ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ಟ್ವೀಟ್  ಮುಖಾಂತರ ಸಚಿವ ಡಾ.ಕೆ.ಸುಧಾಕರ್‌ ತಿರುಗೇಟು ನೀಡಿದ್ದಾರೆ. ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ ಎಂದು ವಿಪಕ್ಷ ನಾಯಕರಿಗೆ ಸಚಿವ ಡಾ.ಕೆ.ಸುಧಾಕರ್‌ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ  ಮಾತನಾಡಿದ  ಅವರು, ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಜನ ಬರಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ವಿರೋಧವಿಲ್ಲ. ಇದಕ್ಕಾಗಿ ಪ್ರಧಾನಿಗೆ ಪತ್ರವನ್ನು ಅವರು ಬರೆದಿದ್ದರು ಎಂದು ದೇವೇಗೌಡರು ಈ ಹಿಂದೆ ಮಾಡಿದ್ದ […]

ಹುಬ್ಬಳ್ಳಿ: ಕೊರೊನಾ ಲಾಕ್‌ಡೌನ್ ಹಿನ್ನಲೆ ದೇಶದ ಜನತೆ ಸಹಾಯ ಹಸ್ತ ನೀಡುತ್ತಿದ್ದಾರೆ. ವಾಣಿಜ್ಯ ನಗರಿಯ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಹಾರ ಧಾನ್ಯ ವರ್ತಕರ ಸಂಘದಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಕೊರೊನಾ ನಿಧಿಗೆ ೬.೫೦ ಲಕ್ಷ ರೂ. ದೇಣಿಗೆ ಹಣವನ್ನು ಜಗದೀಶ ಶೆಟ್ಟರ್ ಮೂಲಕ ಅರ್ಪಿಸಲಾಯಿತು. ಎಪಿಎಂಸಿಯ ವರ್ತಕರು ಜವಾಬ್ದರಿಯಿಂದ ವರ್ತಿಸಬೇಕು. ರೈತರ ತರಕಾರಿ, ಇತರ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚು ಬೆಲೆಗೆ ಮಾರಾಟ ಮಾಡುವ […]

ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ನಿಧನಕ್ಕೆ ಮಾಜಿ ಸಿಎಂ  ಸಿದ್ದರಾಮಯ್ಯ ಟ್ವೀಟ್ ಮೂಲಕ  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ”ಸಾಮಾಜಿಕ ಹೋರಾಟಗಾರ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ. ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವ ನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ಟ್ವೀಟ್ ಮಾಡಿದ್ದಾರೆ.

ಚೀನಾದ ಪರೀಕ್ಷಾ ಕಿಟ್ ಬಳಸುವ ಬದಲು, ಕೇರಳ ಅಭಿವೃದ್ಧಿ ಪಡಿಸಿದ ಪರೀಕ್ಷಾ ವಿಧಾನ ಬಳಸಿ ಎಂದು ಸಂಸದ ಶಶಿ ತರೂರ್ ಟ್ವೀಟ್ ಮುಖಾಂತರ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಚೀನಾದ ದೋಷಯುಕ್ತ ಕೊರೊನಾ ವೈರಸ್ ಪರೀಕ್ಷಾ ಕಿಟ್ಗಳನ್ನು ಅವಲಂಬಿಸುವ ಬದಲು, ಕೇರಳದ ಸಂಸ್ಥೆಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಪರೀಕ್ಷಾ ವಿಧಾನಗಳನ್ನು ಬಳಸುವುದು  ಉತ್ತಮ. ಈ ವಿಧಾನವನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅನುಮೋದಿಸಬೇಕು ಎಂದು ಹೇಳಿದ್ದಾರೆ.

ದೆಹಲಿ: ಇಡೀ ದೇಶವೇ ಕೊರೊನಾದಿಂದ ತತ್ತರಿಸಿದೆ.ಕೊರೊನಾ ವೈರಸ್ ಜಗತ್ತಿನಾದ್ಯಂತ ತೀವ್ರವಾಗಿ ಹರಡುತ್ತಿದೆ. ಹೀಗಾಗಿ ಹಲವು ಮಂದಿ ದೇವರ ಮೊರೆಹೋಗುತ್ತಿದ್ದಾರೆ. ಅದೇ ರೀತಿಯಾಗಿ ಬಾಲಿವುಡ್ ನಟಿ ಹಿನಾ ಖಾನ್ ಕೂಡಾ ಕೊರೊನಾ ನಿವಾರಣೆಗಾಗಿ ಅಲ್ಲಾನ ಮೊರೆ ಹೋಗಿದ್ದಾರೆ. ಕೊರೊನಾ ಪೀಡಿತರು ಆದಷ್ಟೂ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಎಲ್ಲರ ಯೋಗಕ್ಷೇಮಕ್ಕಾಗಿ ನಟಿ ಪ್ರಾರ್ಥನೆ ಮಾಡಿ, ಎಲ್ಲರಿಗೂ ರಂಜಾನ್ ಹಬ್ಬ ಶುಭ ತರಲಿ ಎಂದು ಪ್ರಾರ್ಥಿಸಿದ್ದಾರೆ.

