ನವದೆಹಲಿ: ಮಹಿಳೆಯರಿಗೆ ಮೀಸಲಾತಿ ಕಲ್ಪಿಸೋ ಮಸೂದೆಯಾಗಿ ನಾರಿ ಶಕ್ತಿ ವಂದನಾ ಕಾಯ್ದೆಯನ್ನು ಇಂದು ವಿಶೇಷ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಿದೆ. ಈ ಮಂಡನೆ ಬಳಿಕ ಮಾತನಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು ಸರ್ಕಾರಿ ಉದ್ಯೋಗದಲ್ಲಿ ನಾರಿ ಶಕ್ತಿಯಿಂದ ದೇಶದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಯಾಗಲಿದೆ ಎಂದರು.
ವಿಶೇಷ ಸಂಸತ್ ಸದನದಲ್ಲಿ ಮಾತನಾಡಿದಂತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೆಹಲಿಯ ಹೊಸ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆಯುತ್ತಿದ್ದು ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು. ಸೆಪ್ಟೆಂಬರ್ 19 ಭಾರತದ ಇತಿಹಾಸದಲ್ಲಿ ಅಮರವಾಗಿರಲಿದೆ. ನಾರಿ ಶಕ್ತಿಯಿಂದ ದೇಶದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಯಾಗಲಿದೆ. ಮಹಿಳಾ ಮೀಸಲಾತಿ ಬಗ್ಗೆ ಹಲವು ಬಾರಿ ಬಿಲ್ ಮಂಡನೆ ಆಗಿದೆ ಎಂದು ಹೇಳಿದರು.
ನೀತಿ ನಿರೂಪಣೆಯಲ್ಲಿ ಮಹಿಳೆಯರು ದೊಡ್ಡ ಪಾತ್ರ ವಹಿಸುತ್ತಾರೆ. ಮಹಿಳಾ ಕೋಟಾವನ್ನು ಜಾರಿಗೆ ತರಲು ದೇವರು ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಅವರು ಹೇಳಿದರು.