‘ಬಾಂಡ್ ರವಿ’ ಸಾಥ್ ಕೊಟ್ಟ ಪೊಗರು ಪೋರ-ಯಂಗ್ ಟೈಗರ್..ಪ್ರಮೋದ್ ಬೆನ್ನುತಟ್ಟಿದ ಧ್ರುವ-ವಿನೋದ್!

 

ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಾಯಕ ನಟ ಪ್ರಮೋದ್ ನಾಯಕನಾಗಿ ನಟಿಸ್ತಿರುವ ಬಾಂಡ್ ರವಿ ಸಿನಿಮಾಗೆ ಪೊಗರು ಪೋರ ಧ್ರುವ ಹಾಗೂ ಯಂಗ್ ಟೈಗರ್ ವಿನೋದ್ ಪ್ರಭಾಕರ್ ಸಾಥ್ ಕೊಟ್ಟಿದ್ದಾರೆ. ಇವತ್ತು ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ ಧ್ರುವ-ವಿನೋದ್ ಪ್ರಮೋದ್ ಬೆನ್ನುತಟ್ಟಿ ಇಡೀ ಸಿನಿಮಾ ಟೀಂಗೆ ಶುಭಾಶಯ ತಿಳಿಸಿದ್ದರು.

ಬಾಂಡ್ ರವಿ ಸಿನಿಮಾಗೆ ವಿನೋದ್ ಪ್ರಭಾಕರ್ ಕ್ಲ್ಯಾಪ್ ಮಾಡಿದ್ರೆ, ಧ್ರುವ ಸರ್ಜಾ ಕ್ಯಾಮೆರಾಗೆ ಚಾಲನೆ ನೀಡಿದರು. ಬಳಿಕ ಮಾತಿಗಿಳಿದ ವಿನೋದ್, ಧ್ರುವ ನನ್ನ ತಮ್ಮ. ನನ್ನ ಕಡೆಯಿಂದ ಕ್ಲ್ಯಾಪ್ ಮಾಡಿಸಿದ್ದಕ್ಕೆ ಧನ್ಯವಾದ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.ಬಳಿಕ ಧ್ರುವ ಸರ್ಜಾ, ವಿನೋದ್ ಪ್ರಭಾಕರ್ ನಮ್ಮಣ್ಣ ಎನ್ನುತ್ತಾ, ಸಿನಿಮಾದ ಟೈಟಲ್ ಕೇಳಿದ್ರಿ ಫೀಲ್ಡ್ ಸಿನಿಮಾ ಅನಿಸುತ್ತದೆ. ಇದು ಪ್ರಾಮಿಸಿಂಗ್ ಸಿನಿಮಾ. ಪ್ರತಿಯೊಬ್ಬರಿಗೂ ಪ್ರೋತ್ಸಾಹ ಮಾಡಬೇಕು ಅಂತಾ ನೆಗೆಟಿವ್ ಕಮೆಂಟ್ ಮಾಡುವವರಿಗೆ ವಾರ್ನಿಂಗ್ ಕೊಟ್ರು.ಪ್ರಮೋದ್, ನಾನು ಅಪ್ಪು ಸರ್ ಅಭಿಮಾನಿಯಾಗಿ ಬಾಂಡ್ ರವಿ ಸಿನಿಮಾದಲ್ಲಿ ನಟಿಸ್ತಿದ್ದೇನೆ. ಅಣ್ಣಾ ಬಾಂಡ್ ಸಿನಿಮಾದಲ್ಲಿ ಅಪ್ಪು ಸರ್ ಮಿಂಚಿದ್ದ ಬಾಂಡ್ ರವಿ ಪಾತ್ರದ ರೀತಿ ಇರುತ್ತದೆ. ಹೀಗಾಗಿ ಅಪ್ಪು ಸರ್ ಮ್ಯಾನರಿಸಂ, ಆಕ್ಟಿಂಗ್ ಖದರ್ ನ್ನು ನೋಡಿ‌ ಕಲಿಯುತ್ತಿದ್ದೇನೆ. ಒಳ್ಳೆ ಪ್ರೊಡಕ್ಷನ್ ಹೌಸ್, ಒಳ್ಳೆ ಫ್ಯಾಷನ್ ಪ್ರೊಡ್ಯೂಸರ್ ಎಂದರು.

ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ಸಿನಿಮಾದಲ್ಲಿ ನಟಿಸ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʼಸೌಂದರ್ಯʼ ವರ್ಧಿಸಲು‌ ಮನೆಯಲ್ಲೇ ಮಾಡಿ ಫೇಸ್ ಕ್ರೀಮ್!

Fri Apr 8 , 2022
  ದುಬಾರಿ ಕ್ರೀಮ್ ಗಳನ್ನು ಬಳಸಿ ತ್ವಚೆಯನ್ನು ಹಾಳು ಮಾಡುವ ಬದಲು ಮನೆಯಲ್ಲೇ ಮಾಡಬಹುದಾದ ಒಂದಷ್ಟು ಕ್ರೀಮ್ ಗಳನ್ನು ಬಳಸಿ ಆರೋಗ್ಯವಂತ ತ್ವಚೆ ಪಡೆಯುವುದು ಹೇಗೆಂದು ನೋಡೋಣ. ಬಾದಾಮಿಯನ್ನು ಒಣ ಬೀಜಗಳ ರಾಜ ಎಂದು ಕರೆಯುತ್ತಾರೆ. ಇದು ದೇಹದ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯವರ್ಧಕವೂ ಹೌದು. ದಿನ ರಾತ್ರಿ ಎಂಟು ಬಾದಾಮಿ ಬೀಜಗಳನ್ನು ನೀರಿನಲ್ಲಿ ನೆನೆಸಿಡಿ. ಬಳಿಕ ಅದರ ಸಿಪ್ಪೆ ತೆಗೆಯಿರಿ. ಅದನ್ನು ಮಿಕ್ಸಿಗೆ ಹಾಕಿ ಗುಲಾಬಿ ನೀರನ್ನು ಸೇರಿಸಿ ನುಣ್ಣಗೆ […]

Advertisement

Wordpress Social Share Plugin powered by Ultimatelysocial