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಸರ್ಕಾರ ಮುಂದಾಗಿದೆ. ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಚಾಲನೆ ನೀಡಿದರು. ಇಂದು ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಪ್ರಯೋಗ ಆರಂಭವಾಗಿದ್ದು, ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಮೊದಲ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್​​ಗೆ ಚಾಲನೆ ನೀಡಲಾಗಿದೆ. ಕೊರೊನಾದಿಂದ ಗುಣಮುಖರಾದ ಇಬ್ಬರು ಪ್ಲಾಸ್ಮಾ ದಾನ ಮಾಡಲು ಮುಂದೆ ಬಂದಿದ್ದಾರೆ. ಪ್ಲಾಸ್ಮಾ ವಿಂಗಡಣೆ ಒಂದು […]

ಮೈಸೂರು: ಕೊರೊನಾ ಹಿನ್ನಲೆ ಕೆಎಸ್‌ಆರ್‌ಟಿಸಿ ಹಳೆ ಬಸ್ಸೊಂದನ್ನು ಆಧುನೀಕರಣಗೋಳಿಸಿ, ಅದನ್ನು ಸಂಚಾರಿ ಫೀವರ್ ಕ್ಲಿನಿಕ್ ಸೇವೆಗೆ ಇಳಿಸಲಾಗಿದೆ. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಈ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದರು. ಈ ಬಸ್ಸಿನಲ್ಲಿ ಆಸ್ಪತ್ರೆಯಲ್ಲಿರುವ ಸೌಲಭ್ಯಗಳೆಲ್ಲವೂ ಇವೆ. ವೈದ್ಯಾಧಿಕಾರಿಗಳು, ನರ್ಸ್ಗಳು, ಟೇಬಲ್, ಫ್ಯಾನ್ ಹಾಗೂ ರೋಗಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರಿನ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಜನರಿಗೆ ಸಹಾಯಕವಾಗಲು ಇಂತಹ ವ್ಯವಸ್ಥೆ ಕಲ್ಪಿಸಲಾಗಿದೆ.

ಭಾರತ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಬಡವರು, ಕೂಲಿ ಕಾರ್ಮಿಕರಿಗೆ ಆರ್ ಎಸ್ ಎಸ್ ಕಾರ್ಯಕರ್ತರು ಆಹಾರ ಪದಾರ್ಥಗಳ ಕಿಟ್ ವಿತರಿಸಿಕೊಂಡು ಬರುತ್ತಿದ್ದು, ಇಂದು ಕಾಡುಗುಡಿ ಸಮೀಪದ ದಿನ್ನೂರು ಗ್ರಾಮದಲ್ಲಿ ನೆಲೆಸಿರುವ ಮಂಗಳಮುಖಿಯರ ಕಷ್ಟವನ್ನು ಕಂಡು ಅವರಿಗು ಸಹ  ಆರ್.ಎಸ್.ಎಸ್ ಕಾರ್ಯಕರ್ತ ಹರಿಕೃಷ್ಣ ಯಾದವ್ ಹಾಗೂ ತಂಡದವರು ಆಹಾರ ಪದಾರ್ಥಗಳು ಹಾಗೂ ತರಕಾರಿಗಳ ಕಿಟ್ ವಿತರಿಸಿದರು.

ಮಂಡ್ಯ:  ಮಂಡ್ಯದಲ್ಲಿ ಶಾಸಕನ ಪುತ್ರನೊಬ್ಬ ಮನೆ ಸಮೀಪ ಕೊರೊನಾ ಟೆಸ್ಟ್ ಮಾಡಬೇಡಿ ಎಂದು ಕ್ಯಾತೆ ತೆಗೆದು ಮಾಧ್ಯಮದ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಮಂಡ್ಯ ಎಂಎಲ್ಸಿ ಕೆ.ಟಿ ಶ್ರೀಕಂಠೇಗೌಡ ಮಗ ಹಲ್ಲೆ ನಡೆಸಿದ್ದಾನೆ.  ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ನಡೆಸಲು ಶಾಸಕ ಶ್ರೀಕಂಠೇಗೌಡ ಮನೆ ಸಮೀಪದ  ಅಂಬೇಡ್ಕರ್ ಭವನದಲ್ಲಿ ಜಾಗ ಗುರುತು ಮಾಡಲಾಗಿತ್ತು. ಅಂಬೇಡ್ಕರ್ ಭವನಕ್ಕೆ ಪತ್ರಕರ್ತರು ಆಗಮಿಸುತ್ತಿದ್ದಂತೆ ಶ್ರೀಕಂಠೇಗೌಡ ಮಗ ಮಾಧ್ಯಮದವರ ಮೇಲೆ ಗಲಾಟೆ ಮಾಡಿ […]

ಲಾಕ್‌ಡೌನ್ ಹಿನ್ನಲೆಯಲ್ಲಿ ಬಡವರಿಗೆ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಅಂತಹವರಿಗೆ ಕೆಲವೊಂದಿಷ್ಟು ಜನರು ಸಹಾಯ ಮಾಡುತ್ತಿದ್ದಾರೆ. ಹೆಬ್ಬಾಳದ ಸುಮಾರು ೪೫೦ ಅರ್ಚಕರಿಗೆ ಮಾಜಿ ಸಚಿವ ಕಟ್ಟ ಸುಬ್ರಹ್ಮಣ್ಯ ನಾಯ್ಡು ಆಹಾರ ಹಾಗೂ ತರಕಾರಿ ಕಿಟ್ ವಿತರಿಸಿದರು. ಹಿರಿಯ ನಾಗರಿಕರಿಗೆ ಮತ್ತು ಸಾವಿರಾರು ಜನರಿಗೆ ಪ್ರತಿನಿತ್ಯ ಊಟ ಹಂಚುತ್ತಿದ್ದಾರೆ ಇವರ ಕಾರ್ಯಕ್ಕೆ ಬಸವರಾಜ ಬೊಮ್ಮಾಯಿ ಕೂಡ ಸಾಥ್ ನೀಡಿದ್ದಾರೆ.

Advertisement

Wordpress Social Share Plugin powered by Ultimatelysocial