ಅಂಚೆ ಇಲಾಖೆ ನೇಮಕಾತಿ: SSLC, PUC ಪಾಸಾದವರಿಗೆ ಸುವರ್ಣಾವಕಾಶ

India Post Office Recruitment 2023: ಈ ಬಾರಿ ಪೋಸ್ಟ್‌ಮ್ಯಾನ್, ಮೇಲ್ ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿ ನಡೆಯಲಿದ್ದು, ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆಯಾಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಅಂಚೆ ಇಲಾಖೆಯು 2023 ರಲ್ಲಿ ಹಲವು ಹುದ್ದೆಗಳ ನೇಮಕಾತಿ ನಡೆಸಲಿದೆ. ಪ್ರಸ್ತುತ ಮಾಹಿತಿ ಪ್ರಕಾರ ಈ ಬಾರಿ ಪೋಸ್ಟ್‌ಮ್ಯಾನ್, ಮೈಲ್​ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಿದ್ದು, ಶೀಘ್ರದಲ್ಲೇ ಈ ಕುರಿತಾದ ಅಧಿಸೂಚನೆ ಬಿಡುಗಡೆಯಾಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಪೋಸ್ಟ್​ಮ್ಯಾನ್- 59,099 ಹುದ್ದೆಗಳು
  • ಮೈಲ್​ಗಾರ್ಡ್​- 1,445 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ (MTS)- 37,539 ಹುದ್ದೆಗಳು
  • ಒಟ್ಟು ಹುದ್ದೆಗಳು- 98,083 ಹುದ್ದೆಗಳು

ಕರ್ನಾಟಕದಲ್ಲೂ ಉದ್ಯೋಗಾವಕಾಶ:ಈ ನೇಮಕಾತಿ ಅಡಿಯಲ್ಲಿ ಕರ್ನಾಟಕದಲ್ಲಿ 3887 ಪೋಸ್ಟ್​ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೆಯೇ 90 ಮೈಲ್​ಗಾರ್ಡ್ ಹಾಗೂ 1754 ಮಲ್ಟಿ ಟಾಸ್ಕಿಂಗ್ (MTS) ಹುದ್ದೆಗಳಿಗೂ ಅರ್ಜಿ ಸಲ್ಲಿಸಬಹುದು.ಅರ್ಹತಾ ಮಾನದಂಡಗಳು:ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪಾಸಾಗಿರುವ ಯಾವುದೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ವಯೋಮಿತಿ:ಈ ಉದ್ಯೋಗಗಳಿಗೆ ಕನಿಷ್ಠ 18 ರಿಂದ ಗರಿಷ್ಠ 32 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.ವಿಶೇಷ ಸೂಚನೆ: ಈ ನೇಮಕಾತಿಯ ಅಧಿಕೃತ ಅಧಿಸೂಚನೆಯು ಈ ವಾರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಈ ಪ್ರಕಟಣೆಯ ಬಳಿಕವಷ್ಟೇ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಗಳು ಲಭ್ಯವಾಗಲಿದೆ.ಈ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರ ಹೆಸರು ಇಡುವಂತೆ ಜೆಡಿಎಸ್ ನಾಯಕ ಟಿ.ಎ.ಶರವಣ

Thu Jan 5 , 2023
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರ ಹೆಸರು ಇಡುವಂತೆ ಜೆಡಿಎಸ್ ನಾಯಕ ಟಿ.ಎ.ಶರವಣ ಒತ್ತಾಯಿಸಿದ್ದಾರೆ. ಈ ಹೆದ್ದಾರಿಯ ವೀಕ್ಷಣೆ ಮತ್ತು ವೈಮಾನಿಕ ಸಮೀಕ್ಷೆ ಮಾಡಲು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಬಂದಿದ್ದಾರೆ.ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಿಗೆ ಮನವಿ ಮಾಡಿಕೊಂಡಿರುವ ಶರವಣ.. ಈ ಭಾಗದ ಜನರ ಭಾವನೆಗಳನ್ನು ನೀವು ಅರ್ಥ ಮಾಡಿಕೊಂಡಿದ್ದೆ ಆದರೆ, ಈ ಮಹಾರಸ್ತೆಗೆ ಮಾಜಿ ಪ್ರಧಾನಿ, ಕರ್ನಾಟಕದ ಸಾಕ್ಷಿ ಪ್ರಜ್ಞೆ ಮಾಜಿ […]

Advertisement

Wordpress Social Share Plugin powered by Ultimatelysocial