ನವದೆಹಲಿ: ಕೊರೊನಾ ತೀವ್ರವಾಗಿ ಹರಡುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ಕಾಲಿಟ್ಟಿದೆ. ಹೌದು ಏ. ೨೦ ರಂದು ಉದ್ಯೋಗಕ್ಕೆ ಹಾಜರಾದ ಸಚಿವಾಲಯದ ಉದ್ಯೋಗಿಯೊಬ್ಬರಲ್ಲಿ ಕೋವಿಡ್ ಪತ್ತೆಯಾಗಿರುವುದರಿಂದ ದೆಹಲಿಯ ಜೋರ್ ಬಾಗ್‌ನ ರಾಜೀವ್ ಗಾಂಧಿ ಭವನ ಸಚಿವಾಲಯದ ಪ್ರಧಾನ ಕಚೇರಿಯನ್ನು ಪ್ರೋಟೋಕಾಲ್ ಮೂಲಕ ಮೊಹರು ಮಾಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ. ಸಂಪರ್ಕಕ್ಕೆ ಬಂದ ಎಲ್ಲ ಸಹೊದ್ಯೋಗಿಗಳನ್ನು ಮುನ್ನಚ್ಚರಿಕೆಯಾಗಿ ಸ್ವಯಂ-ಪ್ರತ್ಯೇಕತೆಗೆ ಕಳಿಸಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವಾಲಯ […]

ಮೈಸೂರು: ಕೊರೊನಾ ಸೋಕು ಹರಡುವ ಹಿನ್ನಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡಲಾದೆ. ಈ ಮಧ್ಯೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದ ಹೊರವಲಯದ ದೇವಾಲಯವೊಂದರಲ್ಲಿ ಬಾಲ್ಯವಿವಾಹ ನಡೆದಿರುವ ಕುರಿತು ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕವಿತಾ ಅವರು ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಾಲ್ಯ ವಿವಾಹಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಿ ಪಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ […]

ಪಾದರಾಯಪುರ ಗಲಭೆ ಪ್ರಕರಣದ ಆರೋಪಿಗಳನ್ನು ಈಗಾಗಲೇ ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಸಮಾಜದ ಸ್ವಾಸ್ಥ್ಯ ಕದಡುವ ಗೂಂಡಾಗಳ ವರ್ತನೆಗೆ ಕಡಿವಾಣ ಹಾಕಲು ಹೊಸ ಕಾಯ್ದೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಜನರನ್ನು ರಕ್ಷಣೆ ಮಾಡಲು ಹಗಲು ರಾತ್ರಿ ಎನ್ನದೆ ಪೊಲೀಸರು,ವೈದ್ಯರು ಕರ್ತವ್ಯದಲ್ಲಿ ತೊಡಗಿದ್ದಾರೆ. ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. […]

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕೇಂದರ ಸರ್ಕಾರ ಆರೋಗ್ಯ ಸೇತು ಆ್ಯಪ್ ಬಿಡುಗಡೆ ಮಾಡಿತ್ತು. ಅದೇ ರೀತಿ ಇದೀಗ ರಾಜ್ಯ ಸರ್ಕಾರ ಆಪ್ತಮಿತ್ರ ಅನ್ನೋ ಆ್ಯಪ್ ಬಿಡುಗಡೆ ಮಾಡಿದೆ. ಇಂದು ಆಪ್ತಮಿತ್ರ ಆ್ಯಪ್‌ಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕೊರೊನಾ ಸೋಂಕಿನ ಲಕ್ಷಣವುಳ್ಳವರು, ಈ ಆಪ್ತಮಿತ್ರ ಸಹಾಯವಾಣಿ ೧೪೪೧೦ ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದಾಗಿದೆ. ರಾಜ್ಯದ ಎಲ್ಲಾ ನಿವಾಸಿಗಳಿಗೆ, ವಿಶೇಷವಾಗಿ ಕೊರೊನಾ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ವಾಸಿಸುವವರಲ್ಲಿ […]

ರಾಮನಗರ : ಅಪಘಾತದಲ್ಲಿ ಸಾವನ್ನಪ್ಪಿದಂತ ಪಬ್ಲಿಕ್ ಟಿವಿಯ ರಾಮನಗರ ಜಿಲ್ಲಾ ವರದಿಗಾರ ಹನಮಂತು ಮನಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಹನಮಂತು ಪತ್ನಿ, ತಾಯಿ ಸೇರಿದಂತೆ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಅಲ್ಲದೇ ತಾವು ಘೋಷಿಸಿದಂತೆ 5 ಲಕ್ಷ ರೂಪಾಯಿಗಳ ಸಹಾಯಧನದ ಚೆಕ್ ನ್ನು ಹನಮಂತು ಪತ್ನಿಗೆ ಹಸ್ತಾಂತರಿಸಿದರು. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದೆ ಅವರು, ಹನಮಂತು ಅವರ ಪತ್ನಿಗೆ ಅತ್ತೆಯ ಮನೆಯಲ್ಲಿಯೇ ಇರುವಂತೆ […]

ಇತ್ತೀಚಿಗೆ ಕೆಲ ಗಾರ್ಮೆಂಟ್ಸ್ ಕಾರ್ಖಾನೆಗಳ ಆಡಳಿತ ವರ್ಗ, ಕಾರ್ಮಿಕರನ್ನು ಜೀತದಾಳುಗಳಂತೆ ಕಾಣುತ್ತಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಲಾಕ್ ಡೌನ್ ಹಿನ್ನಲೆ, ಹುಳಿಮಾವಿನಲ್ಲಿರುವ ಲೀಸ್ ಅಪ್ರೇಸೆಲ್ಸ್ ಗಾರ್ಮೆಂಟ್ಸ್ ನ ಮಾಲೀಕ ಸುಬ್ರಮಣ್ಯ, ಹಲವು ದಿನಗಳಿಂದ ಸ್ಯಾಲರಿ ಕೊಡದೇ ನೌಕರರನ್ನು ಪೀಡುಸುತ್ತಿದ್ದಾನೆ. ಇದರಿಂದ ಬೇಸತ್ತ ನೌಕರರು. ಗಾರ್ಮೆಂಟ್ಸ್ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ಎಷ್ಟೋ ಸಂಸ್ಥೆಗಳು ಮೂಲ ವೇತನಕ್ಕಿಂತ ಕಡಿಮೆ ವೇತನವನ್ನು ನೀಡುತ್ತಿದೆ. ವರ್ಷಕ್ಕೆ ಕೊಡಬೇಕಾದ ಬೋನಸ್ ಗಳನ್ನು ಸಹ ನೀಡದೆ, […]

ಕೊರೋನಾ ಪೀಡಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಅನುಮತಿ ನೀಡಿದ್ದು, ರಾಜ್ಯದಲ್ಲಿ ಈ ಮಾದರಿಯ ಚಿಕಿತ್ಸೆ ಮುಂದುವರೆಸಬಹುದು ಎಂದು ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರೋನಾದಿಂದ ಗುಣಮುಖರಾದ ವ್ಯಕ್ತಿಯ ದೇಹದಿಂದ ರೋಗ ನಿರೋಧಕ ಶಕ್ತಿಯನ್ನು ಉಂಟು ಮಾಡುವ ರಕ್ತದ ಕಣಗಳನ್ನು ರೋಗ ಪೀಡಿತ ವ್ಯಕ್ತಿಗೆ ನೀಡುವ ಮೂಲಕ ಆತನನ್ನೂ ಈ ಕಾಯಿಲೆಯಿಂದ ಗುಣಪಡಿಸಬಹುದು. ಡಾ. ವಿಶಾಲ್ ರಾವ್ ಅವರಿಗೆ […]

