ಎರಡೇ ತಿಂಗಳಿಗೆ ಶೂಟಿಂಗ್ ಮುಗಿಸಿದ ‘ಧೂಮಂ’ ಚಿತ್ರತಂಡ.

ಲ್ಲಿಯವರೆಗೂ ಒಳ್ಳೊಳ್ಳೆ ಚಿತ್ರಗಳನ್ನು ನೀಡುತ್ತಾ ಬಂದಿರುವ ಹೊಂಬಾಳೆ ಫಿಲ್ಮ್ಸ್ ಸಾಲು ಸಾಲು ಚಿತ್ರಗಳಿಗೆ ಬಂಡವಾಳ ಹೂಡುತ್ತಿದೆ‌. ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ ಹಾಗೂ ತಮಿಳು ಚಿತ್ರಗಳನ್ನೂ ಸಹ ನಿರ್ಮಿಸಿ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಹೊಂಬಾಳೆ ಫಿಲ್ಮ್ಸ್.

ಹೀಗೆ ವಿವಿಧ ಇಂಡಸ್ಟ್ರಿಗೆ ಕಾಲಿಟ್ಟ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಕನ್ನಡ ಹಾಗೂ ಮಲಯಾಳಂ ದ್ವಿಭಾಷಾ ಚಿತ್ರವೊಂದನ್ನು ನಿರ್ಮಿಸುತ್ತಿದೆ. ಹೌದು, ಕನ್ನಡದ ನಿರ್ದೇಶಕನಾದ ಲೂಸಿಯಾ, ಯು ಟರ್ನ್ ಖ್ಯಾತಿಯ ಪವನ್ ಕುಮಾರ್ ನಿರ್ದೇಶನದ ಧೂಮಂ ಚಿತ್ರಕ್ಕೆ ಹೊಂಬಾಳೆ ಬಂಡವಾಳ‌ ಹೂಡಿದೆ‌.

ಕಳೆದ ಸೆಪ್ಟೆಂಬರ್ 30ರಂದು‌ ಘೋಷಣೆಯಾಗಿದ್ದ ಈ ಚಿತ್ರದ ಮುಹೂರ್ತ ಅಕ್ಟೋಬರ್ 9 ರಂದು ನಡೆದಿತ್ತು‌. ಹೀಗೆ ಅಂದು ಆರಂಭಗೊಂಡಿದ್ದ ಚಿತ್ರದ ಚಿತ್ರೀಕರಣ ನಿನ್ನೆ ( ಜನವರಿ 13 ) ಮುಕ್ತಾಯಗೊಂಡಿದೆ. ಈ ಕುರಿತಾಗಿ ಹೊಂಬಾಳೆ ಫಿಲ್ಮ್ಸ್ ಫೋಟೊವೊಂದನ್ನು ಹಂಚಿಕೊಂಡಿದ್ದು ಧೂಮಮ್ ಚಿತ್ರೀಕರಣ ಮುಕ್ತಾಯಗೊಂಡಿದೆ ಎಂದು ಬರೆದುಕೊಂಡಿದೆ‌. ಇನ್ನು ಈ ಚಿತ್ರದಲ್ಲಿ ನಾಯಕನಾಗಿ ಫಾಹದ್ ಫಾಸಿಲ್ ಅಭಿನಯಿಸಿದ್ದರೆ, ನಾಯಕಿಯಾಗಿ ಅಪರ್ಣ ಬಾಲಮುರಳಿ ನಟಿಸಿದ್ದಾರೆ. ಹೀಗೆ ಎರಡು ತಿಂಗಳುಗಳಲ್ಲೇ ಚಿತ್ರೀಕರಣವನ್ನು ವೇಗವಾಗಿ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಆದಷ್ಟು ಬೇಗ ಮುಗಿಸಲಿದ್ದು, ಆದಷ್ಟು ಬೇಗ ಚಿತ್ರಮಂದಿರದ ಅಂಗಳಕ್ಕೆ ಬರುವುದು ಖಚಿತ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅನುಮೋದಿತ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ

Sat Jan 14 , 2023
ಜಿಲ್ಲಾ ಪಂಚಾಯತ್‍ನಲ್ಲಿ ಈಗಾಗಲೆ ಕ್ರಿಯಾಯೋಜನೆಗೆ ಅನುಮೋದನೆ ಪಡೆದು, ಪ್ರಾರಂಭಿಸಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು, ಇದುವರೆಗೂ ಪ್ರಾರಂಭವಾಗದ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಬೇಕು, ಗುಣಮಟ್ಟದ ಕಾಮಗಾರಿ ಕೈಗೊಂಡು, ಅನುದಾನ ಸೋರಿಕೆಯನ್ನು ತಡೆಗಟ್ಟಬೇಕು.  ಲೋಪವೆಸಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಪಂಚಾಯತ್ […]

Advertisement

Wordpress Social Share Plugin powered by Ultimatelysocial