ಐದು ರಫೆಲ್ ಯುದ್ಧ ವಿಮಾನಗಳ ಮೊದಲ ಬ್ಯಾಚ್ ಜುಲೈ ಅಂತ್ಯಕ್ಕೆ ಭಾರತಕ್ಕೆ ತಲುಪುವ ನಿರೀಕ್ಷೆ ಇದು,್ದ ಜುಲೈ ೨೯ಕ್ಕೆ ಸೇನೆ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಸೇನೆ ಸೇರ್ಪಡೆ ಕಾರ್ಯಕ್ರಮ ಅಂಬಾಲದ ವಾಯುನೆಲೆಯಲ್ಲಿ ನಡೆಯಲಿದ್ದು, ಅಂದಿನ ವಾತಾವರಣದ ಅನುಕೂಲತೆಗಳನ್ನು ಕೂಡ ಗಮನದಲ್ಲಿರಿಸಿಕೊಂಡು ಕಾರ್ಯಕ್ರಮದ ಸಮಯ ಬದಲಾಗುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಎಲ್ಲ ರಫೆಲ್ ಜೆಟ್ಗಳು ಸೇನೆಗೆ ಸೇರ್ಪಡೆ ಕಾರ್ಯಕ್ರಮ ಆಗಸ್ಟ್ ತಿಂಗಳ ಎರಡನೇ ಅವಧಿಯಲ್ಲಿ ನಡೆಯುವ ನಿರೀಕ್ಷೆ ಇದೆ. […]
ನಾನು ಎಂಥದ್ದೇ ಸಂರ್ಭದಲ್ಲೂ ಹಿಂದೂ ದೇವರಿಗೆ ಅವಮಾನ ಮಾಡುವಂತಹ ಕೆಟ್ಟ ಕೆಲಸವನ್ನು ಮಾಡುವುದಿಲ್ಲ. ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ನನ್ನ ಶುರ್ಸ್ ಕಂಪೆನಿ ಹೆಸರಿನಲ್ಲಿರುವ ಮೊಬೈಲ್ ಸಂಖ್ಯೆಯಿಂದ ಸಿಬ್ಬಂದಿಯೊಬ್ಬರು ಅಚಾತರ್ಯವಾಗಿ ಈ ಸುದ್ದಿಯನ್ನು ರವಾನೆ ಮಾಡಿದ್ದಾರೆ. ಈ ಕೃತ್ಯಕ್ಕೆ ಆ ಸಿಬ್ಬಂದಿ ವಿರುದ್ಧ ಕ್ರಮವನ್ನೂ ಕೈಗೊಂಡಿದ್ದೇನೆ.ನನಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲ ದೇವರುಗಳು ಹಾಗೂ ಆ […]
ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚಾಗುತ್ತಲೆ ಸಾಗಿದೆ. ಅದ್ರಲ್ಲೂ ಬೆಂಗಳೂರಿನ ೮ ವಲಯಗಳ ಪೈಕಿ ದಕ್ಷಿಣ ವಲಯದಲ್ಲಿಯೇ ಅತ್ಯಂತ ಹೆಚ್ಚು ಸೋಂಕಿತರು ಪತ್ತಿಯಾಗುತ್ತಿದ್ದಾರೆ.ಹೀಗಾಗಿ ಕಂದಾಯ ಹಾಗೂ ಬೆಂಗಳೂರು ದಕ್ಷಿಣ ವಲಯದ ಕೋವಿಡ್-೧೯ ಉಸ್ತುವಾರಿ ಸಚಿವ ಆರ್.ಅಶೋಕ್ಗೆ ತೆಲೆನೋವು ತಂದಿಟ್ಟಿದೆ. ನಗರದ ಸೋಂಕಿತರ ಅತಿ ಹೆಚ್ಚು ಪಾಸಿಟಿವ್ ಪ್ರಕರಣಗಳು, ಆರ್.ಅಶೋಕ್ ಉಸ್ತುವಾರಿ ವಹಿಸಿಕೊಂಡಿರುವ ದಕ್ಷಿಣ ವಲಯದಲ್ಲೇ ಪತ್ತೆಯಾಗಿವೆ ಎನ್ನಲಾಗ್ತಿದೆ. ಮೂರು ಮಾರುಕಟ್ಟೆಗಳು,ಅತ್ಯಂತ ಹೆಚ್ಚು ವಾರ್ಡ್ಗಳು,ವಿಧಾನಸಭಾ ಕ್ಷೇತ್ರಗಳು,ಕಂಟೈನ್ಮೆAಟ್ ಝೋನ್ಗಳು ಬೆಂಗಳೂರು ದಕ್ಷಿಣ […]
ಕೊರೋನಾ ಸೋಂಕಿನ ಪ್ರಕರಣಗಳು ಸಿಲಿಕಾನ್ ಸಿಟಿಯಲ್ಲಿ ಹೆಚ್ಚಳ ಹಿನ್ನಲೆಯಲ್ಲಿ, ನಗರ ಪ್ರಮುಖ ಮಾರುಕಟ್ಟೆ ಕೆ ಆರ್ ಮಾರುಕಟ್ಟೆ, ಯಶವಂತಪುರ ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಸದ್ಯಕ್ಕೆ ಮಾರುಕಟ್ಟೆಗಳು ತೆರೆಯಲು ಅನುಮತಿ ನೀಡಲಾಗುತ್ತಿಲ್ಲ ಎಂದು ಹೇಳಿದರು.
