ಬಿಜಾಪುರ ಜಿಲ್ಲಾಯಲ್ಲಿ ಪೊಲೀಸ್ ಶಿಬಿರದ ಮೇಲೆ ನಕ್ಸಲರು ಗುಂಡಿನ ದಾಳಿ !

ಬಿಜಾಪುರ, ಅ 18- ಛತ್ತೀಸ್‍ಗಢದ ಬಿಜಾಪುರ ಜಿಲ್ಲಾಯಲ್ಲಿ ಪೊಲೀಸ್ ಶಿಬಿರದ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ತಡರಾತ್ರಿ ಕುಟ್ರು ಪೊಲೀಸ್ ಠಾಣೆ ವ್ಯಾಪ್ತಿಯ ಜೈಗೂರ್ ಪೊಲೀಸ್ ಶಿಬಿರದ ಮೇಲೆ ನಕ್ಸಲರ ಗುಂಪು ಗುಂಡಿನ ದಾಳಿ ನಡೆಸಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ತಿಳಿಸಿದ್ದಾರೆ.

ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು ಬಂಡುಕೋರರು ಅಲ್ಲಿಂದ ಪರಾರಿಯಾಗಿದ್ದಾರೆ, ಗಾಯಗೊಂಡರಲ್ಲಿ ಮೂವರು ಜಿಲ್ಲಾ ಪೊಲೀಸ್ ಪಡೆಗೆ ಸೇರಿದವರು ಮತ್ತು ಇನ್ನೊಬ್ಬರು ಛತ್ತೀಸ್‍ಗಢ ಸಶಸ್ತ್ರ ಪಡೆ (ಸಿಎಎಫ್) ಸಿಬ್ಬಂ ಘಟನೆ ನಂತರ ಎಲ್ಲರನ್ನು ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಮತ್ತು ನಂತರ ಅವರಲ್ಲಿ ಇಬ್ಬರನ್ನು, ಹೆಚ್ಚಿನ ಚಿಕಿತ್ಸೆಗಾಗಿ ರಾಯ್ಪುರಕ್ಕೆ ಹೆಲಿಕಾಪ್ಟರ್‍ನಲ್ಲಿ ರವಾನಿಸಲಾಗಿದ್ದು, ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಂದೆ ಐದು ವರ್ಷ ವಿರೋಧ ಪಕ್ಷದಲ್ಲಿ ಇರಲಿಲ್ಲವೇ? ಆಗ ಯಾಕೆ ಈ ಭ್ರಷ್ಟಾಚಾರದ ಮಾತು ಹೇಳಲಿಲ್ಲ.

Mon Apr 18 , 2022
ಮೈಸೂರು: ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ಕಡತ ತೆಗೆಯುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರು ಇಲ್ಲಿವರೆಗೆ ಕಡ್ಲೆಪುರಿ ತಿನ್ನುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದು ಇಷ್ಟು ವರ್ಷವಾಯ್ತು. ಹಿಂದೆ ಐದು ವರ್ಷ ವಿರೋಧ ಪಕ್ಷದಲ್ಲಿ ಇರಲಿಲ್ಲವೇ? ಆಗ ಯಾಕೆ ಈ ಭ್ರಷ್ಟಾಚಾರದ ಮಾತು ಹೇಳಲಿಲ್ಲ. ಈಗ ನಾವು ನಿಮ್ಮ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಈ […]

Advertisement

Wordpress Social Share Plugin powered by Ultimatelysocial