ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಶ್ರೀಮತಿ ಭಾರತಿಸಿದ್ದಮಲ್ಲಪ್ಪ ಆಯ್ಕೆ

ಕೊರಟಗೆರೆ :- ತಾಲ್ಲೂಕು ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಸ್ಥಾನವು ಇತ್ತೀಚೆಗಷ್ಟೇ ಹಿಂದೆ ಇದ್ದ ಅಧ್ಯಕ್ಷರು ವೈಯಕ್ತಿಕ ಕಾರಣದಿಂದ ರಾಜೀನಾಮೆ ಕೊಟ್ಟಿದ್ದರು. ತದನಂತರ ಖಾಲಿ ಇದ್ದ ಅಧ್ಯಕ್ಷ ಸ್ಥಾನಕ್ಕೆ ಅಲಿ ಉಪಾಧ್ಯಕ್ಷರಾಗಿದ್ದ ಭಾರತಿ ಸಿದ್ಮಲ್ಲಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ಸರ್ವ ಸದಸ್ಯರ ಸಮ್ಮುಖದಲ್ಲಿ ಅಧ್ಯಕ್ಷ ಸ್ಥಾನವನ್ನು ಸ್ವೀಕರಿಸಿ ಮಾತನಾಡಿದ ಅವರು. ನಾನು ಇಂದಿನಿಂದ ತಾಲ್ಲೂಕು ಪಟ್ಟಣ ಪಂಚಾಯಿತಿಯ ಪ್ರಭಾರ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದೇನೆ ನನ್ನ ಅಧ್ಯಕ್ಷಸ್ಥಾನ ಇರುವವರೆಗೂ ತಾಲ್ಲೂಕಿನ ಜನತೆಯ ಕುಂದುಕೊರತೆಗಳ ಬಗ್ಗೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು . ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಸದಸ್ಯರುಗಳಾದ ಲಕ್ಷ್ಮಿನಾರಾಯಣ್,ಪುಟ್ಟನರಸಪ್ಪ ,ಕೆ.ಎನ್ ನಟರಾಜ್ ,ಪ್ರದೀಪ್ ಕುಮಾರ್ ,ಕಲೀಮುಉಲ್ಲಾ ,ಶ್ರೀಮತಿ ಕಾವ್ಯ ರಮೇಶ್ ,ಶ್ರೀಮತಿ ಗೀತಾ , ನಾಮಿನಿ ಸದಸ್ಯರಾದ ಕುಮಾರ್ ಮತ್ತಿತರರು ಹಾಜರಿದ್ದರು..

Please follow and like us:

Leave a Reply

Your email address will not be published. Required fields are marked *

Next Post

ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ವಸತಿ ಸಲೀಂ ಅಹ್ಮದ್ ಅವರಿಗೆ ಅಭಿನಂದನಾ ಕಾರ್ಯಕ್ರಮ

Sat Dec 18 , 2021
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಗೆಲುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಪರಿಷತ್ ಅಭ್ಯರ್ಥಿ ಸಲೀಂ ಅಹ್ಮದ್ ಹೇಳಿದ್ದಾರೆ.ಈ ಫಲಿತಾಂಶ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳಿಗೆ ನೀಡಿದ ಉತ್ತರ. ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಗ್ರಾಮೀಣ ಭಾಗದ ಏಳಿಗೆಯನ್ನು, ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತ ಕಸಿದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳು ಆಶ್ವಾಸನೆ ಹಾಗೂ ಅಹಂಕಾರಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಸಲೀಂ ಅಹ್ಮದ್ […]

Advertisement

Wordpress Social Share Plugin powered by Ultimatelysocial