ಪ್ಯಾನ್‌ ಇಂಡಿಯಾ ಚಿತ್ರದಲ್ಲಿ ಆದಿತ್ಯ; ‘ಟೆರರ್’ ಚಿತ್ರದಲ್ಲಿ ಗ್ಯಾಂಗ್‌ಸ್ಟರ್‌ ಅವತಾರ

ಇದೇ ಮೊದಲ ಬಾರಿಗೆ ಆದಿತ್ಯ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಅಭಿನಯಿಸಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರದಲ್ಲಿ ಈ ಸಿನಿಮಾದಲ್ಲಿ ಕಾಣಿಸಲಿದ್ದಾರೆ.ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಆದಿತ್ಯ ನಾಯಕರಾಗಿ ನಟಿಸುತ್ತಿರುವ ‘ಟೆರರ್’ ಚಿತ್ರದ ಫಸ್ಟ್ ಲುಕ್ ಹಾಗೂ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ. ಜನವರಿಯಲ್ಲಿ ಚಿತ್ರಕ್ಕೆ ಮುಹೂರ್ತ ನಡೆಯಲಿದೆ. ಈ ಚಿತ್ರದ ಫಸ್ಟ್ ಲುಕ್ ಅದ್ದೂರಿಯಾಗಿ ಬಂದಿದ್ದು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆಉಪೇಂದ್ರ ಅಭಿನಯದ A ಚಿತ್ರ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ಮುಸಿರುವ ಸಿಲ್ಕ್ ಮಂಜು ಈ ಚಿತ್ರವನ್ನು‌ ನಿರ್ಮಾಣ ಮಾಡುತ್ತಿದ್ದಾರೆ. ರಂಜನ್ ಶಿವರಾಮ ಗೌಡ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ರಂಜನ್ ಅವರದೆ.ಇದೇ ಮೊದಲ ಬಾರಿಗೆ ಆದಿತ್ಯ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿಈ ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆದಿತ್ಯ ಈ ಹಿಂದೆ ಅಭಿನಯಿಸಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರದಲ್ಲಿ ಈ ಸಿನಿಮಾದಲ್ಲಿ ಕಾಣಿಸಲಿದ್ದಾರೆ.ಚಿತ್ರದ ಬಗ್ಗೆ ಮಾಹಿತಿ ನೀಡುವ ನಿರ್ದೇಶಕ ರಂಜನ್‌, “ಈ ತನಕ ಯಾರು ಮಾಡಿರದ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಹೇಳಬಹುದು. ಆದಿತ್ಯ ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ದಕ್ಷಿಣ ಭಾರತದ ಸುಪ್ರಸಿದ್ಧ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲಿದ್ದೇವೆ” ಎನ್ನುತ್ತಾರೆ. ರಂಜನ್ ಶಿವರಾಮಗೌಡ ತಿಳಿಸಿದ್ದಾರೆ.ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಕನಲ್ ಕಣ್ಣನ್ ಅವರ ಸಾಹಸ ನಿರ್ದೇಶನ ‘ಟೆರರ್’ ಚಿತ್ರಕ್ಕಿರಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ತಿರುಮಲ ಭಕ್ತರ ದರ್ಶನ ಪದ್ಧತಿಯಲ್ಲಿ ಬದಲಾವಣೆ ಇಲ್ಲ

Wed Dec 28 , 2022
ಆನಂದ ನಿಲಯದ ಚಿನ್ನದ ಹೊದಿಕೆ ಹೊದಿಸುವುದಕ್ಕೆ ಸಂಬಂಧಿಸಿದ ನಿರ್ಧಾರವನ್ನು ಟಿಟಿಡಿ ಮಂಡಳಿ ಇತ್ತೀಚೆಗೆ ತೆಗೆದುಕೊಂಡಿತ್ತು. ಇದು ತಿರುಮಲ ಭಕ್ತರ ದರ್ಶನ ಪದ್ಧತಿಗೆ ಅನ್ವಯವಲ್ಲ ಎಂದು ಟಿಟಿಡಿ ವಕ್ತಾರರು ತಿಳಿಸಿದ್ದಾರೆ.ಆನಂದ ನಿಲಯಂಗೆ ಈಗಿರುವ ಚಿನ್ನದ ಹೊದಿಕೆ ತೆಗೆದು ಹೊಸ ಚಿನ್ನದ ಹೊದಿಕೆ (ಗೋಲ್ಡ್‌ ಪ್ಲೇಟಿಂಗ್‌) ಹೊದಿಸುವ ತೀರ್ಮಾನವನ್ನುತಿರುಮಲ ತಿರುಪತಿ ದೇವಸ್ಥಾನಮ್ಸ್‌  ಇತ್ತೀಚಿನ ಸಭೆಯಲ್ಲಿ ತೆಗೆದುಕೊಂಡಿತ್ತು. ಈ ಸಂದರ್ಭದಲ್ಲಿ ಶ್ರೀವೆಂಕಟೇಶ್ವರ ಸ್ವಾಮಿ ದೇವರ ದರ್ಶನ ಇರಲ್ಲ ಎಂಬ ಸುದ್ದಿ ಹರಡಿತ್ತು. ಇದಕ್ಕೆ ಟಿಟಿಡಿ […]

Advertisement

Wordpress Social Share Plugin powered by Ultimatelysocial