ಪಾಕ್‌ ನೆಲದಲ್ಲೇ ಭಾರತಕ್ಕೆ ಬೇಕಿದ್ದ ನಾಲ್ವರು ಭಯೋತ್ಪಾದಕರು ಅಪರಿಚಿತರಿಂದ ಹತ್ಯೆ.

 

ಪರಿಚಿತ ಬಂದೂಕುಧಾರಿಗಳಿಂದ ಕಳೆದೊಂದು ವಾರದಲ್ಲಿ ಭಾರತಕ್ಕೆ ಬೇಕಾಗಿದ್ದು ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ 4 ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಇದರಿಂದ ಪಾಕ್ ನಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದಕರಲ್ಲಿ ನಡುಕ ಶುರುವಾಗಿದೆ.ಸೈಯದ್ ನೂರ್ ಶಲೋಬರ್, ಸೈಯದ್ ಖಾಲಿದ್ ರಜಾ, ಐಜಾಜ್ ಅಹ್ಮದ್ ಅಹಂಗರ್ ಅಲಿಯಾಸ್ ಅಬು ಉಸ್ಮಾನ್ ಅಲ್-ಕಾಶ್ಮೀರಿ ಮತ್ತು ಬಶೀರ್ ಅಹ್ಮದ್ ಪೀರ್ ಅಲಿಯಾಸ್ ಇಮ್ತಿಯಾಜ್ ಆಲಂ ಎಂಬ ಉಗ್ರರು ತ್ಯೆಯಾಗಿದ್ದಾರೆ.ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಿನ್ನೆ ಅಪರಿಚಿತ ಬಂದೂಕುಧಾರಿಗಳಿಂದ ಸೈಯದ್ ನೂರ್ ಶಲೋಬರ್ ಹತ್ಯೆ ಯಾಗಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಹರಡಲು ಸೈಯರ್ ನೂರ್ ಶಲೋಬರ್ ಕಾರಣನಾಗಿದ್ದನು ಮತ್ತು ಪಾಕಿಸ್ತಾನದ ಸೇನೆ ಮತ್ತು ISI ಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದನು ಎಂದು ವರದಿಯಾಗಿದೆ. ಕಾಶ್ಮೀರ ಕಣಿವೆಯಿಂದ ಭಯೋತ್ಪಾದಕರ ನೇಮಕಾತಿಗೆ ಆತ ಕಾರಣನಾಗಿದ್ದ.ಸೋಮವಾರ ಮತ್ತೋರ್ವ ಭಯೋತ್ಪಾದಕ ಕಮಾಂಡರ್ ಸೈಯದ್ ಖಾಲಿದ್ ರಜಾ ಪಾಕಿಸ್ತಾನದ ಕರಾಚಿಯಲ್ಲಿ ಹತನಾದ. ಅಪರಿಚಿತ ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವರದಿಗಳ ಪ್ರಕಾರ ಸೈಯದ್ ಖಾಲಿದ್ ಕಾಶ್ಮೀರದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕರೊಂದಿಗೆ ಸಂಬಂಧ ಹೊಂದಿದ್ದ. ಸಿಂಧುದೇಶ್ ರೆವಲ್ಯೂಷನರಿ ಆರ್ಮಿ (ಎಸ್‌ಆರ್‌ಎ) ಖಾಲಿದ್ ರಜಾ ಹತ್ಯೆಯ ಹೊಣೆ ಹೊತ್ತುಕೊಂಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಬಿಡಿ ಬಗ್ಗೆ ನಾಲಿಗೆ ಹರಿಬಿಟ್ಟ ಗೌತಮ್ ಗಂಭೀರ್ ವಿರುದ್ಧ ಅಭಿಮಾನಿಗಳ ಆಕ್ರೋಶ.

Mon Mar 6 , 2023
  ಗೌತಮ್ ಗಂಭೀರ್ ಮತ್ತೊಮ್ಮೆ ಆರ್​​ಸಿಬಿ ಅಭಿಮಾನಿಗಳನ್ನು ಕೆಣಕಿದ್ದಾರೆ. ಮಿಸ್ಟರ್ 360 ಆಟಗಾರ ಎಬಿ ಡಿವಿಲಿಯರ್ಸ್ ಬಗ್ಗೆ ಗಂಭೀರ್ ನಾಲಿಗೆ ಹರಿಬಿಟ್ಟಿದ್ದಾರೆ. ಚಿನ್ನಸ್ವಾಮಿ ಅಂಗಳದಲ್ಲಿ ಯಾರು ಬೇಕಾದರೂ ರನ್ ಗಳಿಸಬಹುದು ಎನ್ನುವ ಮೂಲಕ ಡಿವಿಲಿಯರ್ಸ್ ದಾಖಲೆಗಳನ್ನು ಪ್ರಶ್ನಿಸಿದ್ದಾರೆ.ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ಫ್ರಾಂಚೈಸಿಯ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೊತೆ ಎಬಿ ಡಿವಿಲಿಯರ್ಸ್ ಬಿಡಿಸಲಾರದ ನಂಟು ಹೊಂದಿದ್ದಾರೆ. ಎಬಿಡಿ ಬಗ್ಗೆ ಆರ್ ಸಿಬಿ ಅಭಿಮಾನಿಗಳು […]

Advertisement

Wordpress Social Share Plugin powered by Ultimatelysocial