ಕರ್ನಾಟಕ ಸರ್ಕಾರ ಬಾರ್ ಓಪನ್ ಮಾಡಿ ಮದ್ಯಪ್ರಿಯರಿಗೆ ಕೊರೋನಾ ಗಿಫ್ಟ್ ನೀಡಿದ್ದಾರೆ. ಜನ ಜೀವಭಯದ ಜೊತೆಯೇ ಭರ್ಜರಿಯಾಗಿ ಎಣ್ಣೆ ಹೊಡಿತ್ತಿದ್ದಾರೆ. ಕರ್ನಾಟಕದ ನಿರ್ಧಾರ ನೋಡಿ ಈಗ ತಮಿಳುನಾಡು ಸರ್ಕಾರ ಕೂಡಾ ಬಾರ್ ಓಪನ್ ಮಾಡೋದಕ್ಕೆ ತಯಾರಿ ನಡೆಸಿದೆ. ಈಗಾಗ್ಲೇ ಆರ್ಥಿಕ ಸ್ಥಿತಿ ನೆಲಕಚ್ಚಿರೋದ್ರಿಂದ ಸರ್ಕಾರಗಳು ಅಬಕಾರಿ ಇಲಾಖೆ ಮೇಲೆ ಕಣ್ಣು ಹಾಯಿಸಿವೆ. ಮೇ ಏಳರ ನಂತ್ರ ತಮಿಳುನಾಡಿನಲ್ಲಿ ಬಾರ್ ಓಪನ್ ಮಾಡೋದಕ್ಕೆ ಸರ್ಕಾರ ಯೋಚಿಸಿದೆ. ಇದರ ವಿರುದ್ಧ ನಟ ಕಮಲ್ […]
ಹೈದರಬಾದ್: ಮೋಸ ಹೋಗೋರು ಇರೋವರೆಗೂ ಮೋಸ ಮಾಡುವವರು ಸಹ ಇದ್ದೇ ಇರ್ತಾರೆ. ಮನೆಗೆ ನುಗ್ಗಿ ದರೋಡೆ ಮಾಡೋರನ್ನ ಮುಖ ಕಂಡ್ರೆ ಗುರುತಾದ್ರೂ ಹಿಡೀಬಹುದು. ಆದ್ರೆ, ಯಾರಿಗೂ ಕಾಣಿಸಿದೆ ಕಂಪ್ಯೂಟರ್ನ ಮುಂದೆ ಕುಳಿತು ಚಳ್ಳೆ ಹಣ್ಣು ತಿನ್ನಿಸೋ ಖತರ್ನಾಕ್ಗಳನ್ನ ಹಿಡಿಯೋದು ಸುಲಭದ ಮಾತಲ್ಲ. ಸದ್ಯ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ, ಸಾರ್ವಜನಿಕರು ಹಾಗೂ ಅನೇಕ ಸಂಘ ಸಂಸ್ಥೆಗಳೂ ನೆರವಾಗುತ್ತಿವೆ. ಇದೇ ರೀತಿ ಹೈದರಾಬಾದ್ನ ರ್ರೇಡಪಲ್ಲಿಯ ವಿಶ್ವನಾಥನ್ ಎನ್ನುವ ಸಾಮಾಜಿಕ […]
ನಿನ್ನೆ ನೈಸ್ ರಸ್ತೆಯಲ್ಲಿ 5000ಕ್ಕೂಹೆಚ್ಚು ಕೂಲಿ ಕಾರ್ಮಿಕರು ಅಲ್ಲಿ ಜಮಾವಣೆಯಾಗಿದ್ದರು. ಅವರನ್ನು ಬಲವಂತವಾಗಿ ತಡೆಹಿಡಿಯಲಾಗಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ನಾವು ಯಾರನ್ನೂ ಕೂಡಿಕಾಕಿಲ್ಲ. ಬೇರೆ ರಾಜ್ಯಗಳಿಗೆ ಹೋಗುವ ಯಾರನ್ನೂ ತಡೆಯುವುದಿಲ್ಲ. ತಡೆಯುವ ಪ್ರಯತ್ನವನ್ನೂ ಮಾಡಿಲ್ಲ ಎಂದು ಸಚಿವ ಆರ್. ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಲ್ಲಿಗೆ ಬಂದ ಕಾರ್ಮಿಕರು ಫ್ಯಾಕ್ಟರಿ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಅವರಲ್ಲಿ ಬಹಳಷ್ಟು ತುಮಕೂರಿನ ವಿಮಲ್ ಎಂಬ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. […]
ನವದೆಹಲಿ: ಕೊವಿಡ್-೧೯ ಟ್ರ್ಯಾಕ್ ಮಾಡಲು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಆರೋಗ್ಯ ಸೇತು ಆ್ಯಪ್ನಿಂದ ಸಾರ್ವಜನಿಕರ ಖಾಸಗಿ ಮಾಹಿತಿಗಳು ಸೋರಿಕೆ ಆಗುತ್ತದೆ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದರು. ರಾಹುಲ್ ಗಾಂಧಿಯವರ ಟ್ವೀಟ್ಗೆ ಪ್ರತ್ಯುತ್ತರ ನೀಡಿದ್ದ ಬಿಜೆಪಿ, ಯಾರೂ ಹೆದರಬೇಕಿಲ್ಲ. ಆರೋಗ್ಯ ಸೇತು ಆ್ಯಪ್ನಲ್ಲಿ ಎಲ್ಲರ ಮಾಹಿತಿಗಳೂ ಭದ್ರವಾಗಿರುತ್ತವೆ. ಸೋರಿಕೆಯಾಗುವುದಿಲ್ಲ ಎಂದು ಭರವಸೆ ನೀಡಿತ್ತು. ಆದರೆ ನಿನ್ನೆ ರಾತ್ರಿ ಫ್ರೆಂಚ್ ಹ್ಯಾಕರ್ ರಾಬರ್ಟ್ ಬ್ಯಾಪ್ಟಿಸ್ಟ್ ಎಂಬುವರು ಟ್ವೀಟ್ ಮಾಡುವ […]
ವಾಷಿಂಗ್ಟನ್: ಭಾರತದಲ್ಲಿ ಕಡಿಮೆ ಆದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುತ್ತಿರುವ ಶಾಲೆಗಳಿಗೆ ನಿರ್ಣಾಯಕ ಹಣಕಾಸು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸಲು ಆರಂಭಿಕ ಹಂತದಲ್ಲಿರುವ ಭಾರತದ ಶಿಕ್ಷಣ ಸಂಸ್ಥೆಗಳಿಗೆ ೧೫ ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಅಮೆರಿಕ ಹಣಕಾಸು ಸಂಸ್ಥೆ ಒಪ್ಪಿದೆ. ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿಲ್ಲದ ದೀರ್ಘಕಾಲೀನ ಬಂಡವಾಳದ ಅಗತ್ಯವನ್ನು ಪೂರೈಸುವ ಮೂಲಕ ಹೆಚ್ಚಿನ ಶಾಲೆಗಳನ್ನು ತಲುಪಲು ಬೆಂಗಳೂರು ಮೂಲದ ‘ವರ್ತನಾ’ ಹಣಕಾಸು ಸಂಸ್ಥೆಗೆ ಹಣಕಾಸಿನ ನೆರವು ನೀಡುತ್ತದೆ ಎಂದು […]
