ಪಂಜಾಬ್ ನಲ್ಲಿ ಎಷ್ಟು ಸೀಟು ಗೆದ್ದಿದ್ದೀರಿ?: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಪಂಜಾಬ್ ನಲ್ಲಿ ನೀವು ಎಷ್ಟು ಸೀಟು ಗೆದ್ದಿದ್ದೀರಿ ? ಎರಡೇ….! ಹೀಗೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಮಾಜಿ ಸಿಎಂ‌ ಯಡಿಯೂರಪ್ಪ ಅವರ ಮಾತಿಗೆ ತಿರುಗೇಟು ನೀಡಿದ ಅವರು, ಯಾವ ರಾಜ್ಯದಲ್ಲಿ ನೀವು ಅಧಿಕಾರದಲ್ಲಿದ್ದಿರೋ, ಅಲ್ಲಿ ಗೆದ್ದಿದ್ದೀರಿ.

 ಪಂಜಾಬಿನಲ್ಲಿ ನಮ್ಮ ತಪ್ಪಿನಿಂದ ಅಧಿಕಾರಕ್ಕೆ ಕಳೆದುಕೊಂಡಿದ್ದೇವೆ. ಆದರೆ ರಾಜ್ಯದ ಸ್ಥಿತಿ ಬೇರೆಯೇ ಇದೆ ಎಂದರು.

ಇಲ್ಲಿನ ಜನ ಬಿಜೆಪಿಯನ್ನು ಸೋಲಿಸಬೇಕೆಂದು ತೀರ್ಮಾನಿಸಿದ್ದಾರೆ. ನಾವು ಭ್ರಮೆಯಲ್ಲಿ ಇಲ್ಲ. ಜನರ ನಾಡಿ ಮಿಡಿತವನ್ನು ಅರಿತುಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಿದ್ದೇವೆ. ರಾಜ್ಯದ ಜನ ನಿಮ್ಮನ್ನು ಅಧಿಕಾರದಿಂದ ಕಿತ್ತು ಹಾಕುತ್ತಾರೆ. ನಿಮ್ಮ‌ ಕನಸು ನನಸಾಗುವುದಿಲ್ಲ ಎಂದು ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಮಾನ ನಿಲ್ದಾಣಕ್ಕೆ ಬಿಎಸ್​ವೈ ಹೆಸರಿಡಿ

Fri Mar 11 , 2022
  ಶಿವಮೊಗ್ಗದಲ್ಲಿ ನಿರ್ವಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಜನಪ್ರತಿನಿಧಿಗಳ ನಿಯೋಗ ಮನವಿ ಪತ್ರ ಅರ್ಪಿಸಿದೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಕೊಡುಗೆ ಅಪಾರವಾಗಿದೆ. ಅವರ ಹೆಸರು […]

Advertisement

Wordpress Social Share Plugin powered by Ultimatelysocial