ಉತ್ತರ ಪ್ರದೇಶದ ಹರ್ದೋಯ್ನಲ್ಲಿ ಆಡಳಿತಾರೂಢ ಬಿಜೆಪಿಯ ಸ್ಥಳೀಯ ನಾಯಕರೊಬ್ಬರು ಸಮಾಜವಾದಿ ಪಕ್ಷದ ನಾಯಕರ ಮಗಳಿಗೆ ಆಮಿಷವೊಡ್ಡಿದ್ದಾರೆ ಮತ್ತು ಇತ್ತೀಚೆಗೆ ಆಕೆಯೊಂದಿಗೆ ಓಡಿಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಲಖನೌ: ಉತ್ತರ ಪ್ರದೇಶದ ಹರ್ದೋಯ್ನಲ್ಲಿ ಆಡಳಿತಾರೂಢ ಬಿಜೆಪಿಯ ಸ್ಥಳೀಯ ನಾಯಕರೊಬ್ಬರು ಸಮಾಜವಾದಿ ಪಕ್ಷದ ನಾಯಕರ ಮಗಳಿಗೆ ಆಮಿಷವೊಡ್ಡಿದ್ದಾರೆ ಮತ್ತು ಇತ್ತೀಚೆಗೆ ಆಕೆಯೊಂದಿಗೆ ಓಡಿಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ನೊಂದ ಎಸ್ಪಿ ನಾಯಕ ನೀಡಿದ ದೂರಿನ ಆಧಾರದ ಮೇಲೆ, ಜಿಲ್ಲಾ ಪೊಲೀಸರು ರಾಜಕಾರಣಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರ ಹುಡುಕಾಟ ನಡೆಸಿದ್ದಾರೆ. ಹರ್ದೋಯ್ ಘಟಕದ ಬಿಜೆಪಿ ಕಾರ್ಯದರ್ಶಿ ಆಶಿಶ್ ಶುಕ್ಲಾ (45), ಸ್ಥಳೀಯ ಎಸ್ಪಿ ನಾಯಕನ 25 ವರ್ಷದ ಪುತ್ರಿಯ ಜೊತೆ ಓಡಿಹೋಗಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಯುವತಿಯ ಮದುವೆ ನಿಶ್ಚಯವಾಗಿತ್ತು. ಇಬ್ಬರೂ ನೆರೆಹೊರೆಯವರಾಗಿದ್ದು, ಶುಕ್ಲಾಗೆ ಈಗಾಗಲೇ ಮದುವೆಯಾಗಿದ್ದು, 21 ವರ್ಷದ ಮಗ ಮತ್ತು ಏಳು ವರ್ಷದ ಮಗಳಿದ್ದಾಳೆ.
ಯುವತಿಯ ಮನೆಯವರು ಆಕೆಯ ಮದುವೆಗೆ ತಯಾರಿ ನಡೆಸುತ್ತಿದ್ದು, ಆಕೆ ಶುಕ್ಲಾ ಜೊತೆಗೆ ಒಂದು ವಾರದ ಹಿಂದೆ ಓಡಿಹೋಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈಮಧ್ಯೆ, ಶುಕ್ಲಾ ಅವರನ್ನು ಬಿಜೆಪಿ ರಾಜ್ಯ ಘಟಕವು ಅವರ ಸಾಂಸ್ಥಿಕ ಜವಾಬ್ದಾರಿಗಳಿಂದ ಕೈಬಿಟ್ಟಿತು ಮತ್ತು ಜನವರಿ 12 ರಂದು ಅವರ ಪ್ರಾಥಮಿಕ ಸದಸ್ಯತ್ವದಿಂದಲೂ ಉಚ್ಛಾಟಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Thu Jan 19 , 2023
ನವದೆಹಲಿ: ನಗರದ ಪಶ್ಚಿಮ ವಿಹಾರ್ನ ಪ್ರದೇಶದ ಗೋಡೆಯೊಂದರ ಮೇಲೆ ‘ಖಲಿಸ್ತಾನ್ ಜಿಂದಾಬಾದ್’ ಜನಮತ ಸಂಗ್ರಹ 2020 ಎಂಬ ದೇಶವಿರೋಧಿ ಬರಹಗಳನ್ನು ಬರೆಯಲಾಗಿದೆ. ಖಲಿಸ್ತಾನ್ ಸಂಬಂಧಿತ ಬರಗಳನ್ನು ದೆಹಲಿ ಪೊಲೀಸರು ಗುರುವಾರ ಅಳಿಸಿದ್ದಾರೆ. ಇದು ಭದ್ರತೆಗೆ ಸಂಬಂಧಿಸಿದ ವಿಷಯವಲ್ಲ, ಆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಸ್ಎಫ್ಜೆ (ಸಿಖ್ಸ್ ಫಾರ್ ಜಸ್ಟಿಸ್) ನಿಷೇಧಿತ ಸಂಘಟನೆಯು ತನ್ನನ್ನು ತಾನು ಗುರುತಿಸಿಕೊಳ್ಳಲು ಈ ಕೃತ್ಯ ನಡೆಸಿದೆ ಎಂದು ವರದಿಯಾಗಿದೆ. ಗಣರಾಜ್ಯೋತ್ಸವ ಅಂಗವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ […]