ಬೆಂಗಳೂರು, ಜನವರಿ 17: ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ರಾಜಕಾರಣದ ಹಲವು ದಿಗ್ಗಜರಿಗೆ ಮುಂಬರುವ ವಿಧಾನಸಭಾ ಚುನಾವಣೆಯು ಕೊನೆಯ ಚುನಾವಣೆಯಾಗುವ ಸಾಧ್ಯತೆಯಿದೆ. ಏಕೆಂದರೆ ಅವರು ಇನ್ನು ಐದು ವರ್ಷಗಳ ನಂತರ 80 ವರ್ಷಗಳನ್ನು ಪೂರೈಸುವ ಹೊಸ್ತಿಲಲ್ಲಿದ್ದಾರೆ.
ಈ ಹಿರಿಯರಲ್ಲಿ ಹೆಚ್ಚಿನವರು ಆ ವೇಳೆಗೆ ಚುನಾವಣಾ ರಾಜಕೀಯದಿಂದ ನಿವೃತ್ತರಾಗಬಹುದು.
ಕಾಂಗ್ರೆಸ್ ಶಾಸಕರಾದ ಆರ್.ವಿ.ದೇಶಪಾಂಡೆ (75), ಕೆ.ಆರ್.ರಮೇಶ್ ಕುಮಾರ್ (73) ಶಾಮನೂರು ಶಿವಶಂಕರಪ್ಪ (91) ಸೇರಿದಂತೆ ಇತರರಿಗೆ ಇದು ಕೊನೆ ಚುನಾವಣೆ ಆಗಬಹುದು. ಬಿಜೆಪಿ ಶಾಸಕರಾದ ಕೆ.ಎಸ್.ಈಶ್ವರಪ್ಪ (74), ಜಿ.ಎಚ್.ತಿಪ್ಪಾರೆಡ್ಡಿ (77) ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ (71) ಅವರಿಗೆ ಈ ಚುನಾವಣೆಯೇ ಕೊನೆಯಾಗುವ ಸಾಧ್ಯತೆ ಇದೆ. ಈ ಶಾಸಕರಲ್ಲಿ ಅನೇಕರು ಚುನಾವಣಾ ರಾಜಕೀಯವನ್ನು ತ್ಯಜಿಸುವ ತಮ್ಮ ಇಚ್ಛೆಯನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ.
ಈ ಚುನಾವಣೆಯಲ್ಲಿ ಬಿ ಎಸ್ ಯಡಿಯೂರಪ್ಪ ಸ್ಪರ್ಧೆ ಇಲ್ಲಮುಂದಿನ ತಿಂಗಳು 80ನೇ ವರ್ಷಕ್ಕೆ ಕಾಲಿಡಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರವಾದ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.
https://play.google.com/store/apps/details?id=com.speed.newskannada