ಭರ್ಜರಿ ಪ್ರಚಾರಕ್ಕೆ ವೇದಿಕೆ ಸಿದ್ದಪಡಿಸುತ್ತಿವೆ. ಸದ್ಯ ಬೆಂಗಳೂರಿನ ರಸ್ತೆಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೃಹತ್ ಕಟೌಟ್ಗಳು ರಾರಾಜಿಸುತ್ತಿವೆ. ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ ನೀಡಲಿದ್ದಾರೆ.
ಹಾಗೂ ಇಂದಿನಿಂದ 2 ದಿನಗಳ ಕಾಲ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಮಧ್ಯಾಹ್ನ ನವದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣ ಬೆಳೆಸಲಿದ್ದಾರೆ. ಇನ್ನು ಚುನಾವಣೆ ಹೊತ್ತಿನಲ್ಲಿ ರೈತ ಸಮುದಾಯ ಒಗ್ಗೂಡಿಸಲು ಹೆಚ್ಡಿ ಕುಮಾರಸ್ವಾಮಿ ರಾಜ್ಯದ ರೈತರಿಗೆ ರೈತ ಸಂಕ್ರಾಂತಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ರೈತರೊಂದಿಗೆ ಕುಮಾರಸ್ವಾಮಿ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಬನ್ನಿ ಚುನಾವಣೆ ಹೊಸ್ತಿಲಲ್ಲಿರುವಾಗಲೇ ರಾಜಕೀಯ ಪಕ್ಷಗಳು ಯಾವ ರೀತಿ ತಂತ್ರ ಹೆಣೆಯುತ್ತಿವೆ. ಯಾವ ಯಾವ ಕಾರ್ಯಕ್ರಮಗಳ ಮೂಲಕ ಮತದಾರರ ಮನ ಗೆಲ್ಲುತ್ತಿವೆ.
https://play.google.com/store/apps/details?id=com.speed.newskannada