ಗ್ರಾಮಗಳಲ್ಲಿ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತರಬೇಕು,

 

 

ಜನರು ಗ್ರಾಮಗಳಲ್ಲಿ ಏನೇ ಸಮಸ್ಯೆಗಳು ಇದ್ದರೂ ನನ್ನ ಗಮನಕ್ಕೆ ತರಬೇಕು. ಅಭಿವೃದ್ಧಿ ವಿಚಾರದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ. ಗ್ರಾಮಗಳಲ್ಲಿ ಯಾವ ಅನುಗೊಂಡನಹಳ್ಳಿ:ಕ್ಷೇತ್ರದ ಶಾಸಕನಾದ ಅಲ್ಪಾವಧಿಯಲ್ಲಿಯೇ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸುವ ಹಾಗೂ ನೀರಾವರಿ ಸೌಲಭ್ಯಗಳಿಗೆ ಶಕ್ತಿ ಮೀರಿ ಕೆಲಸ ಮಾಡಿದ್ದೆನೆ. ಮುಂದಿನ ದಿನಗಳಲ್ಲಿಯೂ ಜನರ ಮಧ್ಯದಲ್ಲಿದ್ದು ಕೆಲಸ ಮಾಡುತ್ತೇನೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.
ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ದೇವಲಾಪುರ ಗ್ರಾಮದಲ್ಲಿ ಸಿಸಿ ಚರಂಡಿ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜನರು ಗ್ರಾಮಗಳಲ್ಲಿ ಏನೇ ಸಮಸ್ಯೆಗಳು ಇದ್ದರೂ ನನ್ನ ಗಮನಕ್ಕೆ ತರಬೇಕು. ಅಭಿವೃದ್ಧಿ ವಿಚಾರದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ. ಗ್ರಾಮಗಳಲ್ಲಿ ಯಾವ ಕೆಲಸ ಆಗಬೇಕಿದೆ ಎಂಬುದನ್ನು ಗಮನಕ್ಕೆ ತಂದರೆ ಅನುದಾನ ಬಿಡುಗಡೆ ಮಾಡಿಸುತ್ತೇನೆ. ಅಧಿಕಾರಿಗಳು ಸಹ ರಾಜಕೀಯ ಬಿಟ್ಟು ಜನರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು. ಗ್ರಾಮಗಳಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಪಟ್ಟಿ ನೀಡಿದರೆ ಆದ್ಯತೆ ಮೇಲೆ ಪರಿಗಣಿಸಿ ಅವುಗಳನ್ನು ಪ್ರಾಮಾಣಿಕ ಬಗೆಹರಿಸಿಕೊಡುತ್ತೇನೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬೋಂಡಾ, ದಿನಸಿ ಸುಲಿಗೆ ಮಾಡುತ್ತಿದ್ದ ಮಹಿಳೆ ಬಂಧನ

Wed Jan 11 , 2023
ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಸ್ಥಳೀಯ ಮಾರಾಟಗಾರರಿಂದ ಬೋಂಡಾ ಮತ್ತು ಬಜ್ಜಿ ಸೇರಿದಂತೆ ದಿನಸಿ ಪದಾರ್ಥಗಳನ್ನು ಸುಲಿಗೆ ಮಾಡಿದ್ದಕ್ಕಾಗಿ ಬ್ಯಾಟರಾಯನಪುರದ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಅದೆಷ್ಟೋ ಪೊಲೀಸರು ಬೀದಿ ಬದಿ ವ್ಯಾಪಾರಿಗಳು ಅಥವಾ ಅಂಗಡಿಗಳಿಂದ ಸುಲಿಗೆ ಮಾಡುತ್ತಾರೆ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತವೆ.ಈ ನಿಟ್ಟಿನಲ್ಲಿ ತಾನೂ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಸ್ಥಳೀಯ ಮಾರಾಟಗಾರರಿಂದ ಬೋಂಡಾ ಮತ್ತು ಬಜ್ಜಿ ಸೇರಿದಂತೆ ದಿನಸಿ ಪದಾರ್ಥಗಳನ್ನು ಸುಲಿಗೆ ಮಾಡಿದ್ದಕ್ಕಾಗಿ […]

Advertisement

Wordpress Social Share Plugin powered by Ultimatelysocial