ಫೆ.17 ರಂದು ರಾಜ್ಯ ಬಜೆಟ್ ಮಂಡನೆ :

 

ಹುಬ್ಬಳ್ಳಿ : ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ತಿಂಗಳ 3 ನೇ ವಾರ ಬಜೆಟ್ ಮಂಡಿಸಲಾಗುವುದು. ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಏಪ್ರಿಲ್,ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಬೊಮ್ಮಾಯಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಬೊಮ್ಮಾಯಿ ಅವರು ಮುಂಬರುವ ಬಜೆಟ್ ಗೆ ಸಿದ್ಧತೆ ಆರಂಭಿಸಿದ್ದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನ ಕುರಿತು ಸಭೆ ನಡೆಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ಎಕ್ಸ್ ಪ್ರೆಸ್ ಹೈವೆಗೆ ಹೆಸರಿಡಲು ಜೋರಾಯ್ತು ಪಾಲಿಟಿಕ್ಸ್

Wed Jan 11 , 2023
ಬೆಂಗಳೂರು ಎಕ್ಸ್ ಪ್ರೆಸ್ ಹೈವೆಗೆ ಹೆಸರಿಡಲು ಜೋರಾಯ್ತು ಪಾಲಿಟಿಕ್ಸ್ ‌ ಹೆದ್ದಾರಿ ಗೆ ಕಾವೇರಿ ಮತ್ತು ಕೃಷ್ಣರಾಜ ಒಡೆಯರ್ ಹೆಸರಿಡಿಸಲು ಮೈ- ಮಂಡ್ಯ ಸಂಸದರ ಪೈಪೋಟಿ ಮೈಸೂರು ಸಂಸದ ಪ್ರತಾಪ ಸಿಂಹರಿಂದ ಮೈ- ಬೆಂ ಹೈವೇ ಗೆ ಕಾವೇರಿ ಹೆಸರಿಡಲು ಪ್ರಸ್ತಾಪ ಇತ್ತ ಮಂಡ್ಯ ಸಂಸದೆ ಸುಮಲತಾ ರಿಂದ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಗಾಗಿ ಸಿ.ಎಂ.ಗೆ ಪತ್ರ ಸಂಸದೆ ಸುಮಲತಾ ಮಾತಿಗೆ ಎಂಎಲ್ಸಿ ದಿನೇಶ್ ಗೂಳಿಗೌಡ ಅನುಮೋದನೆ ಸಿ.ಎಂ.ಬೊಮ್ಮಾಯಿಗೆ […]

Advertisement

Wordpress Social Share Plugin powered by Ultimatelysocial