ಪೆಟ್ರೋಲ್​ ಬೆಲೆಯಿಂದ ಕಂಗಾಲಾಗಿ ಕುದುರೆ ಏರಿದ ಉದ್ಯಮಿ;

ಕೆಳಗಿಳಿಯದ ಪೆಟ್ರೋಲ್​ ಬೆಲೆಯಿಂದಾಗಿ ಕುದುರೆ ಏರಿದ ಉದ್ಯಮಿ: ವಿಜಯಪುರದಲ್ಲಿ ವಿನೂತನ ಪ್ರಕರಣ

ವಿಜಯಪುರ: ಕಳೆದ ಕೆಲವು ತಿಂಗಳಿನಿಂದ ನೂರರ ಗಡಿ ದಾಟಿರುವ ಪೆಟ್ರೋಲ್​ ದರ ಸದ್ಯಕ್ಕೆ ಇಳಿಯುವ ಲಕ್ಷಣಗಳು ಕಾಣುತ್ತಿಲ್ಲ. ಪೆಟ್ರೋಲ್​ ಬೆಲೆಯಿಂದ ಕಂಗಾಲಾಗಿರುವ ಕೆಲವರು ತಮ್ಮ ಸ್ವಂತ ವಾಹನಗಳನ್ನು ಬಿಟ್ಟು ಬಸ್​ಗಳ ಮೊರೆ ಹೋಗಿದ್ದಾರೆ. ಇನ್ನು ಕೆಲವರು ಎಲ್ಲೆಲ್ಲಿ ಪೆಟ್ರೋಲ್​ ಖರ್ಚು ಉಳಿಸಲು ಸಾಧ್ಯವೋ, ಆ ಪ್ರಯತ್ನವೆಲ್ಲ ಮಾಡುತ್ತಿದ್ದಾರೆ.

ಆದರೆ, ಇಲ್ಲೊಬ್ಬ ಉದ್ಯಮಿ ಮಾಡಿರುವ ಕೆಲಸ ಎಲ್ಲರ ಗಮನ ಸೆಳೆದಿದೆ.

ಪೆಟ್ರೋಲ್​ ಪ್ರಯಾಣ ದುಬಾರಿ ಆಗಿರುವುದರಿಂದ ಉದ್ಯಮಿಯೊಬ್ಬ ಕುದುರೆಯನ್ನು ಖರೀದಿಸಿ ಅದರಲ್ಲೇ ಪ್ರಯಾಣ ಮಾಡುತ್ತಿದ್ದಾರೆ. ಇದನ್ನು ಕೇಳಲು ತಮಾಷೆ ಎನಿಸಬಹುದು. ಆದರೆ, ಪೆಟ್ರೋಲ್​ ಬೆಲೆ ಓರ್ವ ಉದ್ಯಮಿ ಮೇಲೆಯೇ ಇಷ್ಟೊಂದು ಪ್ರಭಾವ ಬೀರಿರಬೇಕಾದರೆ, ಜನಸಾಮಾನ್ಯರ ಗತಿಯೇನು ಎಂಬ ಪ್ರಶ್ನೆ ತಮ್ಮ ತಲೆಗೆ ಬರದೇ ಇರದು.

ಬಾಬುಲಾಲ್ ಚೌಹಾಣ್​ (49) ಎಂಬ ಕರ್ನಾಟಕದ ವಿಜಯಪುರ ಮೂಲದ ಉದ್ಯಮಿ ಕೇವಲ ವಿನೂತನ ಐಡಿಯಾ ಮಾಡಿದ್ದಲ್ಲದೆ, ಅದನ್ನು ಕಾರ್ಯರೂಪಕ್ಕೂ ತಂದಿದ್ದಾರೆ. ಇತ್ತೀಚೆಗಷ್ಟೇ ಅವರೊಂದು ಗುಜರಾತಿ ಕುದುರೆಯನ್ನು ಖರೀದಿ ಮಾಡಿದ್ದಾರೆ. ಕೇವಲ ಪ್ರಯಾಣಕ್ಕಾಗಿ ಮಾತ್ರವಲ್ಲದೇ ದೇಹವನ್ನು ಫಿಟ್​ ಆಗಿ ಇಟ್ಟುಕೊಳ್ಳಲು ಇದು ನೆರವಾಗುತ್ತದೆ ಎಂದು ಬಾಬುಲಾಲ್​ ಹೇಳಿದ್ದಾರೆ. ಪ್ರತಿ ತಿಂಗಳು ಜಿಮ್​ಗೆ 4 ಸಾವಿರ ರೂ. ಖರ್ಚು ಮಾಡುತ್ತಿದ್ದರಂತೆ. ಅಲ್ಲದೆ, ಪೆಟ್ರೋಲ್​ಗೂ ಕೂಡ ಖರ್ಚಾಗುತ್ತಿತ್ತಂತೆ. ಇದೀಗ ಕುದುರೆ ಖರೀದಿಸಿರುವ ಬಾಬುಲಾಲ್​ಗೆ ಎರಡೆರಡು ಖರ್ಚು ಉಳಿಯುತ್ತಿದೆಯಂತೆ.

ಈ ಬಗ್ಗೆ ಮಾತನಾಡಿರುವ ಅವರು ಕುದುರೆ ಸವಾರಿಯಿಂದ ದೇಹದ ಫಿಟ್​ನೆಸ್​ ಚೆನ್ನಾಗಿ ಇಟ್ಟುಕೊಳ್ಳಬಹುದು. ಅಲ್ಲದೆ, ವಾಯುಮಾಲಿನ್ಯ ಕಡಿಮೆ ಮಾಡಲು ಸಹಕಾರಿ ಆಗುತ್ತದೆ ಎಂದಿದ್ದಾರೆ. ಬಾಬುಲಾಲ್​ ಅವರು ಪ್ರತಿದಿನ ಮನೆಯಿಂದ ಕಚೇರಿಗೆ 30 ಕಿ.ಮೀ ಪ್ರಯಾಣಿಸುತ್ತಾರಂತೆ. 6 ಮಂದಿಯ ಕುಟುಂಬದಲ್ಲಿ ಒಂದು ಕಾರು ಮತ್ತು 4 ಬೈಕ್​ಗಳಿವೆ. ಇದೀಗ ದೇಶದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ ನೂರರ ಗಡಿ ದಾಟಿರುವುದರಿಂದ, ಯಾರೊಬ್ಬರು ಬಾಬುಲಾಲ್​ ನಿರ್ಧಾರವನ್ನು ಗೇಲಿ ಮಾಡಲು ಆಗುವುದಿಲ್ಲ. ಏಕೆಂದರೆ, ಪೆಟ್ರೋಲ್​ ದರ ಹೆಚ್ಚಳದ ಬರೆ ಎಲ್ಲರಿಗೆ ತಗುಲಿರುವುದು ನೂರಕ್ಕೆ ನೂರು ಸತ್ಯ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೊಸ ವರ್ಷದ ಪಾರ್ಟಿಗೆ 2 ಮೇಕೆ ಕದ್ದ ಎಎಸ್​ಐ! ಮಾಲೀಕನ ಕಣ್ಣೀರಿಗೂ ಕರಗದೆ, ಬಾಡೂಟ ತಿಂದು ತೇಗಿದ್ರು

Sun Jan 2 , 2022
ಬಲಂಗೀರ್: ಇದು ಬೇಲಿಯೇ ಎದ್ದು ಹೊಲ ಮೇಯ್ದ ಸ್ಟೋರಿ. ಇಲ್ಲೊಬ್ಬ ಪೊಲೀಸ್​ ಅಧಿಕಾರಿ ಹೊಸ ವರ್ಷದ ಪ್ರಯುಕ್ತ ಪಾರ್ಟಿ ಮಾಡಲು 2 ಮೇಕೆ ಕದ್ದು ಭರ್ಜರಿ ಬಾಡೂಟ ಮಾಡಿ ತಿಂದು ತೇಗಿದ್ದಾರೆ. ಒಡಿಶಾದ ಬಲಂಗೀರ್ ಜಿಲ್ಲೆಯ ಸಿಂಧೆಕೆಲಾ ಪೊಲೀಸ್ ಠಾಣೆ ಎಎಸ್‌ಐ ಸುಮನ್ ಮಲ್ಲಿಕ್ ಮೇಕೆ ಕದ್ದ ಆರೋಪಿ. ಹೊಸ ವರ್ಷಕ್ಕೂ ಮುನ್ನಾ ದಿನ ಗ್ರಾಮದಲ್ಲಿ 2 ಮೇಕೆಗಳು ಕಳವಾಗಿದ್ದವು. ಮೇಕೆಗಳನ್ನು ಹುಡುಕಿಕೊಂಡ ಹೊರಟ ಮಾಲೀಕನಿಗೆ ಎಎಸ್​ಐ ಸುಮನ್ ಮಲ್ಲಿಕ್ ಬಳಿ […]

Advertisement

Wordpress Social Share Plugin powered by Ultimatelysocial