ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶವನ್ನು ರಾಜ್ಯ ಕಾಂಗ್ರೆಸ್ ಪಕ್ಷ ಚಿತ್ರದುರ್ಗದಲ್ಲಿ ಹಮ್ಮಿಕೊಂಡಿತ್ತು.

ಚಿತ್ರದುರ್ಗ, ಜನವರಿ 9: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶವನ್ನು ರಾಜ್ಯ ಕಾಂಗ್ರೆಸ್ ಪಕ್ಷ ಚಿತ್ರದುರ್ಗದಲ್ಲಿ ಹಮ್ಮಿಕೊಂಡಿತ್ತು. ಈ ಒಂದು ಸಮಾವೇಶದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಎಸ್ಸಿ ಎಸ್ಟಿ ಸಮುದಾಯಗಳಿಗೆ ಭರ್ಜರಿ ಯೋಜನೆಗಳನ್ನು ಜಾರಿಗೆ ತರಲು ಕಾಂಗ್ರೆಸ್ ಮುಂದಾಗಿದೆ.ಈ ಹತ್ತು ಘೋಷಣೆಗಳನ್ನು ಈಡೇರಿಸಲಾಗುತ್ತದೆ ಎಂದು ಕಾಂಗ್ರೆಸ್ ಘೋಷಣೆಗಳನ್ನು ಘೋಷಿಸಿದೆ.1). ಎಸ್ ಸಿ, ಎಸ್ ಟಿ ಜನಾಂಗದವರಾದ ನಮಗೆ ನೀಡುವ ಮೀಸಲಾತಿ ಭಿಕ್ಷೆ ಅಲ್ಲ. ಅದು ನಮ್ಮ ಹಕ್ಕು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಡಾ. ಬಿಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಪಾದಿಸಿರುತ್ತಾರೆ. ಆ ಕಾರಣದಿಂದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಎಸ್ಸಿ ಎಸ್ಟಿ ಸಮುದಾಯಗಳ ಹೋರಾಟದ ಕಾರಣದಿಂದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ನಮ್ಮ ಸರ್ಕಾರ ರಚನೆ ಮಾಡಲಾಗಿತ್ತು.ಸದರಿ ಸಮಿತಿಯು ಸೂಕ್ತ ಮಾಹಿತಿ ಸಂಗ್ರಹಣೆ ಮತ್ತು ನಡಾವಳಿಗಳನ್ನು ನಡೆಸಿ ದಿನಾಂಕ 27/7 /2020 ರಂದು ಸರ್ಕಾರಕ್ಕೆ ವರದಿಯನ್ನು ನೀಡಲಾಗಿತ್ತು. ಆ ವರದಿಯಲ್ಲಿ ಎಸ್ ಸಿ ಮೀಸಲಾತಿಯನ್ನು 15% ರಿಂದ 17% ಹಾಗೂ ಎಸ್ ಟಿ ಮೀಸಲಾತಿಯನ್ನು 3% ರಿಂದ 7% ಗೆ ಹೆಚ್ಚಿಸಿ ಕಾಯ್ದೆ ರೂಪಿಸಬೇಕು ಹಾಗೂ ಆ ಕಾಯ್ದೆಯನ್ನು ಸಂವಿಧಾನದ 9ನೇ ಷೆಡ್ಯೂಲ್‌ಗೆ ಸೇರಿಸಬೇಕೆಂದು ಶಿಫಾರಸು ಮಾಡಲಾಯಿತು.ಆದರೆ ಅಧಿಕಾರದಲ್ಲಿರುವ ಭಾರತೀಯ ಜನತಾ ಪಾರ್ಟಿಯು ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಆ ವರದಿಯ ಮೇಲೆ ಮೂರು ವರ್ಷಗಳ ಕಾಲ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ.ಜನರನ್ನು ದಾರಿ ತಪ್ಪಿಸುವ ಕೆಲಸ ಇದುಈ ವಿಚಾರವಾಗಿ ನಮ್ಮ ಪಕ್ಷ ಅನೇಕ ಬಾರಿ ಕ್ರಮ ಜರುಗಿಸಲು ಒತ್ತಾಯ ಮಾಡಿದ್ದರೂ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವಾಗಲಿ ಅಥವಾ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವಾಗಲಿ, ಆ ವರದಿಯನ್ನು ಪರಿಗಣಿಸಿ ಮೀಸಲಾತಿ ಹೆಚ್ಚಿಸಲಿಲ್ಲ. ಆದರೆ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೀಸಲಾತಿಯನ್ನು ಹೆಚ್ಚಿಸಲು ಇತ್ತೀಚಿಗೆ ಕಾನೂನನ್ನು ರೂಪಿಸಿರುತ್ತಾರೆ ಹೊರತು ಆ ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಇದು ಎಸ್ಸಿ ಎಸ್ಟಿ ವರ್ಗದ ಜನರನ್ನು ದಾರಿ ತಪ್ಪಿಸುವ ಕೆಲಸವೇ ಹೊರತು ನ್ಯಾಯ ನೀಡುವ ಉದ್ದೇಶವಾಗಿರುವುದಿಲ್ಲ. ಆ ಕಾರಣದಿಂದ ಸರ್ಕಾರ ದಿನಾಂಕ 30/1 /2023ರವರೆಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಸಂಪೂರ್ಣ ಒಪ್ಪಿ ಅವರ ಶಿಫಾರಸಿನಂತೆ ಮೀಸಲಾತಿ ಹೆಚ್ಚಳದ ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ನಾವು ಆಗ್ರಹ ಪೂರಕವಾಗಿ ಒತ್ತಾಯಿಸುತ್ತೇವೆ.ಎಸ್ಸಿ ಎಸ್ಟಿ ಜನರ ಅಭಿವೃದ್ಧಿಗೆ ವೆಚ್ಚ ಮಾಡಲು ಹಾಗೂ ಕಾಲ್ಪನಿಕ ವೆಚ್ಚ5%2). ನ್ಯಾಯಮೂರ್ತಿ ಸದಾಶಿವ ಆಯೋಗ ನೀಡಿರುವ ವರದಿಯನ್ನು ನಮ್ಮ ಸರ್ಕಾರ ಬಂದ ಮೊದಲನೇ ಅಧಿವೇಶನದಲ್ಲಿ ವಿಧಾನ ಮಂಡಲದ ಮುಂದೆ ಮಂಡಿಸಲಾಗುವುದು. ಎರಡು ಸದನಗಳ ಅಭಿಪ್ರಾಯಗಳನ್ನು ಪಡೆದು ಪರಿಶಿಷ್ಟ ಜಾತಿಗಳ ಎಲ್ಲಾ ಜಾತಿಯ ಜನರ ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯ ಸಿಗುವಂತೆ ಮೀಸಲಾತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಬದ್ಧರಾಗಿರುತ್ತೇವೆ.3). ಎಸ್ಸಿ ಎಸ್ಟಿ ಕಾಯ್ದೆಯ ಎಸ್ ಸಿಎಸ್‌ಟಿ ಕಾಯ್ದೆಯ ಕಲಂ 7-ಡಿಗೆ ತಿದ್ದುಪಡಿ ತರುವ ಮೂಲಕ ಆಯೋಜನೆ ಪೂರ್ಣ ಮೊತ್ತವನ್ನು ಆಯಾ ವರ್ಷವೇ ಎಸ್ಸಿ ಎಸ್ಟಿ ಜನರ ಅಭಿವೃದ್ಧಿಗೆ ವೆಚ್ಚ ಮಾಡಲು ಹಾಗೂ ಕಾಲ್ಪನಿಕ ವೆಚ್ಚ 5%,ರೊಳಗೆ ಮಿತಿಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.4). ಪಿಟಿಸಿಎಲ್ ಕಾಯ್ದೆಗೆ ಸೂಕ್ತ ತಿದ್ದುಪಡಿ ತಂದು ಎಸ್ ಸಿ ಎಸ್ ಟಿ ಜನರಿಗೆ “ದರಕಾಸ್ತ್” ಮೂಲಕ ಸರ್ಕಾರ ನೀಡಿರುವ ಜಮೀನುಗಳು ಶಾಶ್ವತವಾಗಿ ಅವರಿಗೆ ಉಳಿಯುವಂತೆ ಕಾನೂನಿನ ರಕ್ಷಣೆ ಮಾಡಲು ಬದ್ಧರಾಗಿದ್ದೇವೆ.ಪ್ರತಿಯೊಂದು ಕುಟುಂಬಕ್ಕೆ 2 ಎಕರೆ ಜಮೀನು ನೀಡುವುದು5) ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯ ಪ್ರಕಾರ ರಾಜ್ಯದಲ್ಲಿ ಅನುಕ್ರಮವಾಗಿ 2.54 ಲಕ್ಷ ಹಾಗೂ 1.32 ಲಕ್ಷ ವಸತಿ ರಹಿತ ಎಸ್ಸಿ ಎಸ್ಟಿ ಕುಟುಂಬಗಳು ಇರುತ್ತವೆ. ಅಂತಹ ಕುಟುಂಬಗಳಿಗೆ ಸಾಮಾಜಿಕ ನ್ಯಾಯ ನೀಡಲು ಹಾಗೂ ಸಮಾಜದ ಮುಖ್ಯ ವಾಹಿನಿಗೆ ಬರುವ 5 ವರ್ಷಗಳಲ್ಲಿ ಎಲ್ಲಾ ವಸತಿ ರಹಿತ ಕುಟುಂಬಗಳಿಗೆ ಮನೆಗಳನ್ನು ಕಟ್ಟಿಸಿಕೊಡಲು ವಿಶೇಷ ಯೋಜನೆ ರೂಪಿಸುತ್ತೇವೆ.6). ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಎಸ್ಸಿ ಎಸ್ಟಿ ಕುಟುಂಬಗಳು ಭೂ ರಹಿತರಾಗಿದ್ದಾರೆ. ಅವರುಗಳನ್ನು ಭೂ ಮಾಲೀಕರನಾಗಿ ಮಾಡುವ ದೃಷ್ಟಿಯಿಂದ ಅಂತಹ ಪ್ರತಿಯೊಂದು ಕುಟುಂಬಕ್ಕೆ 2 ಎಕರೆ ಒಣ ಭೂಮಿಯನ್ನು ಭೂ ಒಡೆತನ ಯೋಜನೆ ಅಡಿಯಲ್ಲಿ ನೀಡುವುದು ಹಾಗೂ ಆ ಜಮೀನುಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿಗಳನ್ನು ಬರುವ ಐದು ವರ್ಷಗಳಲ್ಲಿ ಕೊರೆಸಿಕೊಡಲು ಕಾರ್ಯಕ್ರಮ ರೂಪಿಸುತ್ತೇವೆ.7). ಪ್ರತಿವರ್ಷ ರಾಜ್ಯದ ಎಸ್‌ಸಿ/ಎಸ್‌ಟಿ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ರೂಪಿಸಿಕೊಳ್ಳಲು ಐರಾವತ ಯೋಜನೆ ಅಡಿಯಲ್ಲಿ ಟ್ಯಾಕ್ಸಿ, ಗೂಡ್ಸ್, ತ್ರಿಚಕ್ರ ವಾಹನ ಮತ್ತು ನಾಲ್ಕು ಚಕ್ರಗಳ ಇತರ ವಾಹನಗಳನ್ನು ಖರೀದಿಸಲು ಸಹಾಯಧನ ಹಾಗೂ ಸಾಲದ ಸೌಲಭ್ಯವನ್ನು ಒದಗಿಸಲಾಗುವುದು.8) ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಮಂಜೂರು ಮಾಡಿರುವ ಹುದ್ದೆಗಳ ಪೈಕಿ 2.54 ಲಕ್ಷ ಹುದ್ದೆಗಳು ಖಾಲಿ ಇರುತ್ತವೆ. ಆ ಕಾರಣದಿಂದ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಹಾಗಾಗಿ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ನೀಡಲು ಬರುವ ಐದು ವರ್ಷಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಎಲ್ಲಾ ಖಾಲಿ ಹುದ್ದೆಗಳನ್ನು ತುಂಬಲು ಕ್ರಮ ಜರುಗಿಸಲಾಗುವುದು.ವಿದ್ಯಾರ್ಥಿ ವೇತನ ನೀಡಲು ಪುನರ್ ಪ್ರಾರಂಭಿಸುತ್ತೇವೆ9). ರಾಜ್ಯದ ಅನೇಕ ಜನ ಎಸ್ಸಿ , ಎಸ್ಟಿ ವಿದ್ಯಾರ್ಥಿಗಳು ಕೋವಿಡ್ ಮುಂತಾದ ಸಾಂಕ್ರಾಮಿಕ ರೋಗಗಳು ಮತ್ತು ಇನ್ನಿತರ ಕಾರಣಗಳಿಂದ ಶಾಲೆಗಳನ್ನು ಬಿಡುತ್ತಿರುವುದು ಸಮೀಕ್ಷೆಗಳಿಂದ ತಿಳಿದು ಬಂದಿರುತ್ತದೆ. ಶಾಲೆಗಳನ್ನು ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರುವ ದೃಷ್ಟಿಯಿಂದ ಹಾಗೂ ಮಕ್ಕಳು ನಿರಂತರವಾಗಿ ಶಿಕ್ಷಣ ಪಡೆಯಲು ಶ್ರೀಮತಿ ಸಾವಿತ್ರಿಬಾಯಿ ಪುಲೆ ವಿದ್ಯಾ ಯೋಜನೆಯನ್ನು ಹೊಸದಾಗಿ ರೂಪಿಸಲು ನಿಶ್ಚಯಿಸಿರುತ್ತವೆ. ಆ ಯೋಜನೆ ಮೂಲಕ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳು ಶಾಲೆಗಳಿಗೆ ನಿರಂತರವಾಗಿ ಬರುವಂತೆ ಮಾಡಲು ಒಂದನೇ ತರಗತಿಯಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ 150 ಹಾಗೂ 6ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 300 ಪ್ರೋತ್ಸಾಹ ಧನ ನೀಡವ ಯೋಜನೆ, ರೂಪಿಸುತ್ತೇವೆ ಆ ಪ್ರೋತ್ಸಾಹ ಧನವನ್ನು ಆಯಾ ಮಕ್ಕಳ ತಾಯಂದಿರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.10) ರಾಷ್ಟ್ರದಲ್ಲಿ ಮೆಟ್ರಿಕ್ ಪೂರ್ವ ತರಗತಿಯ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರವು ನಿಲ್ಲಿಸಿರುತ್ತದೆ. ಆ ಕ್ರಮ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿರುತ್ತದೆ. ಈ ಕಾರಣದಿಂದ ಮಕ್ಕಳ ಭವಿಷ್ಯವನ್ನು ರೂಪಿಸಲು ಮೈಸೂರಿನ ಮಹಾರಾಜರ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ವಿದ್ಯಾರ್ಥಿ ವೇತನ ಯೋಜನೆ ಎಂಬ ಹೊಸ ಯೋಜನೆಯನ್ನು ರೂಪಿಸಿ ಆ ಯೋಜನೆಯ ಮೂಲಕ ಎಲ್ಲ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಪುನರ್ ಪ್ರಾರಂಭಿಸುತ್ತೇವೆ ಹಾಗೂ ರಾಜ್ಯ ವ್ಯಾಪ್ತಿ ಎಲ್ಲ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಸೌಲಭ್ಯ ಗಳನ್ನು ಒದಗಿಸಲು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು ಕಾಂಗ್ರೆಸ್‌ ಘೋಷಣೆ ಮಾಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಇಡ್ಲಿ ಸಾಂಬಾರ್, ಬಿಸಿ ಬೇಳೆ ಬಾತ್ ಮಾಡಿದ ಯುಕೆಯ ವ್ಯಕ್ತಿ

Mon Jan 9 , 2023
ದಕ್ಷಿಣ ಭಾರತೀಯರಿಗೆ ಇಡ್ಲಿ ಸಾಂಬಾರ್ ಹೊಸದೇನೂ ಅಲ್ಲ. ಹಲವರ ಬೆಳಗ್ಗಿನ ಉಪಹಾರದ ಮೊದಲ ಆಯ್ಕೆಯೇ ಇಡ್ಲಿ ಸಾಂಬಾರ್. ಘಮಘಮಿಸುವ ಸಾಂಬಾರ್ ಜತೆಗೆ ಇಡ್ಲಿಯನ್ನು ಸವಿಯುವ ಖುಷಿಯೇ ಅದ್ಭುತ. ಭಾರತದ ಇಡ್ಲಿ ಸಾಂಬಾರ್‌ಗೆ ಮನಸೋಲದವರೇ ಇಲ್ಲ.ಭಾರತೀಯ ಪಾಕ ಪದ್ಧತಿಗೆ ವಿದೇಶಿಗರು ಮನಸೋಲುವುದು ಹೊಸದೇನೂ ಅಲ್ಲ. ಇದಕ್ಕೆ ಬೇಕಾದಷ್ಟು ಸಾಕ್ಷಿಗಳಿವೆ. ಮೊದಲ ಬಾರಿಗೆ ಭಾರತೀಯ ಖಾದ್ಯಗಳನ್ನು ಸವಿದು ಸಂಭ್ರಮಿಸಿದ ವಿದೇಶಿಗರ ಸಾಕಷ್ಟು ವಿಡಿಯೋಗಳು ನಿಮಗೆ ಇಂಟರ್‌ನೆಟ್‌ನಲ್ಲಿ ಕಾಣಸಿಗುತ್ತವೆ. ಬರೀ ಅಷ್ಟೇ ಅಲ್ಲ, ಕೆಲ […]

Advertisement

Wordpress Social Share Plugin powered by Ultimatelysocial