್ಲ ಎಂದು ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ  ಮಾತನಾಡಿದ ಅವರು,  ಕೊರೊನಾ ಸೋಂಕು ಕಾರಣದಿಂದ 75 ವರ್ಷದ ಮಹಿಳೆ ಅಸುನೀಗಿದ್ದು, ಆಕೆಯ ಅಂತ್ಯ ಸಂಸ್ಕಾರಕ್ಕೆ ಮಂಗಳೂರಿನ ಪಚ್ಚನಾಡಿ, ಬೋಳೂರು, ನಂದಿಗುಡ್ಡೆ, ಬಳಿಕ ಮೂಡುಶೆಡ್ಡೆ ಸ್ಮಶಾನಗಳಲ್ಲಿ ಅವಕಾಶ ನಿರಾಕರಿಸಿ ಜನರು ಪ್ರತಿಭಟನೆ ನಡೆಸಿದ್ದರು. ಶಾಸಕ ಭರತ್ ಶೆಟ್ಟಿ ಕೂಡಾ ಇಲ್ಲಿ ಅಂತ್ಯಕ್ರಿಯೆ ನಡೆಸಲು ಅವಕಾಶ ನಿರಾಕರಿಸಿದ್ದರು. ನಂತರ […]

ರಾಜ್ಯದಲ್ಲಿ ತುಘಲಕ್ ಸರ್ಕಾರ ಅಸ್ತಿತ್ವದಲ್ಲಿದೆ. ಸರ್ಕಾರ ಕೊರೊನಾ ಸೋಂಕಿತರನ್ನು ರಾಮನಗರಕ್ಕೆ ಕರೆತಂದು ಹುಡುಗಾಟ ಪ್ರದರ್ಶನ ಮಾಡಿದೆ’ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಮನಗರ ಕಾರಾಗೃಹಕ್ಕೆ ಕರೆತಂದಿದ್ದ ಐವರಲ್ಲಿ ಕೊರೊನಾ ಪತ್ತೆಯಾಗಿದೆ. ಆದರೆ ಮೂವರ ಪ್ರಕರಣ ಮುಚ್ಚಿ ಹಾಕಲು ಸರ್ಕಾರವೇ ಯತ್ನಿಸಿದೆ. ‘ಕೋವಿಡ್ ಪ್ರಕರಣಗಳಲ್ಲಿ ಸರ್ಕಾರ ದುಡ್ಡು ಹೊಡೆಯುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ’. ‘ಶ್ರೀರಂಗಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾವೊಬ್ಬ […]

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸುವ ಉದ್ದೇಶದಿಂದ ತಮಿಳುನಾಡು ಸಿಎಂ ಇಕೆ ಪಳನಿಸ್ವಾಮಿ ಅವರು ಚೆನ್ನೈ, ಕೊಯಮತ್ತೂರು, ಮದುರೈ, ಸೇಲಂ ಮತ್ತು ತಿರುಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ. ಏಪ್ರಿಲ್ ೨೬ರ ಬೆಳಗ್ಗೆ ೬ ಗಂಟೆಯಿಂದ ಏಪ್ರಿಲ್ ೨೯ ರ ರಾತ್ರಿ ೯ ಗಂಟೆಯವರೆಗೆ ಈ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಲಿದೆ. […]

ನವದೆಹಲಿ: ಮೀಸಲಾತಿಯ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಅಗತ್ಯವಿರುವವರಿಗೆ ಮಾತ್ರ ಮೀಸಲಾತಿಯ ಅನುಕೂಲಗಳು ದೊರೆಯುವಂತೆ ಮಾಡಬೇಕು. ಮೀಸಲಾತಿ ಪಟ್ಟಿಯನ್ನು ಪರೀಕ್ಷಿಸಬೇಕು. ಇದು ಸರ್ಕಾರದ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಆದೇಶ ನೀಡಿದೆ. ಮೀಸಲಾತಿಯ ಫಲಾನುಭವಿಗಳಾಗಲು ಪರಿಶಿಷ್ಟಜಾತಿ ಮತ್ತು ಪಂಗಡಗಳಲ್ಲಿ ಹಲವು ತೊಡಕುಗಳಿವೆ. ಇದಲ್ಲದೇ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿದ ವರ್ಗಗಳಿವೆ. ಆದರೆ ಈ ಜಾತಿ ಮತ್ತು […]

ಮೈಸೂರು: ನನ್ನ ಮೇಲಿನ ದ್ವೇಷಕ್ಕಾಗಿ ಜನರಿಗೆ ತೊಂದರೆ ಕೊಡಬೇಡಿ ಎಂದು ಬಂಧಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಪಾದರಾಯನಪುರ ಆರೋಪಿಗಳನ್ನು  ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದ ಪ್ರಕರಣದ ಕುರಿತು ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಾಗ ಅಲೋಕ್ ಮೋಹನ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಬೇಕೆಂದು ಪ್ರಯತ್ನಿಸಿದ್ದರು. ಅವರ ಹಿನ್ನೆಲೆ ಗೊತ್ತಿದ್ದ ಕಾರಣಕ್ಕೆ ನಾನು ನೇಮಕ ಮಾಡಲಿಲ್ಲ. ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ಹೀಗೆಲ್ಲ ಮಾಡಿದ್ದಾರೆ. ನನ್ನ ಮೇಲಿನ ಕೋಪಕ್ಕೆ […]

Advertisement

Wordpress Social Share Plugin powered by Ultimatelysocial