ಗಾಲ್ವನ್ ಕಣಿವೆಯಲ್ಲಿ ಭಾರತದ ವಿರುದ್ಧ ಚೀನಾ ನಡೆಸಿದ ಆಕ್ರಮಣಕಾರಿ ನಡೆ ಹಾಗೂ ದಕ್ಷಿಣ ಚೀನಾ ಸಮುದ್ರದಲ್ಲಿ ಆ ರಾಷ್ಟ್ರವು ವಿವಾದ ಸೃಷ್ಟಿಸಿರುವುದನ್ನು ಖಂಡಿಸಿ ಅಮೆರಿಕದ ಪ್ರಜಾಪ್ರತಿನಿಧಿ ಸಭೆಯು ರಾಷ್ಟ್ರೀಯ ಭದ್ರತಾ ದೃಢೀಕರಣ ಕಾಯ್ದೆಯ (ಎನ್ಡಿಎಎ) ತಿದ್ದುಪಡಿಯನ್ನು ಅವಿರೋಧವಾಗಿ ಅಂಗೀಕರಿಸಿದೆ.ಸAಸದ ಸ್ಟೀವ್ ಚಬೊಟ್ ಹಾಗೂ ಭಾರತ ಮೂಲದ ಅಮೆರಿಕ ಸಂಸದ ಅಮಿ ಬೆರ್ ಅವರು ಎನ್ಡಿಎಎಗೆ ಸೂಚಿಸಿರುವ ತಿದ್ದುಪಡಿಯನ್ನು ಅವಿರೋಧವಾಗಿ ಅಂಗೀಕರಿಸಲಾಗಿದ್ದು, ವಾಸ್ತವ ಗಡಿಯಲ್ಲಿ ಉದ್ವಿಗ್ನತೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಎರಡೂ ರಾಷ್ಟ್ರಗಳು […]
ಅತ್ತಿಬೆಲೆ ಚೆಕ್ ಪೋಸ್ಟ್ ಕಾಲಿ ಕಾಲಿ ಹೌದು ಬೆಳ್ಳಿಗೆನಿಂದ ಸ್ಥಳಕ್ಕೆ ಬಾರದ ಅಧಿಕಾರಿಗಳು ಕೇಳಿದ್ದರೆ ಅದು ಇದು ಎಂದು ಸಬುಬೂ ಹೇಳುವ ಸಿಬ್ಬಂದಿ ವರ್ಗ. ಚೆಕ್ ಪೋಸ್ಟ್ ಸ್ಥಳಾಂತರ ಮಾಡುವ ನೆಪ ಹೇಳಿ ಜನರನ್ನ ಕ್ಯಾರೆ ಎನ್ನದ ಅಧಿಕಾರಿಗಳು. ಕಿಲೋಮೀಟರ್ ಗಟ್ಟಲೆ ಟ್ರಾಪಿಕ್ ಚಾಮ್ ಆಗಿದ್ದು. ಅಲ್ಲಿ ಬಂದು ಪಾಸ್ ತೋರಿಸಿ ಎಂದು ಹೇಳುವ ಪೊಲೀಸರು. ಆದರೆ ಚೆಕ್ ಪೋಸ್ಟ್ ನಲ್ಲಿ ಮಾತ್ರ ಯಾವುದೆ ಸಿಬ್ಬಂದಿ ವರ್ಗವಿಲ್ಲ. ಅಧಿಕಾರಿಗಳ ಧೋರಣೆ […]
ಬೆಂಗಳೂರಿನಿಂದ ಬಂದವರನ್ನು ಸೇರಿಸಿಕೊಳ್ಳಬೇಡಿ, ಅಲ್ಲಿಂದ ಬಂದವರ ಬಗ್ಗೆ ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ತುಮಕೂರನಲ್ಲಿ ಮಾತನಾಡಿದ ಅವರು, ಕಂಟೈನ್ಮೆಂಟ್ ಝೋನ್ಗಳನ್ನು ತುಂಬಾ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ. ಈ ಬಗ್ಗೆ ಸ್ಥಳೀಯರಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಿ ನಂತರ ಏರಿಯಾ ಸೀಲ್ಡೌನ್ ಮಾಡ್ತೀವಿ. ನಮಗೆ ತುಂಬಾ ತಾಪತ್ರಯವಾಗಿರೋದು ಬೆಂಗಳೂರಿನಿಂದ ಬಂದವರಿಂದ. ಅವರನ್ನು ಹಳ್ಳಿಗಳಿಗೆ ಬಿಟ್ಟುಕೊಳ್ಳದಿದ್ದರೆ, ಹಳ್ಳಿಗಳಲ್ಲಿ ಕೊರೊನಾ ಕೇಸ್ ಇರುತ್ತಿರಲಿಲ್ಲ. ಪಾಸಿಟಿವ್ ಬಂದಾಗ […]
