ಚಿಕ್ಕಬಳ್ಳಾಪುರ, ಜನವರಿ 10: ತಾವು ಸೇರಿದಂತೆ ರಾಜ್ಯದ 224 ಶಾಸಕರಲ್ಲಿ ಯಾವ ಕ್ಷೇತ್ರದಲ್ಲಿಯೂ ಮಾಡಲು ಸಾಧ್ಯವಾಗದ ಸಾಹಸವನ್ನು ಸುಧಾಕರ್ ಅವರು ಮಾಡಿ, ಯಶಸ್ವಿ ಮಾಡುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಪ್ರಶಂಸಿಸಿದರು.ಚಿಕ್ಕಬಳ್ಳಾಪುರ ಉತ್ಸವದ 3ನೇ ದಿನದ ಕಾರ್ಯಕ್ರಮದಲ್ಲಿ ಆಹಾರ ಮೇಳ ಮತ್ತು ಮಾದರಿ ಗ್ರಾಮ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಆಹಾರ ಮೇಳ ಮತ್ತು ಫಲಪುಷ್ಪ ಪ್ರದರ್ಶನ ವ್ಯವಸ್ಥಿತವಾಗಿ ಮಾಡಲಾಗಿದೆ. ಜನ ಸಾಮಾನ್ಯರ ಮನಸ್ಸಿಗೆ ತಲುಪ ರೀತಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.ನರೇಗಾ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಲ್ಲಿ ಈ ಪ್ರದರ್ಶನ ಯಶಸ್ವಿಯಾಗಿದೆ. ಸುಧಾಕರ್ ಅವರು ಸಚಿವರಾಗಿ ಮೂರು ವರ್ಷ ಆಗಿದೆ. ಇವರು ಸಚಿವರಾದ ನಂತರ ಸರ್ಕಾರದ ಯೋಜನೆಗಳು ಕ್ಷೇತ್ರಕ್ಕೆ ಮತ್ತು ಜಿಲ್ಲೆಗೆ ಅವರು ಮಾಡಿರುವ ಅಭಿವೃದ್ಧಿ ರಾಜ್ಯದ 224 ಕ್ಷೇತ್ರಗಳ ಯಾವುದೇ ಶಾಸಕರಿಂದ ಸಾಧ್ಯವಿಲ್ಲ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada