ಬ್ರಾಹ್ಮಣ ಮುಖ್ಯಮಂತ್ರಿ, ಬ್ರಾಹ್ಮಣ ಕುರಿತ ವಿವಾದಾತ್ಮ ಹೇಳಿಕೆ ವಿರುದ್ಧ ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.ರಾಜಾಜಿನಗರ ವಿಧಾನಸಭಾ ಕ್ಷೇತ್ರ, ಶ್ರೀ ರಾಮಮಂದಿರ ವಾರ್ಡನಲ್ಲಿ ಶ್ರೀ ಶಂಕರ ಸೇವಾ ಸಮಿತಿ ಮತ್ತು ರಾಜಾಜಿನಗರ ಬ್ರಾಹ್ಮಣ ಸಭಾ ವತಿಯಿಂದ ಸಾರ್ವಜನಿಕರಿಗೆ ನಾರಾಯಣ ನೇತ್ರಾಲಯ ವತಿಯಿಂದ ಉಚಿತ ನೇತ್ರಾ ತಪಸಣಾ ಶಿಬಿರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಿಕ್ಷಣ ಸಚಿವ ಹಾಗೂ ಸ್ಥಳೀಯ ಶಾಸಕ ಎಸ್.ಸುರೇಶ್ ಕುಮಾರ್, “ಕೆಲವು ರಾಜಕಾರಣಿಗಳಿಗೆ ಬ್ರಾಹ್ಮಣ ಸಮುದಾಯದ ಕುರಿತು ದೃಷ್ಟಿದೋಷವಿದೆ. ಅವರಿಗೆ ತಪಾಸಣೆ ಮತ್ತು ಚಿಕಿತ್ಸೆಯ ಅಗತ್ಯವಿದೆ” ಎಂದು ಹೇಳಿಕೆ ನೀಡಿದ್ದಾರೆ.ಪ್ರಪಂಚ ನೋಡಲು ಎಲ್ಲರು ದೃಷ್ಟಿ ಮುಖ್ಯ . ಕಾಲಕಾಲಕ್ಕೆ ನೇತ್ರ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮಾನಸಿಕ ಒತ್ತಡದಿಂದ ಸಕ್ಕರೆ ಖಾಯಿಲೆ, ಬಿ.ಪಿ.ಮತ್ತು ಹಲವು ರೋಗಗಳ ಸಮಸ್ಯೆಗಳ ಜನರು ನರಳುತ್ತಾರೆ. ನಮ್ಮ ಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ನೆಮ್ಮದ್ದಿ ಜೀವನ ನಡೆಸಲು ಕೆಲವು ತಜ್ಞರುಗಳಿಂದ ಸಾರ್ವಜನಿಕರಿಗೆ ಶಿಬಿರ ನಡೆಸಲಾಗುವುದು. ಸಾರ್ವಜನಿಕರು ಆರೋಗ್ಯ ಶಿಬಿರಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.ಶ್ರೀ ಶಂಕರ ಸೇವಾ ಸಮಿತಿ ಅಧ್ಯಕ್ಷರಾದ ಲಕ್ಷ್ಮೀಕಾಂತ್ ರವರು ಮಾತನಾಡಿ, ಶ್ರೀ ಶಂಕರ ಸೇವಾ ಸಮಿತಿ ಅದಿ ಶಂಕರರ ಸಂದೇಶಗಳನ್ನು ಜನರಿಗೆ ತಿಳಿಸುವಲ್ಲಿ ಮಹತ್ವವಾದ ಕಾರ್ಯ ಮಾಡುತ್ತಿದೆ. ನಮ್ಮ ಸಮಿತಿ ವತಿಯಿಂದ ಹಿಂದೂ ಧರ್ಮ, ಸಂಸ್ಕೃತಿ, ಸಂಪ್ರಾದಯ ಉಳಿಸಲು ಹಲವಾರು ಸಾಮಾಜಿಕ ಕಾರ್ಯಗಳನ್ನು ಸತತವಾಗಿ ಮಾಡಿಕೊಂಡು ಬರಲಾಗುತ್ತಿದೆ. ಉಚಿತ ಆರೋಗ್ಯ ತಪಾಸಣೆ, ವಿದ್ಯಾರ್ಧಿ ವೇತನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ನೇತ್ರ ತಪಾಸಣಾ ಶಿಬಿರದಲ್ಲಿ ದೃಷ್ಟಿದೋಷ ಇರುವವರಿಗೆ ಕನ್ನಡಕಗಳನ್ನು ವಿತರಿಸಲಾಗುವುದು ಎಂದು ಹೇಳಿದರು.ಅದಿ ಶಂಕರಚಾರ್ಯರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವರ ವಿಶೇಷ ಕರ್ತವ್ಯಧಿಕಾರಿ ಗಣಪತಿಭಟ್, ಆರ್ಯ ವೈಶ್ಯ ಮಹಾಸಭಾದ ಅಧ್ಯಕ್ಷರಾದ ರವಿಶಂಕರ್, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ದೀಪಾ ನಾಗೇಶ್, ಪತ್ರಕರ್ತರುಗಳಾದ ಜೆ.ಎಚ್.ಆನಿಲ್ ಕುಮಾರ್, ಮೋಹನ್ ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada