ರಾಜಕೀಯ ಕಾರಣಕ್ಕಾಗಿ ಮಹಾರಾಷ್ಟ್ರದಲ್ಲಿ ಗಡಿ ಸಮಸ್ಯೆ ಸೃಷ್ಟಿ (Kannada Bhavana) ಮಾಡಲಾಗುತ್ತಿದೆ. ಕರ್ನಾಟಕ ಎಂದೂ ಗಡಿ ಸಮಸ್ಯೆ ಸೃಷ್ಟಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ನಗರದ ಕನ್ನಡ ಭವನ ಕ್ಷೇಮಾಭಿವೃದ್ಧಿ ಸಂಘದ ಕನ್ನಡ ಭವನ ರಂಗಮಂದಿರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.ರಾಜಕೀಯವಾಗಿ ಗಡಿಯಾಚೆ ಸಮಸ್ಯೆ ಪ್ರಾರಂಭಿಸಿದ್ದಾರೆ. ಕರ್ನಾಟಕದಲ್ಲಿ ಯಾವತ್ತೂ ಹಾಗೆ ಮಾಡಿಲ್ಲ. ಕನ್ನಡಿಗರ ರಕ್ಷಣೆ ಕಾರ್ಯವನ್ನು ಸದಾ ಕಾಲ ಮಾಡಿಕೊಂಡು ಬಂದಿದ್ದೇವೆ. ಕನ್ನಡ ನಾಡಿನಲ್ಲಿ ಹುಟ್ಟಿದವರು ಕನ್ನಡಿಗರೇ. ಸತ್ಯದ ಮಾರ್ಗ ಅನುಸರಿಸಿದಾಗ ಸ್ವರ್ಗದ ದರ್ಶನವಾಗುತ್ತದೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎನ್ನುವುದನ್ನು ಅಕ್ಷರಶಃ ಪಾಲನೆ ಮಾಡಬೇಕು ಎಂದರು.ಕನ್ನಡದಲ್ಲಿ ಪ್ರಾಮಾಣಿಕತೆ, ಒಳ್ಳೆಯತನ ಇದೆ. ಕನ್ನಡದ ಸಾಕ್ಷಿ ಪ್ರಜ್ಞೆ ಮಾನವೀಯತೆಯಿಂದ ಕೂಡಿರುವಂಥದ್ದು. ಕನ್ನಡದ ಪುರಂದರದಾಸರು, ಅಲ್ಲಮಪ್ರಭು, ಬಸವಣ್ಣ, ಅವರಿಂದ ಹರಿದುಬಂದ ಜ್ಞಾನದ ಭಂಡಾರ ಕನ್ನಡಿಗರನ್ನು ಬೆಳೆಸಿದೆ. ಇದನ್ನು ಇನ್ನಷ್ಟು ಉತ್ಕೃಷ್ಟಗೊಳಿಸುವುದು ನಮ್ಮ ಕರ್ತವ್ಯ. ಹೀಗಾಗಿ ಬೆಳಗಾವಿಯಲ್ಲಿ ಅದ್ಭುತ ರಂಗಮಂದಿರವನ್ನು ನಿರ್ಮಿಸಲಾಗಿದೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…