ಬೆಂಗಳೂರು: ಗ್ರಾಮ ಪಂಚಾಯಿತಿಗಳು ಎಲ್ಲಾ ಅರ್ಹ ರೈತರಿಗೆ ಕಿಸಾನ್ ಕ್ರೆಡಿಟ್ ವಿತರಣೆಗೆ ಕ್ರಮವಹಿಸಲು ಮೇ 1ರ ವರೆಗೂ ಗ್ರಾಮಗಳಲ್ಲಿ ಆಂದೋಲನ ನಡೆಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಿದೆ.
ಕೇಂದ್ರದ ಸೂಚನೆಯಂತೆ ಗ್ರಾಮಸಭೆಯ ಕಾರ್ಯಸೂಚಿಯಲ್ಲಿ ಈ ವಿಷಯ ಸೇರ್ಪಡೆ ಮಾಡಿ, ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ನಿಂದ ದೊರೆಯಬಹುದಾದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಎಲ್ಲಾ ರೈತರು ಕಾರ್ಡ್ ಪಡೆಯಲು ಕ್ರಮಕೈಗೊಳ್ಳುವಂತೆ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಹಾಗೆಯೇ, ಕಂದಾಯ ಇಲಾಖೆ, ಕೃಷಿ ಇಲಾಖೆ ಮತ್ತು ಸ್ಥಳಿಯ ಬ್ಯಾಂಕ್ಗಳು ಅಗತ್ಯ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚನೆ ನೀಡಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: