3ನೇ ಮದ್ವೆಯ ಗಾಳಿಸುದ್ದಿ ಬೆನ್ನಲ್ಲೇ ಮೈಸೂರಿನ ಸೈಬರ್​ ಕ್ರೈಂ ಪೊಲೀಸರಿಗೆ ದೂರು

ಮೈಸೂರು: ನಟಿ  ​ ಮೂರನೆ ಮದುವೆಯಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ನಿಖರ ಮಾಹಿತಿ ಇಲ್ಲ. ಈ ನಡುವೆಯೇ ಪವಿತ್ರಾ ಅವರು ಮೈಸೂರಿನ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

ಇದಕ್ಕೆ ಕಾರಣ, ಅಪರಿಚಿತ ವ್ಯಕ್ತಿಯೊಬ್ಬ ಪವಿತ್ರಾ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದಾರಂತೆ. ತಮ್ಮ ಹೆಸರಿಗೆ ಕಳಂಕ ತಂದು ತೇಜೋವಧೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪವಿತ್ರಾ ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಠಾಣೆ ಪೊಲೀಸರು ನಕಲಿ ಖಾತೆ ಮೂಲಕ ಸುಳ್ಳು ಸುದ್ದಿ ಹರಡುತ್ತಿರುವ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಕನ್ನಡ ಮತ್ತು ತೆಲುಗು ಚಿತ್ರರಂಗ ಸೇರಿದಂತೆ ಧಾರಾವಾಹಿಗಳ ಮೂಲಕ ಅತ್ಯಂತ ಜನಪ್ರಿಯರಾಗಿರುವ ನಟಿ ಪವಿತ್ರಾ, ಇಂದಿಗೂ ಅದೇ ಒಳ್ಳೆಯ ಹೆಸರನ್ನು ಉಳಿಸಿಕೊಂಡವರು. ಇತ್ತೀಚೆಗೆ ಅವರು ತಮ್ಮ ಎರಡನೆಯ ಪತಿಯಿಂದ ದೂರವಾಗಿ ಮೂರನೆಯ ವಿವಾಹವಾಗಿದ್ದಾರೆ ಎಂಬ ಗಾಳಿಸುದ್ದಿ ಹರಡಿತ್ತು. ಇದರ ನಡುವೆಯೇ ಅಪರಿಚಿತ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ರಚಿಸಿ, ಇಲ್ಲಸಲ್ಲದ ಪೋಸ್ಟ್​ಗಳನ್ನು ಮಾಡುವುದೂ ಅಲ್ಲದೇ, ಸಂದೇಶ ಕಳುಹಿಸುತ್ತಿರುವುದು ಬೆಳಕಿಗೆ ಬಂದಿದೆ. ವ್ಯಕ್ತಿಯ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ'ವಿಶ್ವಾಸ'ಪರೀಕ್ಷೆಗೆ ಮಹೂರ್ತ ಫಿಕ್ಸ್

Wed Jun 29 , 2022
ಮುಂಬೈ, ಜೂನ್ 29-ಗುರುವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ವಿಶ್ವಾಸಮತ ಪರೀಕ್ಷೆ ನಡೆಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಶಾಸಕಾಂಗ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಮಂಗಳವಾರ ತಡರಾತ್ರಿ ಕೋಶ್ಯಾರಿ ಅವರು ನೀಡಿರುವ ಪತ್ರದ ಪ್ರತಿ ಮಾಧ್ಯಮಕ್ಕೂ ಸಿಕ್ಕಿದೆ, ಕಳೆದ ವಾರದಿಂದ ಶಿವಸೇನೆ ಪಕ್ಷದ ಬಹುಪಾಲು ಶಾಸಕರು ಮತ್ತು ಹಲವಾರು ಸ್ವತಂತ್ರ ಶಾಸಕರೊಂದಿಗೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಹಿರಿಯ ಸಚಿವ […]

Advertisement

Wordpress Social Share Plugin powered by Ultimatelysocial