ಕೋಲಾರದಲ್ಲಿ ಸದ್ದಿಲ್ಲದೆ ಸಿದ್ದವಾಯ್ತು ಸಿದ್ದರಾಮಯ್ಯ ಮನೆ.

ಲ್ಯಾಣ ಕರ್ನಾಟಕ ಅಭಿವೃದ್ಧಿ ಪಕ್ಷ ಸ್ಥಾಪಕ ಜನಾರ್ಧನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನಲ್ಲಿ ಮನೆ ಮಾಡಿದ್ದರು. ಇದೀಗ ಕೋಲಾರದಲ್ಲಿ ಸ್ಪರ್ಧಿಸಲು ಮುಂದಾಗಿರುವ ಸಿದ್ದರಾಮಯ್ಯ ಕೂಡ ಅದೇ ಹಾದಿ ಹಿಡಿದಿದ್ದಾರೆ.ಉಡುಪಿ:ಚುನಾವಣೆ ಕಣಕ್ಕೆ ಇಳಿಯುವ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ವಂತ ಮನೆ ಮಾಡುವುದು ಸಾಮಾನ್ಯವಾಗಿದೆ.

ಈ ಹಿಂದೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಕ್ಷ ಘೋಷಣೆಗೂ ಮುನ್ನ ಗಂಗಾವತಿಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ ಜನಾರ್ಧನ ರೆಡ್ಡಿ, ಅದೇ ಕ್ಷೇತ್ರದಲ್ಲಿ ಮನೆ ಮಾಡಿದ್ದರು. ಅದರಂತೆ ಕ್ಷೇತ್ರ ಪರಿಯಟಣೆಯಲ್ಲಿ ತೊಡಗಿಕೊಂಡಿದ್ದರು. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡ ಅದೇ ಹಾದಿಯಲ್ಲಿದ್ದಾರೆ. ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಸಿದ್ದರಾಮಯ್ಯ ಮೇಲಿಂದ ಮೇಲೆ ಕೋಲಾರಕ್ಕೆ ಹೋಗಿ ಕ್ಷೇತ್ರ ಸುತ್ತಾಟ ನಡೆಸಿ ಹವಾ ಸೃಷ್ಟಿಸಿದ್ದಾರೆ. ಇದೀಗ ಕೋಲಾರದಲ್ಲಿ ಒಂದು ಮೆನೆಯನ್ನೂ ಹುಡುಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಇದಕ್ಕೆ ಉಡುಪಿಯಲ್ಲಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಕೋಲಾರದಲ್ಲಿ ನಾನು ಮನೆ ಹುಡುಕುತ್ತಿಲ್ಲ. ನಮ್ಮ ಪಕ್ಷದವರು ಹುಡುಕುತ್ತಿದ್ದಾರೆ. ಮನೆ ಹುಡುಕುವ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದರು.

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಹಿನ್ನಲೆ ಸಿದ್ದರಾಮಯ್ಯರಿಗಾಗಿ ಕೋಲಾರದಲ್ಲಿ ಮನೆ ಹುಡುಕಾಟ ನಡೆಸಲಾಗುತ್ತಿದೆ. ಕೋಲಾರ ನಗರದ ಹಲವು ಬಡವಾಣೆಗಳಲ್ಲಿ ಮನೆ ಹಾಗೂ ಕಚೇರಿಗೆ ಸೂಕ್ತ ಸ್ಥಳ ಹುಡುಕಾಟ ನಡೆಸಲಾಗುತ್ತಿದ್ದಾರೆ. ನಾಳೆ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೇಟಿ ನೀಡಿದಾಗ ಮನೆ ಮತ್ತು ಕಚೇರಿ ಅಂತಿಮಗೊಳಿಸುವ ಸಾಧ್ಯತೆ ಇದೆ. ಹೆದ್ದಾರಿಗೆ ಹತ್ತಿರುವಿರುವ, ವಾಹನ ನಿಲುಗಡೆ ಎಲ್ಲದಕ್ಕೂ ಅನುಕೂಲವಿರುವ ಪ್ರತಿಷ್ಠಿತ ಬಡಾವಣೆಯಲ್ಲಿ ಮುಖಂಡರು ಮನೆಗಳನ್ನು ಹುಡುಕಿದ್ದಾರೆ ಎನ್ನಲಾಗುತ್ತಿದೆ.

ನಮಗೆ ಕುರ್ಚಿ ಮೇಲೆ ಆಸೆ ಅಂತಾರೆ, ಬಿಜೆಪಿಯವರಿಗೆ ಯಾವುದರ ಮೇಲೆ ಆಸೆ ಮತ್ತೆ?

ಬಿಜೆಪಿಯವರು ಒಮ್ಮೆ ಗೆದ್ದರೆ ಅದು ಮತ್ತೊಮ್ಮೆ ಅವರು ಗೆಲ್ಲುತ್ತಾರೆಯೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ನಮಗೆ ಕುರ್ಚಿ ಮೇಲೆ ಆಸೆ ಅಂತಾರೆ. ಇವರಿಗೆ ಮತ್ತೆ ಯಾವುದರ ಮೇಲೆ ಆಸೆ? ಆಸೆ ಇಲ್ಲವೆಂದರೆ ಕುರ್ಚಿ ಆಸೆಯನ್ನು ಬಿಟ್ಟುಬಿಡಿ. ಮಗನನ್ನು ತೆಗೆದುಕೊಂಡು ಹೋಗಿ ಬಿಜೆಪಿ ಅಧ್ಯಕ್ಷರಾಗಿ ಮಾಡಿದ್ದೀರಿ, ಕಾರ್ಯದರ್ಶಿಯಾಗಿ ಮಾಡಿದ್ದೀರಿ. ಈಗ ನಮಗೆ ಕುರ್ಚಿ ಮೇಲೆ ಆಸೆ ಅಂತ ಹೇಳುತ್ತೀರಿ. ಹಾಗಾದರೆ ಇವರಿಗೆ ಯಾವುದರ ಮೇಲೆ ಆಸೆ ಇದೆ ಎಂದು ಪ್ರಶ್ನಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

5 ಸಾವಿರ ಭಕ್ತರಿಗೆ ಉಚಿತ ಪ್ರವಾಸ.

Sun Jan 22 , 2023
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾವೇರಿಪುರ ವಾರ್ಡ್‌ನಲ್ಲಿ ಕ್ಷೇತ್ರದ ೫ ಸಾವಿರ ಭಕ್ತರಿಗೆ ನೂರಕ್ಕೂ ಹೆಚ್ಚು ಬಸ್‌ಗಳಲ್ಲಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನ, ಹೊರನಾಡು ಅನ್ನಪೊರ್ಣೇಶ್ವರಿ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಉಚಿತ ಪ್ರವಾಸ ಆಯೋಜಿಸಲಾಗಿತ್ತು. ಸ್ಥಳೀಯ ಶಾಸಕರು, ವಸತಿ ಸಚಿವರಾದ ವಿ.ಸೋಮಣ್ಣರವರು ಭಕ್ತರಿಗೆ ಶುಭಕೋರಿ ಬೀಳ್ಕೊಡುಗೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರಾದ ವಿ. ಸೋಮಣ್ಣರವರು ಪ್ರತಿಯೊಬ್ಬರ ಜೀವನದಲ್ಲಿ ಯಶ್ವಸಿಯ ಹಿಂದೆ ದೈವದ ಪ್ರೇರಣೆ, ಆಶೀರ್ವಾದ ಇರುತ್ತದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ […]

Advertisement

Wordpress Social Share Plugin powered by Ultimatelysocial