ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ನಗರ ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಕಾರಣದಿಂದ ಶಾಂತಿ ಸೌಹಾರ್ದತೆ ಕಾಪಾಡುವ ದೃಷ್ಠಿಯಿಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ನಗರ ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳ್ಳಾರೆ ಮಸೂದ್, ಪ್ರವೀಣ್ ನೆಟ್ಟಾರು ಮತ್ತು ಫಾಝಿಲ್ ಕೊಲೆ ಪ್ರಕರಣಗಳಿಂದ ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನಿರ್ಬಂಧ ಹೇರಲಾಗಿತ್ತು. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು, ಮಂಗಳೂರು ನಗರ ಸಹಿತ ಪೊಲೀಸ್ ಕಮಿಷನರೆಟ್ ವ್ಯಾಪ್ತಿಗೆ ಪ್ರವೇಶಿಸುವುದಕ್ಕೆ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ಹೇರಿ ಗುರುವಾರ ಆದೇಶ ಹೊರಡಿಸಿದ್ದರು.

ಅದಾಗ್ಯೂ ಜಿಲ್ಲೆಗೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಗಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಆಯುಕ್ತ ಶಶಿಕುಮಾರ್, ಪ್ರಮೋದ್ ಮುತಾಲಿಕ್ ಅವರು ಪ್ರವೀಣ್ ನೆಟ್ಟಾರೆ ಮನೆಗೆ ಭೇಟಿ ನೀಡುವ ಉದ್ದೇಶ ಹೊಂದಿದ್ದರು. ಇದರ ಬಗ್ಗೆ ಮಾಹಿತಿ ದೊರೆತ ಕಾರಣ ನಾವು ನಿರ್ಬಂಧ ಹೇರಿದ್ದೆವು. ಅವರು ಇಂದು ಬೆಳಗ್ಗೆ ಉಡುಪಿಗೆ ಬಂದ ಮಾಹಿತಿ ಲಭ್ಯವಾಗಿತ್ತು. ಕಮಿಷನರೇಟ್ ವ್ಯಾಪ್ತಿಗೆ ಪ್ರವೇಶಿಸಿದ ಕೂಡಲೇ ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಅವರನ್ನು ವಶಕ್ಕೆ ಪಡೆದಿದ್ದೇವೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

Букмекер Mostbe

Fri Jul 29 , 2022
Букмекер Mostbet Что из себя представляет Mostbet Content Редакция рекомендует: бесплатное посещение и денежный приз на игровой баланс компьютерного клуба Казани Отзывы пользователей о Mostbet (МостБет) Букмекерская контора Mostbet mostbet Мостбет букмекерская контора официальный сайт Слоты Мостбет Отзывы о Mostbet Сайт букмекера и личный кабинет клиента Максимальная и минимальная ставки […]

Advertisement

Wordpress Social Share Plugin powered by Ultimatelysocial