ಫೆಬ್ರವರಿಯಲ್ಲಿ ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ.

ಬೆಂಗಳೂರು : ಕರ್ನಾಟಕದಲ್ಲಿ ಮತದಾರರನ್ನು ಸೆಳೆಯುತ್ತಿರುವ ಬಿಜೆಪಿ ಈಗಾಗಲೇ ರಾಜ್ಯದ ಹಲವು ಕಡೆ ಭರ್ಜರಿ ಸಮಾವೇಶ, ಪ್ರಚಾರ ನಡೆಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಫೆ.6 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಧಾರವಾಡ, ತುಮಕೂರು ಜಿಲ್ಲೆಗೆ ಭೇಟಿ ನೀಡಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಬಳಿಕ ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೆರೇಸಂದ್ರ ಗ್ರಾಮದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಉದ್ಘಾಟನೆಗೆ ಮೋದಿ ಆಗಮಿಸಲಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಬೇಕು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಇತ್ತ, ಫೆಬ್ರುವರಿ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ‌ ದಾವಣಗೆರೆಗೆ ಬರಲಿದ್ದಾರೆ. ದೊಡ್ಡ ಸಮಾವೇಶ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕತ್ತಿಯಿಂದ ಕಡಿದು ಯುವತಿ ಬರ್ಬರ ಕೊಲೆ.

Sun Jan 22 , 2023
ಕತ್ತಿಯಿಂದ ಕಡಿದು ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ದಾರುಣ ಘಟನೆ ವಿರಾಜಪೇಟೆ ಸಮೀಪದ ನಂಗಾಲ ಗ್ರಾಮದಲ್ಲಿ ನಡೆದಿದೆ. ನಂಗಾಲದ ಆರತಿ(೨೪)ಕೊಲೆಯಾದವರು. ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಹೆಲ್ಮೆಟ್ ಪತ್ತೆಯಾಗಿದ್ದು, ತಮ್ಮಯ್ಯ ಎಂಬಾತನಿಗೆ ಸೇರಿದ್ದಾಗಿದೆ. ಕೊಲೆಯಾದ ಅನತಿ ದೂರದಲ್ಲಿ ಆತನ ಬೈಕ್ ಕೂಡ ಪತ್ತೆಯಾಗಿದೆ. ಮೂರು ದಿನಗಳಿಂದ ಆರತಿಗೆ ತಮ್ಮಯ್ಯ ಆತ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು ನಿನ್ನೆ ರಾತ್ರಿ ಆತನೇ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ತಮ್ಮಯ್ಯನ ಮೊಬೈಲ್ […]

Advertisement

Wordpress Social Share Plugin powered by Ultimatelysocial