ಶಾಸಕ ಜಮೀರ್ ಅಹ್ಮದ್ ಅವರನ್ನ ಹೋಮ್ ಕ್ವಾರಂಟೈನ್ ಮಾಡಬೇಕು ಅಂತ ಆರೋಗ್ಯ ಸಚಿವ ಶ್ರೀರಾಮುಲು ಬಳ್ಳಾರಿಯಲ್ಲಿ ಹೇಳಿದ್ದಾರೆ. ಅಲ್ಲದೆ ಪಾದರಾಯನ ಪುರಕ್ಕೆ ಭೇಟಿ ನೀಡಿದ್ದ ಗೃಹಸಚಿವ ಬಸವರಾಜ್ ಬೊಮ್ಮಯಿ ಅವರನ್ನ ಕೂಡಾ ತಪಾಸಣೆ ಮಾಡಬೇಕಿದೆ ಅಂತ ಹೇಳಿದ್ದಾರೆ. ಈ ಹಿಂದೆ ವೃದ್ಧೆಯೊಬ್ಬರ ಸಾವಿಗೆ ಜಮೀರ್ ಅಹ್ಮದ್ ತೆರಳಿದ್ರು. ಅಲ್ಲಿ ಸುಮಾರು ೨೫ ಜನ ಸೇರಿದ್ರು. ಹೀಗಾಗಿ ಶಾಸಕ ಜಮೀರ್ ಅವರನ್ನ ಹೋಮ್ ಕ್ವಾರಂಟೈನ್ ಮಾಡಬೇಕು ಅಂತ ಹೇಳಿದ್ದಾರೆ.

ರಾಮನಗರ: ಪಬ್ಲಿಕ್ ಟಿವಿ ವರದಿಗಾರ ಹನುಮಂತ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗದಲ್ಲಿ ನಡೆದಿದೆ.  ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಪಬ್ಲಿಕ್ ವರದಿಗಾರ ಹನುಮಂತು ಕಳೆದ 6 ವರ್ಷಗಳಿಂದಲೂ ರಾಮನಗರ ವದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹನುಮಂತು ನಿಧನಕ್ಕೆ ರಾಮನಗರ ಜಿಲ್ಲಾ ಪತ್ರಕರ್ತರು ಸಹೋದ್ಯೋಗಿಗಳು ಕಂಬನಿ‌ ಮಿಡಿದಿದ್ದಾರೆ.    

ನವದೆಹಲಿ: ೨೪ ಗಂಟೆಯಲ್ಲಿ ದೇಶದಲ್ಲಿ ೧೮,೬೦೧ ಕೋವಿಡ್ ಸೋಂಕು ಪ್ರಕರಣಗಳ ಪೈಕಿ ೩,೨೫೧ ಮಂದಿ ಗುಣಮುಖರಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ ೧೪,೭೫೯ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ೫೯೦ ಮಂದಿ ಮೃತಪಟ್ಟಿದ್ದಾರೆ. ಮಹಾರಾಷ್ಟದಲ್ಲಿ ಅತಿ ಹೆಚ್ಚು ಸಾವು ಸಂಭವಿಸಿದ್ದು, ಒಟ್ಟು ೪,೬೬೬ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಹಾಗೆಯೇ ದೆಹಲಿಯಲ್ಲಿ ೨,೦೮೧ ಪ್ರಕರಣಗಳು, ೪೭ ಮಂದಿ ಸಾವನ್ನಪ್ಪಿದ್ದು, ತಮಿಳುನಾಡಿನಲ್ಲಿ ೧,೫೭೬ ಪ್ರಕರಣಗಳು, ೧೭ ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ […]

