ಪಾಕ್, ಶ್ರೀಲಂಕಾ ನಿಯಂತ್ರಣಕ್ಕೆ ಚೀನಾ ಯತ್ನ.

 

 

ಪಾಕಿಸ್ತಾನ ಮತ್ತು ಶ್ರೀಲಂಕಾಕ್ಕೆ ಸಾಲ ನೀಡುವ ಮೂಲಕ ಬಲವಂತವಾಗಿ ಈ ದೇಶಗಳನ್ನು ಹತೋಟಿಗೆ ತೆಗೆದುಕೊಳ್ಳಲು ಚೀನಾ ಬಯಸುತ್ತಿದೆ ಎಂದು ಅಮೇರಿಕಾ ತೀವ್ರ ಕಳವಳ ವ್ಯಕ್ತಪಡಿಸಿದೆ.“ಭಾರತದ ನೆರೆಹೊರೆಯ ದೇಶಗಳಾದ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕೆ ಚೀನಾ ಸಾಲನೀಡುವ ಮೂಲಕ ಈ ದೇಶಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಚೀನಾ ಬಯಸಿದೆ ಎಂದು ಅಮೇರಿಕಾದ ವಿದೇಶಾಂಗ ಇಲಾಖೆ ತಿಳಿಸಿದೆ.ದಕ್ಷಿಣ ಮತ್ತು ಮಧ್ಯ ಏಷ್ಯಾದ ಸಹಾಯಕ ಕಾರ್ಯದರ್ಶಿ ಡೊನಾಲ್ಡ್ ಲು ಸುದ್ದಿಗಾರರಿಗೆ ಮಾತನಾಡಿ ಈ ವಿಷಯ ತಿಳಿಸಿದ್ದುನೀಡಿದ ಸಾಲಗಳನ್ನು ಬಲವಂತದ ಹತೋಟಿಗೆ ಬಳಸಬಹುದೆಂದು ತೀವ್ರವಾಗಿ ಚಿಂತಿಸುತ್ತಿದ್ದೇವೆ” ಎಂದು ಅವರು ಹೇಳಿದ್ಧಾರೆ.ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅಮೆರಿಕದ ಉನ್ನತ ರಾಜತಾಂತ್ರಿಕರು ಮಾರ್ಚ್ ೧ ರಿಂದ ೩ ರವರೆಗೆ ಮೂರು ದಿನಗಳ ಅಧಿಕೃತ ಭೇಟಿಗಾಗಿ ನವದೆಹಲಿಗೆ ಪ್ರಯಾಣಿಸುತ್ತಿದ್ದು ಈ ನಡುವೆ ಅಮೇರಿಕಾ ಚೀನಾ ಮೇಲೆ ಗಂಬೀರ ಆರೋಪ ಮಾಡಿದೆ.ಪ್ರಶ್ನೆಯೊಂದಕ್ಕೆ ಉತ್ತರಿಸಿದ ಲು, ಚೀನಾದ ವಿಷಯದ ಬಗ್ಗೆ ಭಾರತ ಮತ್ತು ಅಮೇರಿಕಾ ನಡುವೆ ಗಂಭೀರ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.ಚೀನಾದ ಬಗ್ಗೆ ಗಂಭೀರ ಸಮಾಲೋಚನೆ ನಡೆಸಿದ್ದೇವೆ, ಈ ಕಣ್ಗಾವಲು ಬಲೂನ್‌ನ ಇತ್ತೀಚಿನ ಹಗರಣದ ಮೊದಲು ಆದರೆ ನಂತರದ ದಿನಗಳಲ್ಲಿ ಮಾತುಕತೆ ನಡೆಯುತ್ತಿವೆ ಎಂದಿದ್ಧಾರೆ.ಭಾರತವನ್ನು ಒಳಗೊಂಡಿರುವ ಈ ಪ್ರದೇಶದಲ್ಲಿನ ದೇಶಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಲು ಮತ್ತು ಯಾವುದೇ ಹೊರಗಿನ ಪಾಲುದಾರರಿಂದ ಬಲವಂತವಾಗಿರಬಾರದು ಎಂದು ದಕ್ಷಿಣ ಮತ್ತು ಮಧ್ಯ ಏಷ್ಯಾದ ಸಹಾಯಕ ಕಾರ್ಯದರ್ಶಿ ಡೊನಾಲ್ಡ್ ಲು ಹೇಳಿದ್ದಾರೆ.ಈ ಸಂಬಂಧ ಭಾರತದೊಂದಿಗೆ ಮಾತನಾಡುತ್ತಿದ್ದೇವೆ, ದೇಶಗಳು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಲು ನಾವು ಹೇಗೆ ಸಹಾಯ ಮಾಡುತ್ತೇವೆ ಎಂಬುದರ ಕುರಿತು ಈ ದೇಶಗಳೊಂದಿಗೆ ಮಾತನಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಧುಮೇಹವು ಅತಿ ಹೆಚ್ಚು ಜನರನ್ನು ಬಾಧಿಸುತ್ತಿರುವ ಕಾಯಿಲೆಯಾಗಿದೆ.

Wed Mar 1 , 2023
ಬೆಂಗಳೂರು : ಮಧುಮೇಹವು ಅತಿ ಹೆಚ್ಚು ಜನರನ್ನು ಬಾಧಿಸುತ್ತಿರುವ ಕಾಯಿಲೆಯಾಗಿದೆ. ಮಧುಮೇಹವನ್ನು ನಿಯಂತ್ರಣದಲ್ಲಿಡಬೇಕಾದರೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸುವುದು ಅಗತ್ಯ. ರಕ್ತದಲ್ಲಿನ ಸಕ್ಕರೆಯನ್ನು ಸಮತೋಲನದಲ್ಲಿಡಲು, ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವ ಆಹಾರವನ್ನು ಸೇವಿಸುವುದರೊಂದಿಗೆ ಔಷಧಿಗಳ ಜೊತೆಗೆ ನಿಮ್ಮ ಸಕ್ಕರೆಯನ್ನು ಸುಲಭವಾಗಿ ನಿಯಂತ್ರಿಸುವ ಕೆಲವು ನೈಸರ್ಗಿಕ ಉತ್ಪನ್ನಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಇಲ್ಲಿ ನಾವು ಮಧುಮೇಹ ರೋಗಿಗಳಿಗೆಪ್ರಯೋಜನಕಾರಿಯಾದ ಆಯುರ್ವೇದ ಗಿಡಮೂಲಿಕೆಗಳ ಬಗ್ಗೆ ಹೇಳಲಿದ್ದೇವೆ. ಈ ಪುಡಿಯನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಿಕೊಳ್ಳಬಹುದು. ಖಾಲಿ […]

Advertisement

Wordpress Social Share Plugin powered by Ultimatelysocial