ಪಂಜಾಬ್ನಲ್ಲಿ ಆರು ದಿನಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಹಿಮಾಚಲ ಪ್ರದೇಶಕ್ಕೆ ಪ್ರವೇಶಿಸಿತು. ಈ ವೇಳೆ ಅಲ್ಲಿನ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪಕ್ಷದ ರಾಜ್ಯಾಧ್ಯಕ್ಷೆ ಪ್ರತಿಭಾ ಸಿಂಗ್ ಮತ್ತು ಇತರ ಪಕ್ಷದ ನಾಯಕರು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದರು. ಶಿಮ್ಲಾ: ಪಂಜಾಬ್ನಲ್ಲಿ ಆರು ದಿನಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಹಿಮಾಚಲ ಪ್ರದೇಶಕ್ಕೆ ಪ್ರವೇಶಿಸಿತು. ಈ ವೇಳೆ ಅಲ್ಲಿನ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪಕ್ಷದ ರಾಜ್ಯಾಧ್ಯಕ್ಷೆ ಪ್ರತಿಭಾ ಸಿಂಗ್ ಮತ್ತು ಇತರ ಪಕ್ಷದ ನಾಯಕರು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದರು.
ಗಡಿ ಗ್ರಾಮವಾದ ಘತೋಟದಲ್ಲಿ ಧ್ವಜ ಹಸ್ತಾಂತರ ಕಾರ್ಯಕ್ರಮ ನಡೆಯಿತು. ರಾಹುಲ್ ಗಾಂಧಿ ಮಾತನಾಡಿ, ‘ಯಾತ್ರೆ ಹಿಮಾಚಲ ಪ್ರದೇಶದ ಮೂಲಕ ಹಾದು ಹೋಗಬೇಕೆಂದು ನೀವು ಕೇಳಿದ್ದೀರಿ. ಹೀಗಾಗಿಯೇ ನಾವು ಸಂಪೂರ್ಣ ಮಾರ್ಗವನ್ನು ಬದಲಾಯಿಸಿದ್ದೇವೆ. ಹಿಮಾಚಲ ಪ್ರದೇಶಕ್ಕೆ ಸ್ವಲ್ಪ ಸಮಯ ಕೊಟ್ಟಿದ್ದೇವೆ.
ಅದು ಒಂದೇ ದಿನ. ಆದರೆ, ಹೆಚ್ಚು ಸಮಯ ಕೊಡಬೇಕಿತ್ತು. ಆದರೆ ಆಗುತ್ತಿಲ್ಲ. ಏಕೆಂದರೆ, ಮಹಾತ್ಮಾ ಗಾಂಧಿಯವರ ಪುಣ್ಯತಿಥಿಯಾದ ಜನವರಿ 30 ರಂದು ಯಾತ್ರೆಯು ಶ್ರೀನಗರವನ್ನು ತಲುಪಬೇಕು ಎಂದು ಹೇಳಿದರು.
ಪಂಜಾಬ್: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿವಿಧಾನಸಭೆ ಚುನಾವಣೆಗೂ ಮುನ್ನ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಭರವಸೆ ನೀಡಿದ್ದೆ. ಅದರಂತೆ ಪಕ್ಷ ಇಲ್ಲಿ ವಿಜಯ ಸಾಧಿಸಿದೆ ಎಂದು ಪ್ರತಿಭಾ ಸಿಂಗ್ ತಿಳಿಸಿದರು. ದೇವ ಭೂಮಿಯಲ್ಲಿ ವಿಜಯ ಪ್ರಾರಂಭವಾಗಿದೆ ಮತ್ತು ಅದೇ ರೀತಿ ನಾವು ಪ್ರತಿ ರಾಜ್ಯದಲ್ಲೂ ಕಾಂಗ್ರೆಸ್ ಧ್ವಜವನ್ನು ಹಾರಿಸುತ್ತೇವೆ ಎಂದು ಅವರು ಹೇಳಿದರು. ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾದ ಮೆರವಣಿಗೆ ಜನವರಿ 30 ರೊಳಗೆ ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದ್ದು, ಜಮ್ಮು ಮತ್ತು ಕಾಶ್ಮೀರದ ರಾಜಧಾನಿಯಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಭಾರತ್ ಜೋಡೋ ಯಾತ್ರೆಗೆ ಯಾವುದೇ ಬೆದರಿಕೆ ಇಲ್ಲ: ಜಮ್ಮು ಮತ್ತು ಕಾಶ್ಮೀರ ಡಿಜಿಪಿಯಾತ್ರೆಯು ಈವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ ಮತ್ತು ಹರಿಯಾಣವನ್ನು ಪೂರೈಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Wed Jan 18 , 2023
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಶಾಲೆಯೊಂದರ ವಿದ್ಯಾರ್ಥಿಗಳಿಗೆ ನೀಡಲಾದ ಮಾದರಿ ಪ್ರಶ್ನೆ ಪತ್ರಿಕೆಯಲ್ಲಿ ‘ಆಜಾದ್ ಕಾಶ್ಮೀರ್’ ಎಂದು ನಕ್ಷೆಯಲ್ಲಿ ಗುರುತಿಸಲು ಕೇಳಲಾಗಿದೆ ಎಂಬ ವರದಿಗಳ ಬಗ್ಗೆ ವಿವಾದ ಭುಗಿಲೆದ್ದಿದೆ. 10ನೇ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಯ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದು ಜಿಹಾದಿ ಪಿತೂರಿ ಎಂದು ಬಿಜೆಪಿ ಹೇಳಿಕೊಂಡಿದೆ. ಪಶ್ಚಿಮ ಬಂಗಾಳದ ಶಾಲೆಯೊಂದರಲ್ಲಿ ಈ ಪ್ರಶ್ನೆ ಪತ್ರಿಕೆಯನ್ನು ನೀಡಲಾಗಿದೆ. ಪತ್ರಿಕೆಯಲ್ಲಿ, ವಿದ್ಯಾರ್ಥಿಗಳಿಗೆ ನಕ್ಷೆಯಲ್ಲಿ ಹಲವಾರು ಸ್ಥಳಗಳನ್ನು […]