ನ್ಯೂಯಾರ್ಕ್‌: ಅಮೆರಿಕ ರಾಷ್ಟ್ರೀಯ ವಿಜ್ಞಾನ ಮಂಡಳಿಗೆ ಭಾರತೀಯ ಮೂಲದ ವಿಜ್ಞಾನಿ ಸುದರ್ಶನಂ ಬಾಬು ಅವರನ್ನು ನೇಮಕ ಮಾಡುವಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶ ಹೊರಡಿಸಿದ್ದಾರೆ. ಈ ಮೂಲಕ, ವಿಶ್ವವಿಖ್ಯಾತವಾಗಿರುವ ಈ ಮಂಡಳಿಗೆ ಆಯ್ಕೆ ಆಗಿರುವ ಮೂರನೆಯ ಭಾರತೀಯರು ಸುದರ್ಶನಂ ಎನಿಸಿಕೊಂಡಿದ್ದಾರೆ. ಪರಿಸರ ವ್ಯವಸ್ಥೆಯಲ್ಲಿ ಸಂಶೋಧನೆ ಕೈಗೊಳ್ಳುವುದು, ಕೈಗಾರಿಕೆಗಳ ಉತ್ಪಾದನೆಯ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವುದರ ಜತೆಗೆ, ಅದಕ್ಕೆ ಸಂಬಂಧಿಸಿದಂತೆ ಪರಿಹಾರಗಳನ್ನು ಒದಗಿಸುವುದು ಹಾಗೂ ಇಂಧನ ಇಲಾಖೆಯ ಉತ್ಪಾದನಾ ಸಾಮರ್ಥ್ಯದ ಹೆಚ್ಚಳ […]

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಅಗತ್ಯ ಸೇವೆ ಸಲ್ಲಿಸಲು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ರೋಬೋಗಳನ್ನ ತಯಾರಿಸಲು ಮುಂದಾಗಿದೆ. ಕೊರೊನಾ ಸೋಂಕಿತರೊಂದಿಗೆ ವೈದ್ಯರು ಮತ್ತು ಇತರೆ ಆರೋಗ್ಯ ಕಾರ್ಯಕರ್ತರು ಪದೇ ಪದೇ ಸಂಪರ್ಕ ಹೊಂದುವುದರಿಂದ ಅವರಿಗೂ ಸೋಂಕು ತಗುಲುವ ಸಾಧ್ಯತೆಯಿದೆ. ಹೀಗಾಗಿ, ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವಿಶೇಷ ವಾರ್ಡ್ಗಳಲ್ಲಿ, ಪ್ರಾಥಮಿಕ ಉಪಚಾರ ಹಾಗೂ ಆರೈಕೆಗೆ ಈ ರೋಬೋಗಳನ್ನು ಬಳಸಬಹುದು ಎಂದು ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು […]

  ನವದೆಹಲಿ: ರಾಸಾಯನಿಕ ಸೋಂಕು ನಿವಾರಕಗಳ ಸಿಂಪಡಣೆಯಿಂದ ದೈಹಿಕ ಅಥವಾ ಮಾನಸಿಕ ಹಾನಿ ಉಂಟಾಗಬಹುದು ಎಂದು ಕೇಂದ್ರ ಆರೋಗ್ಯ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಕೋರೊನಾ ತಡೆಗಟ್ಟುವ ಉದ್ದೇಶದಿಂದ ದೇಶದ ಅನೇಕ ಪ್ರದೇಶಗಳ ತರಕಾರಿ ಮಾರುಕಟ್ಟೆ, ಸರಕಾರಿ ಆಸ್ಪತ್ರೆಗಳಲ್ಲಿ ರೋಗನಿರೋಧಕ ಸುರಂಗಗಳನ್ನು ಸ್ಥಾಪಿಸಿರುವ ಸಂದರ್ಭದಲ್ಲಿ ಸಚಿವಾಲಯ ಈ ಎಚ್ಚರಿಕೆ ನೀಡಿದೆ. ಈ ರೀತಿಯಾಗಿ ಸೋಂಕು ನಿವಾರಕಗಳ ಸಿಂಪಡಣೆ ಮಾಡುವುದರಿಂದ ಜನರಲ್ಲಿ ನಾವು ಸುರಕ್ಷಿತರಾಗಿದ್ದೇವೆ ಎನ್ನುವ ತಪ್ಪು ಕಲ್ಪನೆಯನ್ನು ಮೂಡಿಸುತ್ತದೆ. […]

