ಸತತವಾಗಿ 23ನೇ ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗಿದೆ. ಆದರೆ, ಕಳೆದರೆಡು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿಲ್ಲ. ಆದರೆ, ಕಳೆದೆರಡು ದಿನಗಳಿಂದ ಯಾವುದೇ ಏರಿಕೆ, ಇಳಿಕೆ ಇಲ್ಲ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲ್ ಹೇಳಿದೆ. ಜೂನ್ 29ರಂದು ಡೀಸೆಲ್ ದರಲ್ಲಿ 13ಪೈಸೆ ಪ್ರತಿ ಲೀಟರ್ ನಂತೆ ಹೆಚ್ಚಳ, ಹಾಗೂ ಪೆಟ್ರೋಲ್ ದರದಲ್ಲಿ 05 ಪೈಸೆ ಏರಿಕೆಯಾಗಿತ್ತು. ಆದರೆ ದೆಹಲಿಯಲ್ಲಿ […]

ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಿದೆ. ಹುಬ್ಬಳ್ಳಿ ತಾಲ್ಲೂಕಿನ ಉಮಚಗಿ ಗ್ರಾಮದ ಗರ್ಭಿಣಿಗೆ ಸಹಜ ಹೆರಿಗೆ ಸಾಧ್ಯವಿಲ್ಲದ ಕಾರಣ ಆಕೆಗೆ ಶಸ್ತ್ರಚಿಕಿತ್ಸೆ ಮಾಡಿ ಹೆರಿಗೆ ಮಾಡಿಸಲಾಗಿದ್ದು, ಇದರಲ್ಲಿ ಕಿಮ್ಸ್ ವೈದ್ಯರ ತಂಡ ಯಶಸ್ವಿಯಾಗಿದೆ. ಆದರೆ ಹುಟ್ಟಿದ ಒಂದು ದಿನಕ್ಕೇ ಮಗುವಿಗೂ ಕೂಡ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯಕ್ಕೆ ಗರ್ಭಿಣಿ ಮಹಿಳೆ ಮತ್ತು ಮಗುವಿಗೆ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.             […]

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿಯ ನಾಗೇನಹಳ್ಳಿ ಗ್ರಾಮ ಸೀಲ್ ಡೌನ್ ಮಾಡಲಾಗಿದೆ. ಈಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಅವರು ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅವರು ಬೇಲೂರು ವಿಧಾನಸಭಾ ಕ್ಷೇತ್ರದ ನಾನಾಕಡೆ  ಸೀಲ್  ಡೌನ್  ಆದ ಊರಿನ ಜನರಿಗೆ ಪಡಿತರ ಕಿಟ್ ನೀಡುವ ಮೂಲಕ  ಧೈರ್ಯ ತುಂಬುತ್ತಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರೊಂದಿಗೆ  ಇಂದು ಅರಸೀಕೆರೆ ತಾಲ್ಲೂಕಿನ ಹೋಬಳಿಯ ನಾಗೇನಹಳ್ಳಿ  […]

ಪೂರ್ವ ದೆಹಲಿಯ ಗಾಂಧಿನಗರದ ವಾಸಿ ಸುಧೀರ್ ಕುಮಾರ್ ಮಕ್ಕರ್ ಅಲಿಯಾಸ್ ಗೋಲ್ಡನ್ ಬಾಬಾ ಇಂದು ನಿಧನರಾಗಿದ್ದಾರೆ. ಬಾಬಾ ಅವರು ಮೂಲತಃ ಉತ್ತರ ಪ್ರದೇಶದ ಘಾಜಿಯಾಬಾದ್ ನವರಾಗಿದ್ದು, ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೋಲ್ಡನ್ ಬಾಬಾ, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗೋಲ್ಡನ್ ಬಾಬಾ ಹರಿದ್ವಾರಕ್ಕೆ ಸೇರಿದ ಹಲವು ಅಖಾಡಗಳೊಂದಿಗೆ ಸಂಬಂಧ ಹೊಂದಿದ್ದರು. ಹಾಗೂ ಗೋಲ್ಡನ್ ಬಾಬಾ ಹಲವು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರು. […]

ಪ್ರಾಣ ಲೆಕ್ಕಿಸದೇ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಮೂಹಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಶುಭ ಕೋರಿದ್ದಾರೆ. ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಸಮಸ್ತ ವೈದ್ಯ ಸಮೂಹಕ್ಕೆ ಹಾಗೂ ಅವರಿಗೆ ಬೆಂಬಲ ನೀಡುತ್ತಿರುವ ಕುಟುಂಬ ಸದಸ್ಯರಿಗೆ ಶುಭಾಶಯಗಳು. ದೇಶವನ್ನು ಸೈನಿಕರು ಕಾಯುವಂತೆ ಜನರ ಆರೋಗ್ಯ ಕಾಪಾಡುವ, ಇನ್ನೊಬ್ಬರ ಪ್ರಾಣ ಉಳಿಸುವ ಮಹಾತ್ಕಾರ್ಯದಲ್ಲಿ ತೊಡಗಿರುವ ವೈದ್ಯರ ಶ್ರಮ ಅಮೂಲ್ಯವಾದದ್ದು. ಕರ್ನಾಟಕದ ಪ್ರತಿಯೊಂದು ಆರೋಗ್ಯ ಕೇಂದ್ರಗಳಲ್ಲಿ […]

ಚಾಮರಾಜನಗರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 4 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಇನ್ನು ಮುಂದೆ ಸಂಜೆ 4 ಗಂಟೆ ನಂತರ ಅಗತ್ಯಸೇವೆಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿದೆ. ವಾಹನ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ […]

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಕುರಿತು ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಹೌದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಲಾಕ್ ಡೌನ್ ತೀರ್ಮಾನ ಸರ್ಕಾರ ಮಾಡುವುದಿಲ್ಲ. ತಜ್ಞರು ಕೊಡುವ ವರದಿ ಆಧಾರದ ಮೇಲೆ ಲಾಕ್ ಡೌನ್ ಮಾಡಬೇಕಾ? ಬೇಡವಾ ಎಂದು ಯೋಚನೆ ಮಾಡುತ್ತೇವೆ ಎಂದು ಹೇಳಿದರು. ಹಾಗೂ ಕೊರೊನಾ […]

ಕೇಂದ್ರ ವಲಯ ಐಜಿ ಸೀಮಂತ್ ಕುಮಾರ್ ಸಿಂಗ್ ರವರು ಗಡಿ ಪರಿಶೀಲನೆಗಾಗಿ ಅತ್ತಿಬೆಲೆಗೆ ಆಗಮಿಸಿದರು. ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಜೊತೆ ಮಾತನಾಡಿ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹಾಗೆಯೇ ತಮಿಳುನಾಡಿನಿಂದ ಬರುವವರನ್ನು ಪರಿಶೀಲನೆ ಮಾಡಿ ಬಿಡುವಂತೆ ಆದೇಶಿಸಿದರು. ಅಲ್ಲದೆ ಪೊಲೀಸರ ಆರೋಗ್ಯದ ಕಾಳಜಿ ನಮ್ಮ ಆದ್ಯತೆಯಾಗಿದೆ. ಸಿಬ್ಬಂದಿ ಕೊರತೆ ಇದ್ದರೆ ಕ್ರಮ ಕೈಗೊಳ್ಳಲು ಚರ್ಚೆ ಮಾಡಲಾಗುವುದು. ಎಸ್ಪಿ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ […]

ಬೀದರ್ ಜಿಲ್ಲೆಯ ಉಪನಿರ್ದೇಶಕ ಚಂದ್ರಶೇಖರ್ ರವರು ಎಸ್ಎಸ್ಎಲ್ ಸಿ ಪರಿಕ್ಷೆಯನ್ನು ಮಕ್ಕಳು ಯಾವುದೇ ಆತಂಕ ವಿಲ್ಲದೆ ಬರೆಯುವುದಕ್ಕೆ ಅನುವು ಮಾಡಿದ ಜಿಲ್ಲಾಡಳಿತ ಕ್ಕೆ ಧನ್ಯವಾದ ಹೇಳಿದರು. 94℅ರಷ್ಟರಂತೆ ಜಿಲ್ಲೆಯಲ್ಲಿ ಒಟ್ಟು 26882 ಮಕ್ಕಳು ಪರೀಕ್ಷೆ ಹಾಜರಾಗಿದ್ದು ಜಿಲ್ಲೆಯಲ್ಲಿ  ಒಟ್ಟು 99 ಪರೀಕ್ಷಾ ಕೇಂದ್ರಗಳು ಇದ್ದು ಕರೋನಾ ವೈರಸ್ ನ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಮಾಜಿಕ ಅಂತರ ಕಾಪಾಡಲು ಹೆಚ್ಚುವರಿಯಾಗಿ ಹತ್ತು ಪರೀಕ್ಷಾ ಕೇಂದ್ರಗಳು ಮಾಡಲಾಗಿದ್ದು. ಸರ್ಕಾರಿ ಸಾರಿಗೆ ವ್ಯವಸ್ಥೆ ಇದ್ದರು […]

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಏಳುತ್ತಿರುವುದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಧಾರವಾಡ ಸೇರಿದಂತೆ 15 ಜಿಲ್ಲೆಗಳಲ್ಲಿ ಗುಡುಡು ಸಹಿತ […]

Advertisement

Wordpress Social Share Plugin powered by Ultimatelysocial