ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ನಟ, ಕೊರಿಯೊಗ್ರಾಫರ್ ಪ್ರಭುದೇವ ಅವರ ಜೊತೆ ಸಿನಿಮಾ ಘೋಷಿಸಿದ್ದಾರೆ. ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಈ ಹೊಸ ಸಿನಿಮಾ ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ನಿರ್ಮಾಣಗೊಳ್ಳುತ್ತಿದೆ.
ವಿವಿಧ ಭಾಷೆಗಳ ಕಲಾವಿದರು ಈ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡಲಿದ್ದಾರೆ.
ಸಿನಿಮಾ ಮೇ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳುವ ವಿಶ್ವಾಸವನ್ನು ಸಂದೇಶ್ ನಾಗರಾಜ್ ವ್ಯಕ್ತಪಡಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ ರಿಷಬ್ ಶೆಟ್ಟಿ ಅಭಿನಯದ ‘ಹರಿ ಕಥೆ ಅಲ್ಲ ಗಿರಿಕಥೆ’ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada