ಬೆಂಗಳೂರು, ಜ.೧೦-ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ ಸಿಬ್ಬಂದಿ ಎಡವಟ್ಟು ಮಾಡಿದ್ದು, ಪ್ರಯಾಣಿಕರನ್ನು ಟರ್ಮಿನಲ್ ನಲ್ಲೇ ಬಿಟ್ಟು ವಿಮಾನ ಟೆಕ್ ಆಪ್ ಆದ ಘಟನೆ ವರದಿಯಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಒಂದು ಬಸ್ನಲ್ಲಿ ನಿನ್ನೆ ಬರುತ್ತಿದ್ದ ೫೪ ಜನ ಪ್ರಯಾಣಿಕರನ್ನು ಬಿಟ್ಟು ವಿಮಾನ ಹಾರಿದೆ. ಬೆಂಗಳೂರಿನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಜಿ೮ ೧೧೬ ನಂಬರ್ನ ಗೋಫಸ್ಟ್ ವಿಮಾನ ಹೊರಟಿತ್ತು. ಮೊದಲನೇ ಟ್ರಿಪ್ನಲ್ಲಿ ವಿಮಾನಕ್ಕೆ ಬಸ್ನಲ್ಲಿ ಹೋಗಿ ೫೦ ಜನ ಪ್ರಯಾಣಿಕರು ಹತ್ತಿದ್ದರು.
ಎರಡನೇ ಟ್ರಿಪ್ನಲ್ಲಿ ೫೪ ಜನರನ್ನು ಟರ್ಮಿನಲ್ನಿಂದ ವಿಮಾನದ ಬಳಿಗೆ ಬಸ್ ಕರೆದೊಯ್ಯಬೇಕಿತ್ತು. ಆದರೆ, ಬಸ್ ಪ್ರಯಾಣಿಕರನ್ನು ಕರೆತರುವ ಮುನ್ನವೆ ವಿಮಾನ ಟೇಕಾಫ್ ಆಗಿದೆ. ಪ್ರಯಾಣಿಕರನ್ನು ಗಮನಿಸದೆ ಏರ್ಲೈನ್ಸ್ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ ಅಂತ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್ಲೈನ್ಸ್ ವಿರುದ್ಧ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಅಸಮಾಧಾನ ಹೊರ ಹಾಕಿದ್ದಾರೆ.
ಈ ಕುರಿತ ಟ್ವಿಟರ್ನಲ್ಲಿ ಗೋಫಸ್ಟ್ ಮತ್ತು ಡಿಜಿಸಿಎಗೆ ೫೦ ಕ್ಕೂ ಅಧಿಕ ಪ್ರಯಾಣಿಕರು ಟ್ವೀಟ್ ಮಾಡಿ ಸಮಯಕ್ಕೆ ಸರಿಯಾಗಿ ಹೋಗಲು ಆಗಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಂತೆ ಟ್ವಿಟರ್ನಲ್ಲಿ ಗೋಫಸ್ಟ್ ಸಂಸ್ಥ ಕ್ಷಮೆ ಕೇಳಿದೆ. ಪ್ರಯಾಣಿಕರ ಮಾಹಿತಿ ಪಡೆದುಕೊಂಡು ಏರ್ಲೈನ್ಸ್ ಸಂಸ್ಥೆ ಟ್ವೀಟ್ ಮಾಡಿ ಕ್ಷಮೆ ಕೇಳಿದೆ.
https://play.google.com/store/apps/details?id=com.speed.newskannada