ಎರಡು ವರ್ಷ ಸ್ಯಾಂಡಲ್ ವುಡ್ ಗೆ ಬರಲ್ಲ ಪ್ರಶಾಂತ್ ನೀಲ್!

ಬೆಂಗಳೂರು: ಕೆಜಿಎಫ್ ಸಿನಿಮಾ ಮೂಲಕ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಈಗ ಅತ್ಯಂತ ಬ್ಯುಸಿ ನಿರ್ದೇಶಕ.
ಸದ್ಯಕ್ಕೆ ಪ್ರಶಾಂತ್ ತೆಲುಗಿನಲ್ಲಿ ಎರಡು ಸಿನಿಮಾ ಮಾಡುತ್ತಿದ್ದಾರೆ. ಈ ಪೈಕಿ ಸಲಾರ್ ಚಿತ್ರೀಕರಣ ಹಂತದಲ್ಲಿದ್ದು, ಈ ವರ್ಷವೇ ಬಿಡುಗಡೆಯಾಗುವ ಸಾಧ‍್ಯತೆಯಿದೆ. ಇದಲ್ಲದೆ ಜೂ. ಎನ್ ಟಿಆರ್ ಜೊತೆಗೆ ಮೊನ್ನೆಯಷ್ಟೇ ಹೊಸ ಸಿನಿಮಾ ಘೋಷಣೆಯಾಗಿದ್ದು, ಇದು ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ.

ಹೀಗಾಗಿ ಮುಂದಿನ ಎರಡು ವರ್ಷಗಳಿಗೆ ಪ್ರಶಾಂತ್ ತೆಲುಗಿನಲ್ಲೇ ಬ್ಯುಸಿಯಾಗಿರಲಿದ್ದು, ಸ್ಯಾಂಡಲ್ ವುಡ್ ಗೆ ಮರಳುವುದು ಅನುಮಾನ. ಹಾಗಿದ್ದರೂ ಶ್ರೀಮುರಳಿ ಅಭಿನಯದ ಬಘೀರ ಸಿನಿಮಾದ ಕತೆ ಬರೆಯುವ ಮೂಲಕ ಸ್ಯಾಂಡಲ್ ವುಡ್ ನಂಟನ್ನು ಸಂಪೂರ್ಣವಾಗಿ ಬಿಟ್ಟಿಲ್ಲ ಎಂದು ತೋರಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಭಾಸ್-ಅನುಷ್ಕಾ ಮದುವೆಯಾಗುವವರೆಗೆ ನಾನೂ ಮದುವೆಯಾಗಲ್ಲ ಎಂದು ಪ್ರತಿಜ್ಞೆ ಮಾಡಿರುವ ನಟ!

Mon May 23 , 2022
ಹೈದರಾಬಾದ್: ಟಾಲಿವುಡ್ ಮೋಸ್ಟ್ ವಾಂಟೆಡ್ ಜೋಡಿ ಪ್ರಭಾಸ್-ಅನುಷ್ಕಾ ಶೆಟ್ಟಿ ಮದುವೆಯಾಗಬೇಕು ಎಂದು ಫ್ಯಾನ್ಸ್ ಬಹಳ ದಿನಗಳಿಂದ ಆಗ್ರಹಿಸುತ್ತಲೇ ಇದ್ದಾರೆ. ಆದರೆ ಇಬ್ಬರ ಕಡೆಯಿಂದಲೂ ಇದುವರೆಗೆ ಮದುವೆ ಸುದ್ದಿ ಬಂದಿಲ್ಲ. ಈ ನಡುವೆ ಟಾಲಿವುಡ್ ನಟ ಅದಿವಿ ಸೇಷ್ ಪ್ರಭಾಸ್-ಅನುಷ್ಕಾ ಮದುವೆಯಾಗುವವರೆಗೂ ಮದುವೆಯಾಗಲ್ಲ ಎಂದು ಪ್ರತಿಜ್ಞೆ ಮಾಡಿಕೊಂಡಿದ್ದಾರೆ! ತಮ್ಮ ಮುಂಬರುವ ಪ್ಯಾನ್ ಇಂಡಿಯಾ ಸಿನಿಮಾ ಮೇಜರ್ ಪ್ರಮೋಷನ್ ನಲ್ಲಿ ಪತ್ರಕರ್ತರು ಮದುವೆ ಯಾವಾಗ ಎಂದು ಕೇಳಿದ್ದಕ್ಕೆ ಅದಿವಿ ಪ್ರಭಾಸ್, ಅನುಷ್ಕಾ ಮದುವೆಯಾಗುವವರೆಗೂ […]

Advertisement

Wordpress Social Share Plugin powered by Ultimatelysocial