ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನವನ್ನು ಒಂದು ದಿನದ ಮಟ್ಟಿಗೆ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಭವನದಲ್ಲಿ ಎಲ್ಲಾ ಕಚೇರಿಗಳ ಒಳಾಂಗಣ ಮತ್ತು ಹೊರಾಂಗಣ ಸ್ಯಾನಿಟೈಸ್ ಮಾಡಲಾಗಿದೆ.ಸಂಪೂರ್ಣ ಸೀಲ್‌ಡೌನ್ ಮಾಡಿರುವ ಅವಧಿಯಲ್ಲಿ ಯಾವುದೇ ಅಧಿಕಾರಿ, ಸಿಬ್ಬಂದಿ ವರ್ಗದವರು ಕಛೇರಿ ಆವರಣದಲ್ಲಿ ಹಾಜರಾಗುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗದವರು ತಮ್ಮ ಮನೆಯಿಂದಲೇ […]

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೋಂ ಕ್ವಾರಂಟೈನ್ ನಲ್ಲಿರುವ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವವರು ಬಸ್ ಗಳಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಿದೆ. ಕೊರೊನಾ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಗೃಹ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವ ಸಾರ್ವಜನಿಕರು ಬಿಎಂಟಿಸಿಯ ಬಸ್ ಗಳಲ್ಲಿ ಪ್ರಯಾಣಿಸುವುದು ಹಾಗೂ ಬಸ್ ನಿಲ್ದಾಣಗಳಲ್ಲಿ ಓಡಾಡುವುದನ್ನು ನಿಷೇಧಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಆದ್ದರಿಂದ ಪ್ರಯಾಣಿಕರಿಗೆ ಸಂಸ್ಥೆಯ ವತಿಯಿಂದ […]

ಕೊರೊನಾ ವೈರಸ್ ಗೆ ಬೆಂಗಳೂರು ನಲುಗಿ ಹೋಗಿದ್ದು ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಮಾರುಕಟ್ಟೆ ವ್ಯಾಪಾರಿಗಳು ನಿರ್ಧಾರಿಸಿದ್ದಾರೆ. ಬೆಂಗಳೂರಿನಲ್ಲಿ  ಲಾಕ್‍ಡೌನ್ ಸಡಿಲಿಕೆ ಬಳಿಕ ಕೊರೊನಾ ದಿನೇ ದಿನೇ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ  ಸುಮಾರು 50 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 40 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 12 ಮಂದಿ ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. ಆದರಿಂದ್ದ ಮಲ್ಲೇಶ್ವರಂ ವ್ಯಾಪಾರಿಗಳು ಇಂದಿನಿಂದ ಜುಲೈ 7 ರವೆಗೆ […]

ಲೋಕಾಯುಕ್ತ ಸಂಸ್ಥೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಕೆಎಸ್‌ಆರ್‌ಪಿಯ ಇಬ್ಬರು ಕಾನ್‌ಸ್ಟೆಬಲ್‌ಗಳಿಗೆ ಸೋಂಕು ದೃಢವಾಗಿದೆ. ಈ ಹಿನ್ನಲೆ ಲೋಕಾಯುಕ್ತ ಸಂಸ್ಥೆಯನ್ನು ೩ದಿನ ಸೀಲ್‌ಡೌನ್ ಮಾಡಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಮತ್ತು ಇನ್‌ಸ್ಪೆಕ್ಟರ್‌ವೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಪೊಲೀಸ್ ಕಾನ್‌ಸ್ಟೆಬಲ್‌ಗೆ ಕೋವಿಡ್ ೧೯ ಕಾಣಿಸಿಕೊಂಡಿದ್ದು, ಈ ಕಾನ್‌ಸ್ಟೆಬಲ್ ಲೋಕಾಯುಕ್ತ ಸಂಸ್ಥೆಗೂ ಬಂದಿದ್ದರು.ಹೀಗಾಗಿ ಇಬ್ಬರಿಗೆ ಸೋಂಕು ತಗುಲಿದ್ದು, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ೩೦ ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡುವಂತೆ ಸೂಚಿಸಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಹಾಗೂ ಇನ್‌ಸ್ಪೆಕ್ಟರ್ ಈಗಾಗಲೇ […]

ಔರಾದ ತಾಲೂಕಿನ ಜಂಬಗಿ ಗ್ರಾಮದ ಭವಾನಿ ಡಾಬಾ ಹತ್ತಿರ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. 4.40ಲಕ್ಷ ರೂ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾ ಸಾಗಿಸುತ್ತಿದ್ದವರಲ್ಲಿ ಇನ್ನಿಬ್ಬರು ಪರಾರಿಯಾಗಿದ್ದಾರೆ. ಬೈಕ್ ಗಳಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದು ಡಿವೈಎಸ್ ಪಿ.ಡಾ ದೇವರಾಜ್ ನೇತೃತ್ವದ ತಂಡ ದಾಳಿ ನಡೆಸಿದೆ. ಇದರಲ್ಲಿ ಶಿವಾಜಿ ರಾಥೋಡ್  ಎಂಬಾತನನ್ನು ಬಂಧಿಸಿದ್ದು, ಪ್ರಕಾಶ್ ,ರಂಗಲಾಲ್ ಎಂಬುವವರು  ಪರಾರಿಯಾಗಿದ್ದಾರೆ. ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. […]

ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದು. ವೆನ್ಲಾಕ್ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿಯೋರ್ವರಲ್ಲಿ ಸೋಂಕು ದೃಢ ಪಟ್ಟಿದೆ.ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಕೋವಿಡ್ ವಿಭಾಗದ ಮುಖ್ಯಸ್ಥರಲ್ಲಿ ಸೋಂಕು ದೃಢಪಟ್ಟಿದ್ದು ಇಂದು ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೀಗ ಸೋಂಕಿನ ವಿರುದ್ಧ ಹೊರಾಡುತ್ತಿರುವ ಕೊರೊನಾ ವಾರಿಯರ್ಸ್ಗಳಲ್ಲಿ ಪ್ರಕರಣ ದೃಢವಾಗುತ್ತಿರುವ ಹಿನ್ನಲೆ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಬೆAಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಳವಾಗುತ್ತಾದೆ ಆದರೆ ಈಗ ಪರಪ್ಪನ ಅಗ್ರಹಾರ ಜೈಲಿನೊಳಗೂ ಕಾಲಾಟ್ಟಿದೆ. ಕಾರಾಗೃಹದಲ್ಲಿರುವ ೨೬ ಕೈದಿಗಳಿಗೆ ಸೋಂಕು ದೃಢವಾಗಿದೆ. ಇದರಲ್ಲಿ ೨೦ ವಿಚಾರಣಾಧೀನ ಕೈದಿಗಳಾಗಿದ್ದರೆ. ಉಳಿದ ೬ ಜನ ಕಾರಾಗೃಹದ ಸಿಬ್ಬಂದಿಯಾಗಿದ್ದಾರೆ.ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೈದಿಗಳಿದ್ದಾರೆ.ಕೈದಿಗಳಿಗೆÀ ಕೊರೊನಾ ದೃಢವಾಗಿರುವ ಹಿನ್ನಲೆ ಕೈದಿಗಳನ್ನು ಥಣಿಸಂದ್ರ ಬಳಿ ಇರುವ ಹಜ್ ಭವನದಲ್ಲಿ ಇರಿಸಲಾಗಿದೆ. ಜೊತೆಗೆ ಕಾರಾಗೃಹದ ಇತರೆ ಕೈದಿ ಹಾಗೂ ಸಿಬ್ಬಂದಿ ಈ […]

ಉತ್ತರ ಮ್ಯಾನ್ಮಾರ್‌ನ ಜೇಡ್ ಗಣಿಯೊಂದರಲ್ಲಿ ಭೂಕುಸಿತ ಉಂಟಾಗಿದೆ. ಭೂ ಕುಸಿತದಿಂದಾಗಿ ಸುಮಾರು 50 ಮಂದಿ ಮೃತಪಟ್ಟಿದ್ದಾರೆ ಎಂದು ದೇಶದ ಅಗ್ನಿಶಾಮಕ ಸೇವಾ ಇಲಾಖೆ ಮತ್ತು ಮಾಹಿತಿ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಚಿನ್ ರಾಜ್ಯದ ಜೇಡ್ ಪಕಾಂತ್ ಪ್ರದೇಶದಲ್ಲಿ ಗಣಿಗಾರರು ಕಲ್ಲುಗಳನ್ನು ಸಂಗ್ರಹಿಸುತ್ತಿದ್ದರು. ಭಾರೀ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ.  ಒಟ್ಟು 50 ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು, ನಾವು ಇನ್ನೂ ರಕ್ಷಣಾ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ […]

ಕೆಲ ತಿಂಗಳ ಹಿಂದಷ್ಟೇ ಕ್ಲಾರ್ಕ್ ಪತ್ನಿ ಕೈಲಿ, ಕ್ಲಾರ್ಕ್ಗೆ ವಿಚ್ಛೇದನ ನೀಡಿದ್ರು. ಇದೀಗ ಫ್ಯಾಷನ್ ಡಿಸೈನರ್ ಹಾಗೂ ಮಾಡೆಲ್ ಆಗಿರುವ ಪಿಪ್ ಎಡ್ವರ್ಡ್ಸ್ ಅವರೊಂದಿಗೆ ಸಂಬಧ ಹೊಂದಿರುವುದಾಗಿ ಕ್ಲಾರ್ಕ್ ಹೇಳಿಕೊಂಡಿದ್ದಾರೆ.ಕೆಲ ದಿನಗಳಿಂದ ಈ ಜೋಡಿ ಜೊತೆ ಜೊತೆಯಾಗಿ ಓಡಾಡುತ್ತಿರುವ ಫೋಟೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡಿತ್ತು. ಈ ಬಗ್ಗೆ ಕೊನೆಗೂ ಮೌನ ಮುರಿದಿರುವ ೩೯ ವರ್ಷದ ಮಾಜಿ ಬಲಗೈ ಬ್ಯಾಟ್ಸ್ಮನ್, ಪಿಪ್ ಎಡ್ವರ್ಡ್ಸ್ ತಮ್ಮ ನೂತನ ಗೆಳತಿ ಎಂಬುದನ್ನು ಖಾತ್ರಿ […]

Advertisement

Wordpress Social Share Plugin powered by Ultimatelysocial