ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ದ್ವೇಷ, ಹಿಂಸಾಚಾರ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ. ಪಠಾಣ್ಕೋಟ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ದ್ವೇಷ, ಹಿಂಸಾಚಾರ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯ ಪಂಜಾಬ್ನ ಕೊನೆಯ ದಿನದಂದು ಇಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಒಂದು ಧರ್ಮದ ವಿರುದ್ಧ ಮತ್ತೊಂದು ಧರ್ಮ, ಒಂದು ಜಾತಿಯ ವಿರುದ್ಧ ಮತ್ತೊಂದು ಜಾತಿ ಮತ್ತು ಒಂದು ಭಾಷೆಯ ವಿರುದ್ಧ ಮತ್ತೊಂದು ಭಾಷೆಯು ಹೋರಾಡುವಂತೆ ಮಾಡುತ್ತಿದೆ ಎಂದು ಆರೋಪಿಸಿದರು. ಅವರು ಭಯವನ್ನು ಸೃಷ್ಟಿಸುತ್ತಿದ್ದಾರೆ. ಅವರ ಎಲ್ಲಾ ನೀತಿಗಳು ಯಾರಿಗಾದರೂ ಅಥವಾ ಯಾವುದೋ ಭಯವನ್ನು ಉಂಟುಮಾಡುತ್ತವೆ ಎಂದು ಅವರು ದೂರಿದರು. ಹಿಂದಿನ ಯುಪಿಎ ಸರ್ಕಾರವು ನರೇಗಾ, ಕೃಷಿ ಸಾಲ ಮನ್ನಾ, ನಗರ ನವೀಕರಣ ಮಿಷನ್, ಹಸಿರು ಕ್ರಾಂತಿ, ಶ್ವೇತ ಕ್ರಾಂತಿಯನ್ನು ತಂದಿತು.
ನಾವು ಏನು ಮಾಡಿದರೂ ಭಯವನ್ನು ತೊಡೆದುಹಾಕಲು ಆಗಿತ್ತು. ಆದರೆ, ಬಿಜೆಪಿ ಏನು ಮಾಡಿದರೂ ಭಯವನ್ನು ಹರಡಲು ಆಗಿರುತ್ತದೆ ಎಂದರು. ರೈತರು ಬೆಳಗಿನ ಜಾವ 4 ಗಂಟೆಗೆ ಎದ್ದು ಪ್ರತಿನಿತ್ಯ ಕಷ್ಟಪಟ್ಟು ದೇಶಕ್ಕೆ ಆಹಾರ ನೀಡುತ್ತಾರೆ. ರೈತರಿಗೆ ಪ್ರತಿಯಾಗಿ ಏನನ್ನೂ ಬಯಸುವುದಿಲ್ಲ, ಅವರಿಗೆ ಗೌರವ ಮಾತ್ರ ಬೇಕು.
ಈಗ ರದ್ದಾದ ಮೂರು ಕೃಷಿ ಕಾನೂನುಗಳ ವಿಚಾರವಾಗಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇದು ರೈತರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸಿದೆ. ಕೃಷಿ ಕಾನೂನುಗಳನ್ನು ತಂದರು ಈ ಕಾನೂನುಗಳು ರೈತರಲ್ಲಿ ಭಯ ಮೂಡಿಸಿವೆ ಎಂದು ಕಿಡಿಕಾರಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Thu Jan 19 , 2023
ದಕ್ಷಿಣ ಭಾರತದ ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಯಲ್ಲಿ ಹೊಸದೊಂದು ವಿವಾದ ಸೃಷ್ಟಿಯಾಗಿದ್ದು, ಭಕ್ತರು ನೀಡಿದ ಕಾಣಿಕೆ ಹಣವನ್ನು ಅಯ್ಯಪ ದೇಗುಲದ ಆಡಳಿತ ಮಂಡಳಿ ಸರಿಯಾಗಿ ನಿರ್ವಹಣೆ ಮಾಡದೇ ಹಣ ಹಾಳಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಯಲ್ಲಿ ಹೊಸದೊಂದು ವಿವಾದ ಸೃಷ್ಟಿಯಾಗಿದ್ದು, ಭಕ್ತರು ನೀಡಿದ ಕಾಣಿಕೆ ಹಣವನ್ನು ಅಯ್ಯಪ ದೇಗುಲದ ಆಡಳಿತ ಮಂಡಳಿ ಸರಿಯಾಗಿ ನಿರ್ವಹಣೆ ಮಾಡದೇ ಹಣ ಹಾಳಾಗಿದೆ ಎಂಬ ಆರೋಪ […]