ನವದೆಹಲಿ:  ಕೊರೊನಾ ವೈರಸ್ ಸೋಂಕಿನಿಂದ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಅಮೆರಿಕದ ನಾಗರಿಕರ ಉದ್ಯೋಗ ರಕ್ಷಣೆಗಾಗಿ ವಲಸಿಗರ ಪ್ರವೇಶಕ್ಕೆ ಡೊನಾಲ್ಟ್ ಟ್ರಂಪ್ ನಿರ್ಬಂಧ ಹೇರಲು ನಿರ್ಧರಿಸಿದ್ದಾರೆ. ಕೊವಿಡ್‌ನ ದಾಳಿ ಎದುರಿಸುತ್ತಿರುವ ಸಮಯದಲ್ಲಿ ನಮ್ಮ ಅಮೆರಿಕಾದ ಪ್ರಜೆಗಳ ಉದ್ಯೋಗ ಕಾಪಾಡುವುದು ಅವಶ್ಯವಾಗಿದೆ. ಅಮೆರಿಕಕ್ಕೆ ವಲಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸುವ ಕಾರ್ಯದ ಆದೇಶಕ್ಕೆ ಸಹಿ ಮಾಡಲಿದ್ದೇನೆ ಎಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ. ಕಳೆದ ತಿಂಗಳಿನಿಂದ ೨.೨ ಕೋಟಿ ಅಮೆರಿಕನ್ನರು ನಿರುದ್ಯೋಗ ಸೌಲಭ್ಯಗಳನ್ನು ಬಯಸಿದ್ದಾರೆ. ೧೦ ಲಕ್ಷಜನರು […]

ಆಶಾ ಕಾರ್ಯಕರ್ತೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಗೆ ನಿಂದಿಸಿ ಹಲ್ಲೆ ಮಾಡುವವರು, ಧಮ್ಕಿ ಹಾಕಿದವರು ಮನುಷ್ಯರಲ್ಲ, ಮೃಗಗಳು. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.  

ಬೆಂಗಳೂರು.ಏ.21 : ಕಲಬುರಗಿಯಲ್ಲಿ ಬಲಿಯಾದ 80 ವರ್ಷದ ವೃದ್ಧನಿಗೆ ಮಾರಕ ಕೊರೊನಾ ಸೋಂಕು ತಗುಲಿದ್ದು ಖಚಿತವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮುಖಾಂತರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಲಬುರ್ಗಿಯಲ್ಲಿ ನಿನ್ನೆ ಬೆಳಗ್ಗೆ ಸಾವನ್ನಪ್ಪಿದ 80 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಕಳೆದ 3 ವರ್ಷಗಳಿಂದ ಈ ವ್ಯಕ್ತಿ ಪಾರ್ಕಿನ್ಸನ್ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಿದರು.

ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮದ್ ನೇರ ಕಾರಣರಾಗಿದ್ದು, ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದರಾಯನಪುರದಲ್ಲಿ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿಯ ಮೇಲೆ ನಡೆಸಿದ ಹಲ್ಲೆ ಖಂಡನೀಯ. ಈ ಪ್ರಕರಣದಲ್ಲಿ ಬಿಬಿಎಂಪಿ ಮತ್ತು ಪೊಲೀಸ್ ಸಿಬ್ಬಂದಿಯ ನಡೆಯೇ ತಪ್ಪು ಎಂಬಂತೆ ಮಾತನಾಡಿರುವ ಶಾಸಕರ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ನ್ಯಾಷನಲ್ ಸೆಕ್ಯೂರಿಟಿ […]

Advertisement

Wordpress Social Share Plugin powered by Ultimatelysocial