ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಮುಖ್ಯ ರಸ್ತೆಯಾಗಿರುವ ಎಂಜಿ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಯಲ್ಲಿಯೇ ಅವರೇಕಾಯಿ ವ್ಯಾಪಾರ ಮಾಡುತ್ತಿರುವುದರಿಂದ ವಾಹನಗಳು,ಅಂಬುಲೆನ್ಸ್ ಹಾಗೂ ಶಾಲಾ ವಾಹನಗಳು ತ್ವರಿತವಾಗಿ ಚಲಾಯಿಸಲು ತೊಂದರೆಯಾಗುತ್ತಿದ್ದು ಪಟ್ಟಣದಲ್ಲಿ ಎ ಪಿ ಎಂ ಸಿ ಮಾರುಕಟ್ಟೆ ಇದ್ದರೂ ಸಹಾ ರಸ್ತೆಯಲ್ಲಿ ವ್ಯಾಪಾರ ವಹಿವಾಟು ನಿಲ್ಲಿಸುವಂತೆ ಹಾಗೂ ಇಂದಿರಾ ಭವನ್ ವೃತ್ತದಿಂದ ಚಿಂತಾಮಣಿ ವೃತ್ತದ ತನಕ ರಸ್ತೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಹಲವು ಬಾರಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ಪುರಸಭೆ ಮುಖ್ಯಾಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕೋಲಾರ ಜಿಲ್ಲಾಧ್ಯಕ್ಷ ಸುಬ್ರಮಣಿ ನೇತೃತ್ವದಲ್ಲಿ ಪುರಸಭೆ ಕಚೇರಿಯ ಮುಂದೆ ಪುರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಕೂಡಲೇ ಮಂಡಿಗಳನ್ನು ಖಾಲಿ ಮಾಡಿಸುವಂತೆ ಒತ್ತಾಯಿಸಿ ಆಕ್ರೋಶ ಹೊರ ಹಾಕಿದರು ಪುರಸಭೆ ಅಧಿಕಾರಿಗಳು ಎರಡು ದಿನಗಳಲ್ಲಿ ಎಂ ಜಿ ರಸ್ತೆಯಲ್ಲಿ ಮಂಡಿಗಳನ್ನು ಖಾಲಿ ಮಾಡಿಸುವ ಭರವಸೆ ನೀಡಿದ್ದಾರೆ ಎರಡು ದಿನಗಳಲ್ಲಿ ಖಾಲಿ ಮಾಡದಿದ್ದರೇ ಕರವೇ ಯುವಸೇನೆ ವತಿಯಿಂದ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಕೆ ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….