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಲು ಚುನಾವಣಾ ಆಯೋಗಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ತಿಂಗಳಲ್ಲಿ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಕೊರೊನಾ ಹಿನ್ನೆಲೆಯಲ್ಲಿ ಮುಂದೂಡುವ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾಗಿ ಗ್ರಾಮ ಪಮಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಬೇಕೊ ಅಥವಾ ಆಡಳಿತ ಸಮಿತಿ ರಚಿಸಬೇಕೋ ಎಂಬ ಚರ್ಚೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ […]
ರಾಜ್ಯದ ಕೃಷಿಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆಗಳನ್ನು ತಡೆಗಟ್ಟುವ ದಿಶೆಯಲ್ಲಿ ರೈತ.ರಿಗೆ ಆನುಕೂಲಕರವಾದ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗಿದೆ. ರಾಜ್ಯ ಸರ್ಕಾರ ಎಲ್ಲ ಹಂತಗಳಲ್ಲಿಯೂ ಕೃಷಿಕರ ಜೊತೆ ಇದೆ. ಈಗಾಗಲೇ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ಕಂತಿನಲ್ಲಿ ಎರಡು ಸಾವಿರ ರೂಪಾಯಿಗಳಂತೆ ಐದು ಕಂತುಗಳ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ. […]
ಅನೇಕ ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಳ್ಳಲು ಬಗರುಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಭೂಸುಧಾರಣಾ ಕಾಯ್ದೆ ಅರ್ಜಿ ಸಲ್ಲಿಸಿದ ಅನೇಕ ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಅಂತಹ ರೈತರಿಗೆ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ ನೀಡಲಾಗುವುದು. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗುತ್ತದೆ. ಫಾರಂ ನಂಬರ್ 50, 53 […]
ಲಾಕ್ಡೌನ್ ಹಿನ್ನಲೆ ಮುಂದೂಡಿದ್ದ ಸಿಬಿಎಸ್ಇ ೧೦ನೇ ತರಗತಿಯ ಬಾಕಿ ವಿಷಯಗಳ ಪರೀಕ್ಷೆಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಈಶಾನ್ಯ ದೆಹಲಿ ಹೊರತುಪಡಿಸಿ ಇತರೆ ಯಾವುದೇ ರಾಜ್ಯದಲ್ಲಿ ಸಿಬಿಎಸ್ಇ ೧೦ನೇ ತರಗತಿಯ ಉಳಿದ ವಿಷಯಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿವಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಈಗಾಗಲೇ ಸಿಬಿಎಸ್ಇ ೧೦ನೇ ತರಗತಿ ಪ್ರಮುಖ ಪತ್ರಿಕೆಗಳ ಪರೀಕ್ಷೆ ಪೂರ್ಣಗೊಂಡಿದೆ. ಬಾಕಿಯಿರುವ ಒಂದೆರಡು ವಿಷಯಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ. ಆದ್ರೆ […]
ಸ್ವಂತ ಊರುಗಳಿಗೆ ಹೋಗುವ ಕಾರ್ಮಿಕರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉದ್ಯೋಗ ಕಾರ್ಡ್ ಒದಗಿಸಿ ಕೆಲಸ ನೀಡಬೇಕು ಎಂದು ಮಾಜಿ ಸಿಎಂ, ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇನ್ನಾದರೂ ರಾಜ್ಯ ಸರ್ಕಾರ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ, ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವ ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಹೋಗುವವರು, ಬರುವವರಿಗೆ ಕಡ್ಡಾಯ ಆರೋಗ್ಯ ತಪಾಸಣೆ ಮಾಡಿಸಿ, ಅಗತ್ಯವೆನಿಸಿದರೆ ಕ್ವಾರಂಟೈನ್ಗೆ ಒಳಪಡಿಸಿ. ಸ್ವಂತ ಊರುಗಳಿಗೆ […]