ಮನಸೂರೆಗೊಳ್ಳುತ್ತಿದೆ ಮನುರಂಜನ್ ರವಿಚಂದ್ರನ್ ಅಭಿನಯದ “ಪ್ರಾರಂಭ” ಚಿತ್ರದ ಆಹ್ವಾನ ಪತ್ರಿಕೆ.

ಬಹು ನಿರೀಕ್ಷಿತ ಈ ಚಿತ್ರ ಮೇ 13ರಂದು ರಂದು ತೆರೆಗೆ.

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ “ಪ್ರಾರಂಭ” ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನು ಆಹ್ವಾನಿಸುವ ವಿಶೇಷ ಆಹ್ವಾನ ಪತ್ರಿಕೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮದುವೆಯ ಆಮಂತ್ರಣ ಪತ್ರಿಕೆ ಶೈಲಿಯಲ್ಲಿ ಇದು ನಿರ್ಮಾಣವಾಗಿದೆ.‌ ಈ ಆಹ್ವಾನ ಪತ್ರಿಕೆ ನೋಡಿ ಮನುರಂಜನ್ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಮನುರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಕಲ್ಕೇರಿ ಅಭಿನಯಿಸಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಯನ್ನು ಮನು ಕಲ್ಯಾಡಿ ಅವರೆ ಬರೆದಿದ್ದಾರೆ.

ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರವಿ ವಡ್ಡೇರಹಳ್ಳಿ ಈ ಚಿತ್ರದ ಸಹ ನಿರ್ಮಾಪಕು. ಪ್ರಜ್ವಲ್ ಪೈ ಸಂಗೀತ ನಿರ್ದೇಶನ, ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಸಂಕಲನ ಹಾಗೂ ಥ್ರಿಲ್ಲರ್ ‌ಮಂಜು, ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೊಸಬರ "ಹುಲಿಭೇಟೆ" ಗೆ ಸಾಥ್ ನೀಡಿದ ಗಣ್ಯರು. ಈಗ ಟೀಸರ್ ಬಂದಿದೆ. ಮಾಸಾಂತ್ಯಕ್ಕೆ ಸಿನಿಮಾ ಬರಲಿದೆ‌

Thu May 5 , 2022
ಹೊಸ ಯುವ ಉತ್ಸಾಹಿ ತಂಡದ ಸಮಾಗಮದಲ್ಲಿ “ಹುಲಿಭೇಟೆ ಚಿತ್ರ ತಯಾರಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಸಾ.ರಾ.ಗೋವಿಂದು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಕೆ.ಎಂ.ವೀರೇಶ್ ಮುಂತಾದ ಗಣ್ಯರು ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಾನು ಚಿತ್ರ ಆರಂಭಿಸಿದಾಗ ಕೆಲವು ಅಡೆತಡೆಗಳು ಎದುರಾದವು. ಮಕ್ಕಳಿಗೆ ಕಷ್ಟ ಬಂದಾಗ ಮೊದಲು […]

Advertisement

Wordpress Social Share Plugin powered by Ultimatelysocial