ಪಾದರಾಯನಪುರಕ್ಕೆ ಅನುಮತಿ ಪಡೆದು ಹೋಗಲು ಅದು ಜಮೀರ್ ಅಹಮದ್ ಫಾದರ್ ಪ್ರಾಪರ್ಟಿ ಅಲ್ಲ ಎಂದು ಸಚಿವ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿಕ್ಕಮಗಳೂರನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವಾಗ ವಿಧಾನಸಭೆಗೆ ಆಯ್ಕೆಯಾಗಿ ಬಂದಿದ್ದೇನೆಯೋ ಅವಾಗಲೇ ಜಮೀರ್ ಕೂಡ ಆಯ್ಕೆಯಾಗಿ ಬಂದಿದ್ದಾರೆ. ಹೀಗಾಗಿ ಜಮೀರ್ ಅವರಿಗೆ ಒಂದು ಕಾನೂನು ನನಗೊಂದು ಕಾನೂನು ಇಲ್ಲ. ಈ ದೇಶದ ಕಾನೂನು ಎಲ್ಲರಿಗೂ ಒಂದೇ ರೀತಿ ಅನ್ವಯವಾಗುತ್ತದೆ. ಈಗಾಗಲೇ ಮುಖ್ಯಮಂತ್ರಿಗಳು ಅವನು […]

ಬಳ್ಳಾರಿ: ಕೊರೊನಾದತ್ತಲೇ ಎಲ್ಲರ ಗಮನ ಇರುವಾಗ, ಗೊತ್ತೇ ಆಗದೆ ಡೆಂಗ್ಯೂ ಕಾಲಿಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ತಗ್ಗಿತು ಎಂದು ನಿಟ್ಟುಸಿರುಬಿಡುವಷ್ಟರಲ್ಲಿ ಇದೀಗ ಡೆಂಗ್ಯೂ ತಾಂಡವವಾಡುತ್ತಿದೆ. ಕೊರೊನಾ ಭೀತಿ ಜೊತೆಜೊತೆಗೆ ಡೆಂಗ್ಯೂ ಶುರುವಾಗಿದ್ದು, ಜನರು ಆತಂಕಗೊಂಡಿದ್ದಾರೆ.  ಬಳ್ಳಾರಿ ಜಿಲ್ಲೆಯಾದ್ಯಂತ ೧೧೦ಕ್ಕೂ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ದಾಖಲಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಒಂದು ವರ್ಷದ ಅವಧಿಗೆ ಬರುತ್ತಿದ್ದ ಪ್ರಕರಣಗಳು ಮೂರು ತಿಂಗಳಲ್ಲೇ ಪತ್ತೆಯಾಗಿವೆ. ಕೊರೊನಾದೊಂದಿಗೆ ಡೆಂಗ್ಯೂ ಕೂಡ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗುತ್ತಿದೆ. ಬಳ್ಳಾರಿ, […]

ದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಕಂಡ ಫೇಸ್‌ಬುಕ್, ವಿಶ್ವದ ಅತ್ಯಂತ ದೊಡ್ಡ ಕಂಪನಿಗಳ ಸಾಲಿಗೆ ಬಂದು ನಿಂತಿದೆ. ಸೋಶಿಯಲ್ ಮೀಡಿಯಾದ ದಿಗ್ಗಜ ಫೇಸ್‌ಬುಕ್ ಸಂಸ್ಥೆ, ರಿಲಯನ್ಸ್ ಜಿಯೋನಲ್ಲಿ ರೂ.೪೩,೫೭೪ ಕೋಟಿ ಹೂಡಿಕೆ ಮಾಡುವದರ ಮೂಲಕ ಶೇಕಡಾ ೯.೯೯ ಪಾಲನ್ನು ತನ್ನದಾಗಿಸಿಕೊಳ್ಳುವುದರ ಮೂಲಕ ಹೊಸ ಇತಿಹಾಸ ಬರೆದಿದೆ. ರಿಲಯನ್ಸ್ ಜಿಯೋನಲ್ಲಿ ಹೂಡಿಕೆ ಮಾಡುವುದರ ಮೂಲಕ ಟೆಲಿಕಾಂ ಕ್ಷೇತ್ರಕ್ಕೂ ಲಗ್ಗೆಯಿಟ್ಟಿದೆೆ. ವಿಶೇಷ ಅಂದ್ರೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅತಿ ಹೆಚ್ಚು ಹೂಡಿಕೆಯಾದ […]

Advertisement

Wordpress Social Share Plugin powered by Ultimatelysocial