ಪಾವಗಡದಲ್ಲಿ ಭೀಕರ ಅಪಘಾತ: 8ಕ್ಕೇರಿದ ಸಾವಿನ ಸಂಖ್ಯೆ, ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಶನಿವಾರ ಬೆಳಗ್ಗೆ 9 ಗಂಟೆಯಲ್ಲಿ ಅಪಘಾತಕ್ಕೀಡಾಗಿದೆ. ಈ ಬಸ್​ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದರು. ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್​, ರಸ್ತೆ ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳದಲ್ಲೇ 6 ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಮತ್ತಷ್ಟು ಸಾವು-ನೋವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು, ಪಾಲಕರು ಮತ್ತು ಕುಟುಂಸ್ಥರ ಗೋಳಾಟ ಮುಗಿಲು ಮುಟ್ಟಿದೆ.

ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮೃತದೇಹಗಳು ರಸ್ತೆ, ರಸ್ತೆ ಬದಿ… ಹೀಗೆ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಗ್ ಬಾಸ್ 15 ರಿಂದ ತನ್ನ ನೆಚ್ಚಿನದನ್ನು ಬಹಿರಂಗಪಡಿಸಿದ್ದ,ಕಾಶ್ಮೇರಾ ಷಾ!

Sat Mar 19 , 2022
ತೇಜಸ್ವಿ ಪ್ರಕಾಶ್ ಅಥವಾ ಶಮಿತಾ ಶೆಟ್ಟಿ? ಕಾಶ್ಮೇರಾ ಷಾ ಬಿಗ್ ಬಾಸ್ 15 ರಿಂದ ತನ್ನ ನೆಚ್ಚಿನದನ್ನು ಬಹಿರಂಗಪಡಿಸುತ್ತಾಳೆ ಮತ್ತು ಏಕೆ ಎಂದು ವಿವರಿಸುತ್ತಾರೆ ಬಿಗ್ ಬಾಸ್ 15 ವಿವಿಧ ಕಾರಣಗಳಿಗಾಗಿ ಸುದ್ದಿಯಲ್ಲಿದೆ ಮತ್ತು ಅವುಗಳಲ್ಲಿ ಒಂದು ಶಮಿತಾ ಶೆಟ್ಟಿ ಮತ್ತು ತೇಜಸ್ವಿ ಪ್ರಕಾಶ್ ಅವರ ಬೆಕ್ಕು-ಜಗಳ. ಅಪರಿಚಿತರಿಗೆ, ಇಬ್ಬರೂ ಮನೆಯೊಳಗೆ ಎಂದಿಗೂ ಚೆನ್ನಾಗಿ ಹೊಂದಿಕೊಳ್ಳಲಿಲ್ಲ. ಅನೇಕ ಬಾರಿ, ತೇಜಸ್ವಿ ತನ್ನ ಗೆಳೆಯ ಕರಣ್ ಕುಂದ್ರಾ ಮೇಲೆ ಹೊಡೆದ ಆರೋಪಕ್ಕಾಗಿ […]

Advertisement

Wordpress Social Share Plugin powered by Ultimatelysocial