ಶಿವಮೊಗ್ಗ: ಕುಖ್ಯಾತ ಸ್ಯಾಂಟ್ರೋ ರವಿಯನ್ನ ಮೈಸೂರು ಪೊಲೀಸ್ರು ಗುಜರಾತ್ನಲ್ಲಿ ಬೇಟೆ ಆಡಿದ್ರು. ಗುಜರಾತ್ನಲ್ಲಿ ಅರೆಸ್ಟ್ ಮಾಡುವಾಗ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಗುಜರಾತ್ನಲ್ಲೇ ಇದ್ರು. ಈ ಸಂಬಂಧ ಕೇಳಿ ಬಂದ ಆರೋಪಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಪಿಂಪ್ಗಳಿಂದ ದುಡ್ಡು ತೆಗೆದುಕೊಳ್ಳುವವನು ನಾನಲ್ಲ. ಹಲ್ಕಾ ದಂಧೆಗಳು ಮಾಡುವ ಸಂದರ್ಭ ಬಂದಾಗ ಆತ್ಮಹತ್ಯೆ ಮಾಡಿಕೊಳ್ತಿನಿ ಎಂದಿದ್ದಾರೆ.
ಹೆಚ್ಡಿಕೆ ಹೇಳಿಕೆ ಸರಿಯಲ್ಲ
ಸ್ಯಾಂಟ್ರೋ ರವಿ ಯಾರೂ ಅನ್ನೋದೇ ನನಗೆ ಗೊತ್ತಿಲ್ಲ. ನನ್ನ ಮನೆಗೆ ಸಾವಿರಾರು ಜನ ಬಂದು ಹೋಗುತ್ತಾರೆ. ಎಲ್ಲರ ಕ್ಯಾರೆಕ್ಟರ್ ಸರ್ಟಿಫಿಕೇಟ್ ನೋಡಿ ಒಳಗೆ ಬಿಡಲಾಗುವುದಿಲ್ಲ. ವಿನಾಕಾರಣ ನನ್ನ ಹೆಸರು ಹೇಳಿ ಗೊಂದಲ ಹುಟ್ಟಿಸುತ್ತಿರುವುದು ಸರಿಯಲ್ಲ. ಇದು ಮಾಜಿ ಸಿಎಂ ಅವರ ಘನತೆಗೆ ತಕ್ಕದ್ದಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪರೋಕ್ಷವಾಗಿ ಆರಗ ಜ್ಞಾನೇಂದ್ರ ತಿರುಗೇಟು ಕೊಟ್ಟಿದ್ದಾರೆ.
ಗುಜರಾತ್ ಕಾರ್ಯಕ್ರಮ ಮೊದಲೇ ನಿಗದಿ
ಸ್ಯಾಂಟ್ರೋ ರವಿ ಜೊತೆಗೆ ನನಗೆ ಸಂಪರ್ಕ ಇದ್ದಿದ್ರೆ ಅವನನ್ನು ಬಂಧಿಸದಂತೆ ತಡೆಯುವುದು ದೊಡ್ಡ ವಿಚಾರವಾಗಿರಲಿಲ್ಲ. ಪಿಂಪ್ಗಳಿಂದ ದುಡ್ಡು ತೆಗೆದುಕೊಳ್ಳುವ ಸಂದರ್ಭ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ. ನನ್ನ ಗುಜರಾತ್ ಕಾರ್ಯಕ್ರಮ ಆರು ತಿಂಗಳ ಮುಂಚೆಯೇ ನಿಗದಿ ಆಗಿತ್ತು. ಅಲ್ಲಿಗೆ ಸರ್ಕಾರದ ಪ್ರತಿನಿಧಿಯಾಗಿ ಹೋಗಿದ್ದು. ಪ್ರತಿಕ್ಷಣ ಎಲ್ಲಿಗೆ ಹೋಗಿದ್ದೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇರುತ್ತದೆ. ಆರೋಪ ಮಾಡುವ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮಾಹಿತಿ ಇಟ್ಟುಕೊಂಡು ಮಾತಾಡಲಿ. ಅವರ ಪಕ್ಷದ ಕಾರ್ಯಕರ್ತರೇ ಕಿಮ್ಮನೆ ನಾಯಕತ್ವ ಒಪ್ಪದೆ ಬಿಜೆಪಿಗೆ ಸೇರುತ್ತಿದ್ದಾರೆ. ಇದರಿಂದ ಅವರು ಕಂಗೆಟ್ಟು ಹೋಗಿದ್ದಾರೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
https://play.google.com/store/apps/details?id=com.speed.newskannada