ರಾಜಕೀಯಕ್ಕೆ ನಟ ಕಿಚ್ಚ ಸುದೀಪ್ ಎಂಟ್ರಿ?

 

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್ ಇದೀಗ ಸ್ಯಾಂಟಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರನ್ನು ಗಾಳಾ ಹಾಕಿದೆ ಎನ್ನಲಾಗುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನವೇ ಕಿಚ್ಚ ಸುದೀಪ್ ಅವರನ್ನು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುವಂತೆ ರಾಹುಲ್ ಗಾಂಧಿ ಮೂಲಕವೇ ಆಹ್ವಾನ ನೀಡಲಾಗಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯ ಕಾಂಗ್ರೆಸ್ ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್ ಗೆ ಪಕ್ಷ ಸೇರುವಂತೆ ಆಹ್ವಾನ ನೀಡಿದೆ, ಚಿತ್ರದುರ್ಗ ಅಥವಾ ಶಿವಮೊಗ್ಗದಿಂದ ಕಾಂಗ್ರೆಸ್ ಟಿಕೆಟ್ ಕೊಡಲು ಆಫರ್ ಕೊಡಲಾಗಿದೆ ಎಂದು ಹೇಳಲಾಗುತ್ತಿದೆ. ಮಾಜಿ ಸಂಸದೆ ರಮ್ಯಾ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ಕೊಟ್ಟಿದ್ದಾರಂತೆ. ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ನಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಆಫರ್ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಸುದೀಪ್ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡಾ. ಆರ್.ಬಿ. ಪಾಟೀಲ್ ಅವರ ಕಂಚಿನ ಪುತ್ಥಳಿ ಅನಾವರಣ

Tue Jan 10 , 2023
ಡಾ. ಆರ್.ಬಿ. ಪಾಟೀಲ್ ಅವರ ಕಂಚಿನ ಪುತ್ಥಳಿ ಅನಾವರಣ. ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಬಸವರಾಜ ಬೊಮ್ಮಾಯಿ. ನವನಗರದ ಕ್ಯಾನ್ಸರ ಆಸ್ಪತ್ರೆಯಲ್ಲಿನ ಕಂಚಿನ ಪುತ್ಥಳಿ. ನವನಗರ ಕ್ಯಾನ್ಸರ್ ಆಸ್ಪತ್ರೆ ಸಂಸ್ಥಾಪಕರಾದ ಡಾ. ಬಿ.ಆರ್. ಪಾಟೀಲ. ಸಿಎಂ ಗೆ ಸಾಥ್ ನೀಡಿದ ಶಾಸಕ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಡಾ. ಆರ್.ಬಿ. ಪಾಟೀಲ ಹಾಗೂ ಮೇಯರ್ ಈರೇಶ ಅಂಚೊಟಗೇರಿ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial