ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

 

ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.ಎಸ್.ಎಂ ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯು ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು 1999 ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ನಡದ ನಟಿಯ ತೆಲುಗು ಸಿನಿಮಾ 100 ಕೋಟಿ ಕಲೆಕ್ಷನ್!

Wed Jan 4 , 2023
  ಇತ್ತೀಚಿನ ಆಕ್ಷನ್ ಎಂಟರ್‌ಟೈನರ್ ಧಮಾಕಾ ಸಿನಿಮಾ ರವಿತೇಜ ಅಭಿನಯದ ಸೂಪರ್ ಹಿಟ್ ಸಿನಿಮಾ.ತ್ರಿನಾಥ ರಾವ್ ನಕ್ಕಿನ ನಿರ್ದೇಶನದ ಮೂವಿಯಲ್ಲಿ ಶ್ರೀಲೀಲಾ ನಟಿಸಿದ್ದಾರೆ. ಸತತ ಎರಡು ಫ್ಲಾಪ್‌ಗಳ ನಂತರ ರವಿತೇಜಗೆ ಈ ಸಿನಿಮಾ ಬ್ರೇಕ್ ಕೊಟ್ಟಿದೆ. ಬಾಕ್ಸ್ ಆಫೀಸ್‌ನಲ್ಲಿ ಚಿತ್ರ 100 ಕೋಟಿ ಗಳಿಕೆ ಸಮೀಪಿಸಿದೆ.ಈ ಚಿತ್ರವನ್ನು ಪೀಪಲ್ಸ್ ಮೀಡಿಯಾ ಫ್ಯಾಕ್ಟರಿ ಮತ್ತು ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಜಂಟಿಯಾಗಿ ನಿರ್ಮಿಸಿದ್ದು, ಕನ್ನಡದ ನಟಿ ಶ್ರೀಲೀಲಾ ನಾಯಕಿ. ಭೀಮ್ ಸಿಸೆರೊಲಿಯೊ ಈ […]

Advertisement

Wordpress Social Share Plugin powered by Ultimatelysocial