ಕಾಣದ ವೈರಸ್ ವಿಶ್ವದ ದೂಡ್ಡ ಆರ್ಥಿಕ ಶಕ್ತಿಗೆ ಪ್ರಭಲ ಪೆಟ್ಟು ನೀಡುತ್ತಿರುವದು ಸುಳ್ಳಲ್ಲ.ವಿಶ್ವದ ದೊಡ್ಡಣ್ಣ, ಅತ್ಯಂತ ಶ್ರೀಮಂತ ರಾಷ್ಟ್ರ ಅಂತಾ ಬಿಲ್ಡಪ್ ಕೊಡುವ ಅಮೆರಿಕದ ಮರ್ಯಾದೆ ಇದೀಗ ಬೀದಿಪಾಲಾಗಿದೆ. ಕೊರೊನಾ ವೈರಸ್ ಅಮೆರಿಕದ ಮಾನ ಹರಾಜು ಹಾಕಿದೆ. ದೊಡ್ಡಣ್ಣನ ನಾಡಿನ ಸ್ಥಿತಿ ಹೇಗಿದೆ ಅಂದರೆ, ಸದ್ಯಕ್ಕೆ ಜೀವ ಉಳಿಸಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಈವರೆಗೆ ೩೯ ಲಕ್ಷ ಕೇಸ್ ಕನ್ಫರ್ಮ್ ಆಗಿವೆ. ನಿನ್ನೆ ಕೂಡ ೬೫ ಸಾವಿರ ಕೇಸ್ ದಾಖಲಾಗಿವೆ. ಪರಿಣಾಮ […]
ಬೀದರ ಜಿಲ್ಲೆಯಲ್ಲಿ ದಿನ ಕಳೆದಂತೆ ಮಹಾಮಾರಿ ಕೊರೊನಾ ಭೀತಿ ಹೆಚ್ಚುತ್ತಿದೆ. ಈ ನಡುವೆ ಸಾಂಕ್ರಾಮಿಕ ರೋಗ ಡೆಂಗ್ಯೂ ಭಿತಿ ಶುರುವಾಗುತ್ತಿದೆ. ಕಳೆದ ಮೂರು ನಾಲ್ಕು ದಿನದಿಂದ ವರುಣ ಕಣ್ಣಾಮುಚ್ಚಾಲೆಯಾಡುತ್ತಿದ್ದು, ನಗರದ ಬಡಾವಣೆಯ ಚೆರಂಡಿಗಳಲ್ಲಿ ಮಳೆ ನೀರು ಹರಿಯದೆ ರಸ್ತೆಯಲ್ಲಾ ತಲಾವರಿಸುತ್ತಿದೆ. ಇದರ ಜೊತೆಯಲ್ಲಿ ಮನೆಗಳಿಗೂ ಚರಂಡಿಯಲ್ಲಿನ ಹೊಲಸು ನೀರು ಮನೆಗಳಿಗೆ ನುಗ್ಗುವ ಭೀತಿ ಶುರವಾಗಿದೆ. ನಗರದ ಕೇಂದ್ರೀಯ ವಿದ್ಯಾಲಯದ ಕಂಪೌಂಡ ಹತ್ತಿರದ ಹಳೆಯ ಆರ್ಶ ಕಾಲೋನಿಯಲ್ಲಿ ಚರಂಡಿಗೆ ಮಳೆ ನೀರು […]
ಕೊರೊನಾ ವೈರಸ್ ಕುರಿತಾದ ನಿಖರ ಮಾಹಿತಿಗಳನ್ನು ಒದಗಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಟ, ನಿರ್ದೇಶಕ ರಮೇಶ್ ಅರವಿಂದ್ ಅವರನ್ನು ತನ್ನ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಕೊರೊನಾ ವೈರಸ್ ಸಂಕಷ್ಟವನ್ನು ನಿಯಂತ್ರಿಸಲು ನೆರವಾಗುವಂತೆ ಅದರ ಕುರಿತು ಜನರಿಗೆ ಅಧಿಕೃತ ಮಾಹಿತಿ ಒದಗಿಸಲು ರಮೇಶ್ ಅರವಿಂದ್ ನೆರವಾಗಲಿದ್ದಾರೆ. ಕೊರೊನಾ ವೈರಸ್ ಸಂಕಷ್ಟವನ್ನು ನಿಭಾಯಿಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಪರಿಣಾಮಕಾರಿ ಫಲಿತಾಂಶಕ್ಕಾಗಿ ಈ ಸಮಿತಿಗೆ ವಿವಿಧ ವಲಯಗಳ ಜನರನ್ನು ಸೇರಿಸಿಕೊಂಡು ರಾಜ್ಯ ಸರ್ಕಾರ ಅವರಿಗೆ ಈ […]