ಸಮಾಜವಾದಿ ಪಕ್ಷದ  ನಾಯಕರು ಹಾಗೂ ಬೆಂಬಲಿಗರ ಮನೆಗಳ ಮೇಲೆ  ಆದಾಯ ತೆರಿಗೆ ದಾಳಿ ಹಿನ್ನೆಲೆ ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ 

ಸಮಾಜವಾದಿ ಪಕ್ಷದ  ನಾಯಕರು ಹಾಗೂ ಬೆಂಬಲಿಗರ ಮನೆಗಳ ಮೇಲೆ ನಡೆದ ಆದಾಯ ತೆರಿಗೆ ದಾಳಿಯ ವರದಿಗಳ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಪಕ್ಷಗಳನ್ನು ಬೆದರಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.ಬಿಜೆಪಿಯು ಕಾಂಗ್ರೆಸ್ ಹಾದಿಯಲ್ಲೇ ಸಾಗುತ್ತಿದೆ. ಕಾಂಗ್ರೆಸ್‌ನ ಹಳೆಯ ಇತಿಹಾಸವನ್ನು ಒಮ್ಮೆ ನೋಡಿ, ಯಾರನ್ನಾದರೂ ಬೆದರಿಸಬೇಕು ಎಂದಾದಲ್ಲಿ ಅದು ಈ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತದೆ. ಇಂದು ಬಿಜೆಪಿಯೂ ಅದನ್ನೇ ಮಾಡುತ್ತಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. .ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ಆಡಳಿತ ಪಕ್ಷದ ಮೇಲೆ ತಮ್ಮ ದಾಳಿಯನ್ನು ಮುಂದುವರೆಸಿದ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಜೆಪಿಯು ತಮ್ಮ ಚುನಾವಣಾ ಭರವಸೆಯನ್ನು ಈಡೇರಿಸಲು ಹಾಗೂ ರಾಜ್ಯದಲ್ಲಿ ‘ರಾಮ ರಾಜ್ಯ’ವನ್ನು ತರಲು ವಿಫಲವಾಗಿದೆ ಎಂದು ಹೇಳಿದರು.

ಬಿಜೆಪಿ ‘ರಾಮರಾಜ್ಯ’ ತರುವುದಾಗಿ ಹೇಳುತ್ತಿತ್ತು. ಆದರೆ ಸಮಾಜವಾದದ ಮಾರ್ಗ ರಾಮರಾಜ್ಯ ತರುತ್ತದೆ. ಸಮಾಜವಾದ ಬಂದರೆ ‘ರಾಮರಾಜ್ಯ’ ಸಿಗುತ್ತದೆ ಎಂದು ಪ್ರತಿಪಾದಿಸಿದರು.ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿರುವ ಎಸ್‌ಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ವಕ್ತಾರ ರಾಜೀವ್ ರಾಯ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಶನಿವಾರ ದಾಳಿ ನಡೆಸಿದೆ.ವಾರಣಾಸಿಯಿಂದ ಐಟಿ ಅಧಿಕಾರಿಗಳ ತಂಡ ಶನಿವಾರ ಮುಂಜಾನೆ ಮೌಗೆ ಆಗಮಿಸಿ ಸಹದತ್‌ಪುರ ಪ್ರದೇಶದಲ್ಲಿ ರಾಯ್ ಅವರ ಮನೆಯಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಶೋಧ ಆರಂಭಿಸಿತು. ಎಸ್ಪಿ ನಾಯಕ ಮತ್ತು ಅವರ ಕುಟುಂಬ ಕಳೆದ ಎರಡು ಗಂಟೆಗಳಿಂದ ಮನೆಯೊಳಗೆ ಬಂಧಿಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್​ ಶಾಸಕ ರಮೇಶ್​​ ಕುಮಾರ್​ ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ:ರಮೇಶ್‌ ಕುಮಾರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗರಂ

Sat Dec 18 , 2021
ಕಾಂಗ್ರೆಸ್​ ಶಾಸಕ ರಮೇಶ್​​ ಕುಮಾರ್​ ಮಹಿಳೆಯರ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ದೊಡ್ಡ ಬಿರುಗಾಳಿಯನ್ನೇ ಬೀಸಿದೆ. ರಮೇಶ್‌ ಕುಮಾರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ. ರಮೇಶ್​ ಕುಮಾರ್​ ಮಾತುಗಳಿಗೆ ಕಾಂಗ್ರೆಸ್ ನಾಯಕತ್ವ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಮಾತುಗಳಿಂದ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ ಇವುಗಳು ಸಮರ್ಥನೆಗೆ ಮೀರಿದ್ದಾಗಿದೆ.ಇಂತಹ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪಕ್ಷದ ಚುನಾವಣಾ ಕಾರ್ಯತಂತ್ರದ ಮೇಲೂ ಪರಿಣಾಮ ಬೀರಲಿದೆ. ಉತ್ತರ ಪ್ರದೇಶದಲ್ಲಿ ಲಡಕಿ ಹೂಂ ಲಡ್ ಸಕ್ತಾ […]

Advertisement

Wordpress Social Share Plugin powered by Ultimatelysocial