ಪ್ರಧಾನಿ ವಿರುದ್ದ ಕೆಸಿಆರ್ ವಾಗ್ದಾಳಿ.

 

ದೇಶದಲ್ಲಿ ಸಾಕಷ್ಟು ಕಲ್ಲಿದ್ದಲು ನಿಕ್ಷೇಪವಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಪವರ್, ಅಂಬಾನಿ ಶಕ್ತಿ .. ಎಂದು ಇಡೀ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಮುಂದಾಗಿದ್ಧಾರೆ ಎಂದು ತೆಲಂಗಾಣದ ಮುಖ್ಯಮಂತ್ರಿ ಹಾಗು ಬಿಆರ್‍ಎಸ್ ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಆರೋಫಿಸಿದ್ದಾರೆ.ದೇಶದ ಎಲ್ಲಾ ವಿದ್ಯುತ್ ಕಂಪನಿಗಳನ್ನು ಖಾಸಗಿ ಕಂಪನಿಗಳಿಗೆ ನೀಡಿದರೆ ಅವರು ಸರ್ಕಾರವನ್ನು ಬ್ಲಾಕ್ ಮೇಲ್ ಮಾಡುತ್ತಾರೆ ಎಂದು ಹೇಳಿದ್ದಾರೆ.ಮಹಾರಾಷ್ಟ್ರದ ನಾಂದೇಡ್‍ನಲ್ಲಿ ನಡೆದ ಭಾರತ್ ರಾಷ್ಟ್ರೀಯ ಸಮಿತಿ ಪಕ್ಷದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಭಾರತದಲ್ಲಿ 361 ಶತಕೋಟಿ ಟನ್‍ಗಳಷ್ಟು ಕಲ್ಲಿದ್ದಲು ನಿಕ್ಷೇಪವಿದೆ, ಖಾಸಗಿ ಕಂಪನಿಗಳ ಬಗ್ಗೆ ಪ್ರಧಾನಿ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.ಪ್ರಧಾನಿ ಮೋದಿ ಇಂದು ಅಧಿಕಾರದಲ್ಲಿದ್ದಾರೆ, ಅವರು ಎಷ್ಟು ಬೇಕಾದರೂ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಬಹುದು ಆದರೆ 2024 ರ ನಂತರ ನಾವು ಅಧಿಕಾರಕ್ಕೆ ಬರುತ್ತೇವೆ ಮತ್ತು ವಿದ್ಯುತ್ ಕ್ಷೇತ್ರ ಖಾಸಗೀಕರಣದಿಂದ ಹಿಂದಕ್ಕೆ ತೆಗೆದುಕೊಳ್ಳುತ್ತೇವೆ ಎಂದಿದ್ಧಾರೆ.ವಿದ್ಯುತ್ ವಲಯವನ್ನು ರಾಷ್ಟ್ರೀಕರಣ ಮಾಡುತ್ತೇವೆ, ಶೇ. 90 ರಷ್ಟು ಸಾರ್ವಜನಿಕ ವಲಯದಲ್ಲಿ ಇಡುತ್ತೇವೆ ಎಂದು ಅವರು ತಿಳಿಸಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ, ದೇಶದ ಅನೇಕ ಸ್ಥಳಗಳಿಗೆ ಕುಡಿಯುವ ನೀರು ಮತ್ತು ನೀರಾವರಿಗೆ ನೀರು ಲಭ್ಯವಿಲ್ಲ. ಅದರಲ್ಲಿಯೂ ಮಹಾರಾಷ್ಟ್ರ ಅತಿ ಹೆಚ್ಚು ಇಲ್ಲ ಎನ್ನುತ್ತಿರುವುದು ಬೇಸರದ ಸಂಗತಿ ಎಂದಿದ್ದಾರೆ.ಮಹಾರಾಷ್ಟ್ರದ ನಾಂದೇಡ್‍ನಲ್ಲಿ ಹೆಚ್ಚಾಗುತ್ತಿವೆ ಎಂದು ಅವರು ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರದ ವಇರುದ್ದ ವಾಗ್ದಾಳಿ ನಡೆಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇನ್ಫೋಸಿಸ್ ನಲ್ಲಿ ೬೦೦ ಉದ್ಯೋಗಿಗಳ ವಜಾ.

Mon Feb 6 , 2023
ಐಟಿ ಸಂಸ್ಥೆಗಳು ಉದ್ಯೋಗಿಗಳನ್ನು ವಜಾಗೊಳಿಸುವ ಸರಣಿ ಮುಂದುವರೆದಿದ್ದು, ಇದೀಗ ದೇಶ ಪ್ರಸಿದ್ಧ ಇನ್ಫೋಸಿಸ್ ಸಂಸ್ಥೆ ಕೂಡ ಸುಮಾರು ೬೦೦ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ.ಕಳೆದ ಕೆಲವು ತಿಂಗಳುಗಳಲ್ಲಿ ಎಫ್ ಎ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ನಂತರ ಸುಮಾರು ೬೦೦ ಫ್ರೆಶರ್‌ಗಳನ್ನು ವಜಾ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಹೊಸ ಉದ್ಯೋಗಿಗಳನ್ನು ಆಂತರಿಕ ಫ್ರೆಶರ್ ಮೌಲ್ಯಮಾಪನ (ಎಫ್‌ಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ಕಾರಣ ಅವರನ್ನು ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ.ಆಗಸ್ಟ್ ೨೦೨೨ […]

Advertisement

Wordpress Social Share Plugin powered by Ultimatelysocial