ದೆಹಲಿ: ಕೊರೊನಾ ಲಾಕ್‌ಡೌನ್‌ನಿಂದ ಎಲ್ಲರೂ ಮನೆಯಲ್ಲಿಯೇ ಇರುತ್ತಿದ್ದಾರೆ. ಈ ವೇಳೆ ಮಕ್ಕಳಿಗೆ ಹೊಸತನ್ನು ಕಲಿಯಲು ಸಹಕಾರವಾಗಲಿ ಎಂಬ ಉದ್ದೇಶದಿಂದ ಸೋಷಿಯಲ್ ಮೀಡಿಯಾದ ದಿಗ್ಗಜ ಎಂದೇ ಹೆಸರಾದ ಫೇಸ್‌ಬುಕ್, ಮಕ್ಕಳಿಗಾಗಿಯೇ ವಿಶೇಷವಾಗಿ ಮೆಸೆಂಜರ್ ಕಿಡ್ಸ್ ಆ್ಯಪ್ ಲಾಂಚ್ ಮಾಡಿದೆ. ಭಾರತ ಸೇರಿದಂತೆ ೭೦ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಈ ಸೌಲಭ್ಯ ದೊರೆಯಲಿದೆ ಎಂದು ಸಂಸ್ಥೆ ತಿಳಿಸಿದೆ. ಮೊದಲು ಮಕ್ಕಳಿಗೆ ಬರುವ ಫ್ರೆಂಡ್ ರಿಕ್ವೆಸ್ಟ್ ಸೇರಿದಂತೆ ಇತರೆ ಯಾವುದೇ ವಿಷಯಗಳಿದ್ದರೂ ಪೋಷಕರೇ ನಿಭಾಯಿಸುತ್ತಿದ್ದರು. ಆದ್ರೀಗ, […]

ಬೆಂಗಳೂರಿಗೆ ಹೊಂಗಸಂದ್ರದ ಸ್ಲಂ ನಿವಾಸಿ ಬಿಹಾರಿ ಕಾರ್ಮಿಕನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅವನ ಸಂಪರ್ಕಕ್ಕೆ ಬಂದ 165 ಮಂದಿಯನ್ನು ಕ್ವಾರಂಟೈನ್ ಇಡಲಾಗಿದೆ. ಹೊಂಗಸಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಬಿಹಾರಿ ಕಾರ್ಮಿಕನ ಟ್ರಾವೆಲ್ ಹಿಸ್ಟರಿ ಭಯಾನಕವಾಗಿದೆ. ಹೊಂಗಸಂದ್ರ ಪ್ರದೇಶಕ್ಕೆ ರಾಸಾಯನಿಕ ಸಿಂಪಡಿಸಲಾಗ್ತಿದೆ. ಎಲ್ಲರ ಪರೀಕ್ಷೆ ನಡೆಯುತ್ತಿದೆ. ಸುತ್ತಮುತ್ತಲ ಜನರು ಭಯಗೊಂಡಿದ್ದಾರೆ. ಬಿಹಾರಿ ಕಾರ್ಮಿಕ ಅನೇಕ ಕಡೆ ಓಡಾಡಿದ್ದಾನೆ. ಆತನ ಸಂಪರ್ಕದಲ್ಲಿದ್ದ 9 ಮಂದಿಗೆ ಸೋಂಕಿರುವುದು ದೃಢಪಟ್ಟಿದೆ. ಈತ ಹೋಗಿದ್ದ ಮೂರು ಆಸ್ಪತ್ರೆಯನ್ನು ಸೀಲ್ ಡೌನ್ […]

ನವದೆಹಲಿ : ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ. 3 ರ ನಂತರ ಭಾರತದಲ್ಲಿ ಇನ್ನೂ 10 ವಾರಗಳ ಲಾಕ್ ಡೌನ್ ಅವಶ್ಯಕತೆ ಇದೆ ಎಂದು ವಿಶ್ವದ ಅತಿದೊಡ್ಡ ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ನ ಸಂಪಾದಕ ರಿಚರ್ಡ್ ಹಾರ್ಟನ್ ಸಲಹೆ ನೀಡಿದ್ದಾರೆ.ಒಂದು ವೇಳೆ ಲಾಕ್ ಡೌನ್ ಸಡಿಲಗೊಳಿಸಿದರೆ ಕೊರೊನಾ ಸೋಂಕಿನ ಎರಡನೇ ಅಲೆ ಭಾರತಕ್ಕೆ ಅಪ್ಪಳಿಸಲಿದೆ.ಈಗಿರುವ ಸ್ಥಿತಿಗಿಂತ ಗಂಭೀರ ಸ್ಥಿತಿಗೆ ಭಾರತ ತಲುಪಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಚೀನಾದಲ್ಲಿ […]

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ, ದಾಳಿಯನ್ನು ನಡೆಸಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವಾರಿಯರ್ಸ್ ಗೆ ಇನ್ಮುಂದೆ ಮತ್ತಷ್ಟು ಹೆಚ್ಚಿನ ಭದ್ರತೆ ಒದಗಿಸಲಾಗುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.  ದಾಳಿಗೆ ಮುಂದಾದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಗ್ರೀನ್ ಜೋನ್ ವಾತಾವರಣವಿದೆ. […]

ವಾಷಿಂಗ್ಟನ್: ಕೊರೊನಾ ವೈರಸ್‌ನಿಂದಾಗಿ ಲಾಕ್‌ಡೌನ್ ಹಿನ್ನಲೆಯಲ್ಲಿ ಉತ್ತರ ಭಾರತದಲ್ಲಿ ಏರೋಸಾಲ್ ಪ್ರಮಾಣ ೨೦ ವರ್ಷಗಳಲ್ಲೇ ಅತ್ಯಂತ ಕಡಿಮೆಯಾಗಿದೆ ಎಂದು ನಾಸಾ ಹೇಳಿದೆ. ನಾಸಾದ ಸ್ಯಾಟಲೈಟ್ ಸೆನ್ಸಾರ್‌ನಲ್ಲಿ ಇದು ಪತ್ತೆಯಾಗಿದ್ದು, ಕಳೆದ ೨೦ ವರ್ಷಗಳಲ್ಲಿ ಭಾರತದಲ್ಲಿ ಏರೋಸಾಲ್ ಪ್ರಮಾಣ ಇಷ್ಟು ಕಡಿಮೆ ಆಗಿರಲಿಲ್ಲ. ಈಗ ಲಾಕ್‌ಡೌನ್ ಇರುವುದರಿಂದಾಗಿ ಫ್ಯಾಕ್ಟರಿಗಳು ಬಂದಾಗಿವೆ, ಬಸ್, ಕಾರು, ಟ್ರಕ್, ವಿಮಾನಗಳ ಸಂಚಾರ ಕೂಡ ಕಡಿಮೆಗೊಂಡಿರುವುದರಿಂದ ಇಷ್ಟು ಪ್ರಮಾಣದಲ್ಲಿ ವಾಯುಮಾಲಿನ್ಯ ಕಡಿಮೆಯಾಗಲು ಸಾಧ್ಯವಾಗಿದೆ ಎಂದು ನಾಸಾ ಹೇಳಿದೆ. […]

ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಲಾಕ್‌ ಡೌನ್ ಜಾರಿಗೊಳಿಸಿದೆ, ನಗರದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಚಿಕಿತ್ಸೆ ಸಿಗದೆ ಗರ್ಭಿಣಿ ಸಾವನ್ನಪ್ಪಿದ ಘಟನೆ‌ ಬುಧವಾರ ನಡೆದಿದೆ. ಕಡಪಟ್ಟಿ ಗ್ರಾಮದ ನಿವಾಸಿ ರೂಪಾ ಶಿವಾನಂದ ಹೊಸಮನಿ(23) ಮೃತ ಗರ್ಭಿಣಿ. ಕೊರೊನಾ ಹಿನ್ನೆಲೆ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆ ವೈದ್ಯರ ಹಿಂದೇಟು ಹಾಕುತ್ತಿದ್ದಾರೆ.  ಆಂಬುಲೆನ್ಸ್ ನಲ್ಲಿ ಗರ್ಭಿಣಿಯನ್ನು ಹೊತ್ತು  ವಿವಿಧ ಖಾಸಗಿ ಆಸ್ಪತ್ರೆಗೆ ಸಂಬಂಧಿಕರ ಅಲೆದಾಟ ನಡೆಸಿದ್ದಾರೆ. ಆದ್ರೆ‌ ಯಾವುದೇ […]

ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 9 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 427 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಸೋಂಕಿತರ ಪೈಕಿ  ಕಲುಬುರ್ಗಿಯಲ್ಲಿ 5, ಬೆಂಗಳೂರು 2 ಮತ್ತು ಮೈಸೂರನಲ್ಲಿ ಇಬ್ಬರಿಗೆ  ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ […]

ಬೆಂಗಳೂರು: ಕೊಟ್ಯಾಂತರ ಜೀವರಾಶಿಗಳಿಗೆ ಇರೋದು ಒಂದೇ ಭೂಮಿ. ಹೀಗಾಗಿ ಈ ಭೂಮಿಯ ರಕ್ಷಣೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ವಿಶ್ವ ಪರಿಸರ ದಿನಾಚರಣೆ, ವಿಶ್ವ ಆರೋಗ್ಯ ದಿನಾಚರಣೆಯಂತೆಯೇ ಇಂದು ವಿಶ್ವ ಭೂದಿನ. ವಿಶ್ವ ಭೂ ದಿನದಂದು ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ  ನಾವು ನಮ್ಮ ಭೂಮಿಯನ್ನು ಸಂರಕ್ಷಿಸೋಣ ಮುಂದೆ ಅದು ನಮ್ಮನ್ನು ರಕ್ಷಿಸುತ್ತದೆ ಅಂತ ಅಭಿಮಾನಿಗಳಿಗೆ ಭೂರಕ್ಷಣೆಗೆ ಕರೆ ನೀಡುವುದರ ಜೊತೆಗೆ ಪುನೀತ್ ರಾಜ್‌ಕುಮಾರ್ ಟ್ವೀಟ್ ಮಾಡಿದ್ದಾರೆ. ಮನೆಯಲ್ಲೇ ಇರಿ. ಸುರಕ್ಷಿತವಾಗಿರಿ ಅಂತ […]

ನವದೆಹಲಿ: ಕೊರೊನಾ ತೀವ್ರವಾಗಿ ಹರಡುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ಕಾಲಿಟ್ಟಿದೆ. ಹೌದು ಏ. ೨೦ ರಂದು ಉದ್ಯೋಗಕ್ಕೆ ಹಾಜರಾದ ಸಚಿವಾಲಯದ ಉದ್ಯೋಗಿಯೊಬ್ಬರಲ್ಲಿ ಕೋವಿಡ್ ಪತ್ತೆಯಾಗಿರುವುದರಿಂದ ದೆಹಲಿಯ ಜೋರ್ ಬಾಗ್‌ನ ರಾಜೀವ್ ಗಾಂಧಿ ಭವನ ಸಚಿವಾಲಯದ ಪ್ರಧಾನ ಕಚೇರಿಯನ್ನು ಪ್ರೋಟೋಕಾಲ್ ಮೂಲಕ ಮೊಹರು ಮಾಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ. ಸಂಪರ್ಕಕ್ಕೆ ಬಂದ ಎಲ್ಲ ಸಹೊದ್ಯೋಗಿಗಳನ್ನು ಮುನ್ನಚ್ಚರಿಕೆಯಾಗಿ ಸ್ವಯಂ-ಪ್ರತ್ಯೇಕತೆಗೆ ಕಳಿಸಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವಾಲಯ […]

ಮೈಸೂರು: ಕೊರೊನಾ ಸೋಕು ಹರಡುವ ಹಿನ್ನಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡಲಾದೆ. ಈ ಮಧ್ಯೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದ ಹೊರವಲಯದ ದೇವಾಲಯವೊಂದರಲ್ಲಿ ಬಾಲ್ಯವಿವಾಹ ನಡೆದಿರುವ ಕುರಿತು ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕವಿತಾ ಅವರು ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಾಲ್ಯ ವಿವಾಹಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಿ ಪಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ […]

Advertisement

Wordpress Social Share Plugin powered by Ultimatelysocial